AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ 41 ಜನ ಶಾಸಕರು: ಕೈಲಾಶ್​ ವಿಜಯ್​ ವರ್ಗೀಯಾ ಹೊಸ ಬಾಂಬ್

ಈ ಕ್ಷಣವೇ ನಮ್ಮ ಸಂಪರ್ಕದಲ್ಲಿರುವ ಟಿಎಂಸಿ ಶಾಸಕರನ್ನು ಸೇರಿಸಿಕೊಂಡರೂ ಸರ್ಕಾರ ಉರುಳಲಿದೆ. ಆದರೆ, ನಾವು ಎಲ್ಲರನ್ನೂ ತೆಗೆದುಕೊಳ್ಳುವುದಿಲ್ಲ. ಯಾರು ಶುದ್ಧ ಹಸ್ತರಿರುತ್ತಾರೋ ಅವರನ್ನು ಮಾತ್ರ ಬರಮಾಡಿಕೊಳ್ಳುತ್ತೇವೆ..

ಬಿಜೆಪಿ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ 41 ಜನ ಶಾಸಕರು: ಕೈಲಾಶ್​ ವಿಜಯ್​ ವರ್ಗೀಯಾ ಹೊಸ ಬಾಂಬ್
ಕೈಲಾಶ್​ ವಿಜಯ್​ವರ್ಗೀಯಾ ಮತ್ತು ಮಮತಾ ಬ್ಯಾನರ್ಜಿ
Skanda
| Edited By: |

Updated on: Jan 15, 2021 | 4:04 PM

Share

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಕಾವು ಈಗಾಗಲೇ ಶುರುವಾಗಿದೆ. ಬಿಜೆಪಿಯನ್ನು ಮಟ್ಟಹಾಕಲು ಕಾಂಗ್ರೆಸ್​ ಮತ್ತು ಎಡಪಕ್ಷಗಳು ಮಮತಾ ಬ್ಯಾನರ್ಜಿಯನ್ನು ಹಿಂಬಾಲಿಸಲಿ ಎಂದು ಟಿಎಂಸಿ ಸಂಸದ ನಿನ್ನೆಯಷ್ಟೇ ಹೇಳಿಕೆ ನೀಡಿದ್ದರು. ವಿಪರ್ಯಾಸವೆಂದರೆ ಬಿಜೆಪಿಗೂ ಮುನ್ನವೇ ಕಾಂಗ್ರೆಸ್​ ಇದನ್ನು ವಿರೋಧಿಸಿ ಟಿಎಂಸಿಯನ್ನು ಮುಜುಗರಕ್ಕೆ ಸಿಲುಕಿಸಿತ್ತು.

ಇದೀಗ ಬಿಜೆಪಿಯ ರಾಷ್ಟ್ರ ಮಟ್ಟದ ಮುಖ್ಯ ಕಾರ್ಯದರ್ಶಿ ಕೈಲಾಶ್​ ವಿಜಯ್​ ವರ್ಗೀಯಾ ಹೊಸದೊಂದು ಬಾಂಬ್​ ಸಿಡಿಸಿದ್ದು, ಟಿಎಂಸಿ ಪಕ್ಷದ 41 ಶಾಸಕರು ಬಿಜೆಪಿ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಹೇಳಿದ್ದಾರೆ. ಮಮತಾ ಬ್ಯಾನರ್ಜಿ ಸರ್ಕಾರದಲ್ಲಿರುವ ಶಾಸಕರು ಬಿಜೆಪಿಗೆ ಬರಲು ಉತ್ಸುಕರಾಗಿದ್ದಾರೆ. ನಾವೇನಾದರೂ ಈಗಲೇ ಒಪ್ಪಿದರೆ ಮಮತಾ ಸರ್ಕಾರ ಪತನಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಟಿಎಂಸಿ ಪಕ್ಷ ಹೀನಾಯವಾಗಿ ಸೋಲಲಿದೆ. ಪ. ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೇರುವುದು ಖಚಿತ. ಈ ಕ್ಷಣವೇ ನಮ್ಮ ಸಂಪರ್ಕದಲ್ಲಿರುವ ಶಾಸಕರನ್ನು ಸೇರಿಸಿಕೊಂಡರೂ ಸರ್ಕಾರ ಉರುಳಲಿದೆ. ಆದರೆ, ನಾವು ಎಲ್ಲರನ್ನೂ ತೆಗೆದುಕೊಳ್ಳುವುದಿಲ್ಲ. ಯಾರು ಶುದ್ಧ ಹಸ್ತರಿರುತ್ತಾರೋ ಅವರನ್ನು ಮಾತ್ರ ಬರಮಾಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಬರೀ ಸುಳ್ಳು ಹೇಳುವುದೇ ಕೆಲಸ. ರಾಜ್ಯದಲ್ಲಿ ಉಚಿತವಾಗಿ ಕೊರೊನಾ ಲಸಿಕೆ ವಿತರಿಸುತ್ತೇವೆ ಎಂದು ಘೋಷಿಸಿದ್ದಾರೆ. ಆದರೆ, ಕೇಂದ್ರ ಸರ್ಕಾರ ಕೊರೊನಾ ಲಸಿಕೆಗಳ ವೆಚ್ಚವನ್ನು ಭರಿಸುತ್ತಿದೆ ಎನ್ನುವ ಸತ್ಯವನ್ನು ಹೇಳುವುದೇ ಇಲ್ಲ. ಬಿಜೆಪಿ ಅಧಿಕಾರಕ್ಕೆ ಬಂದರೆ ಕೊಳ್ಳೆ ಹೊಡೆಯುವುದಕ್ಕೆ ಅಡ್ಡಿಯಾಗುತ್ತದೆ ಎಂಬ ಆತಂಕ ಅವರಿಗಿದೆ. ಆದ್ದರಿಂದಲೇ ಬಿಜೆಪಿ ಕಾರ್ಯಕರ್ತರನ್ನು ಹೆದರಿಸಿ, ಬೆದರಿಸಿ ಬಾಯಿಮುಚ್ಚಿಸುವ ಯತ್ನಕ್ಕೆ ಕೈ ಹಾಕುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಬಿಜೆಪಿ ಪಾಪಗಳನ್ನು ತೊಳೆಯುವ ವಾಶಿಂಗ್ ಮಶೀನ್.. ಭ್ರಷ್ಟರನ್ನೂ ಸಾಧುಗಳನ್ನಾಗಿಸುತ್ತದೆ: ಮಮತಾ ಬ್ಯಾನರ್ಜಿ ವ್ಯಂಗ್ಯ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ