AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ 41 ಜನ ಶಾಸಕರು: ಕೈಲಾಶ್​ ವಿಜಯ್​ ವರ್ಗೀಯಾ ಹೊಸ ಬಾಂಬ್

ಈ ಕ್ಷಣವೇ ನಮ್ಮ ಸಂಪರ್ಕದಲ್ಲಿರುವ ಟಿಎಂಸಿ ಶಾಸಕರನ್ನು ಸೇರಿಸಿಕೊಂಡರೂ ಸರ್ಕಾರ ಉರುಳಲಿದೆ. ಆದರೆ, ನಾವು ಎಲ್ಲರನ್ನೂ ತೆಗೆದುಕೊಳ್ಳುವುದಿಲ್ಲ. ಯಾರು ಶುದ್ಧ ಹಸ್ತರಿರುತ್ತಾರೋ ಅವರನ್ನು ಮಾತ್ರ ಬರಮಾಡಿಕೊಳ್ಳುತ್ತೇವೆ..

ಬಿಜೆಪಿ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ 41 ಜನ ಶಾಸಕರು: ಕೈಲಾಶ್​ ವಿಜಯ್​ ವರ್ಗೀಯಾ ಹೊಸ ಬಾಂಬ್
ಕೈಲಾಶ್​ ವಿಜಯ್​ವರ್ಗೀಯಾ ಮತ್ತು ಮಮತಾ ಬ್ಯಾನರ್ಜಿ
Skanda
| Edited By: |

Updated on: Jan 15, 2021 | 4:04 PM

Share

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಕಾವು ಈಗಾಗಲೇ ಶುರುವಾಗಿದೆ. ಬಿಜೆಪಿಯನ್ನು ಮಟ್ಟಹಾಕಲು ಕಾಂಗ್ರೆಸ್​ ಮತ್ತು ಎಡಪಕ್ಷಗಳು ಮಮತಾ ಬ್ಯಾನರ್ಜಿಯನ್ನು ಹಿಂಬಾಲಿಸಲಿ ಎಂದು ಟಿಎಂಸಿ ಸಂಸದ ನಿನ್ನೆಯಷ್ಟೇ ಹೇಳಿಕೆ ನೀಡಿದ್ದರು. ವಿಪರ್ಯಾಸವೆಂದರೆ ಬಿಜೆಪಿಗೂ ಮುನ್ನವೇ ಕಾಂಗ್ರೆಸ್​ ಇದನ್ನು ವಿರೋಧಿಸಿ ಟಿಎಂಸಿಯನ್ನು ಮುಜುಗರಕ್ಕೆ ಸಿಲುಕಿಸಿತ್ತು.

ಇದೀಗ ಬಿಜೆಪಿಯ ರಾಷ್ಟ್ರ ಮಟ್ಟದ ಮುಖ್ಯ ಕಾರ್ಯದರ್ಶಿ ಕೈಲಾಶ್​ ವಿಜಯ್​ ವರ್ಗೀಯಾ ಹೊಸದೊಂದು ಬಾಂಬ್​ ಸಿಡಿಸಿದ್ದು, ಟಿಎಂಸಿ ಪಕ್ಷದ 41 ಶಾಸಕರು ಬಿಜೆಪಿ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಹೇಳಿದ್ದಾರೆ. ಮಮತಾ ಬ್ಯಾನರ್ಜಿ ಸರ್ಕಾರದಲ್ಲಿರುವ ಶಾಸಕರು ಬಿಜೆಪಿಗೆ ಬರಲು ಉತ್ಸುಕರಾಗಿದ್ದಾರೆ. ನಾವೇನಾದರೂ ಈಗಲೇ ಒಪ್ಪಿದರೆ ಮಮತಾ ಸರ್ಕಾರ ಪತನಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಟಿಎಂಸಿ ಪಕ್ಷ ಹೀನಾಯವಾಗಿ ಸೋಲಲಿದೆ. ಪ. ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೇರುವುದು ಖಚಿತ. ಈ ಕ್ಷಣವೇ ನಮ್ಮ ಸಂಪರ್ಕದಲ್ಲಿರುವ ಶಾಸಕರನ್ನು ಸೇರಿಸಿಕೊಂಡರೂ ಸರ್ಕಾರ ಉರುಳಲಿದೆ. ಆದರೆ, ನಾವು ಎಲ್ಲರನ್ನೂ ತೆಗೆದುಕೊಳ್ಳುವುದಿಲ್ಲ. ಯಾರು ಶುದ್ಧ ಹಸ್ತರಿರುತ್ತಾರೋ ಅವರನ್ನು ಮಾತ್ರ ಬರಮಾಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಬರೀ ಸುಳ್ಳು ಹೇಳುವುದೇ ಕೆಲಸ. ರಾಜ್ಯದಲ್ಲಿ ಉಚಿತವಾಗಿ ಕೊರೊನಾ ಲಸಿಕೆ ವಿತರಿಸುತ್ತೇವೆ ಎಂದು ಘೋಷಿಸಿದ್ದಾರೆ. ಆದರೆ, ಕೇಂದ್ರ ಸರ್ಕಾರ ಕೊರೊನಾ ಲಸಿಕೆಗಳ ವೆಚ್ಚವನ್ನು ಭರಿಸುತ್ತಿದೆ ಎನ್ನುವ ಸತ್ಯವನ್ನು ಹೇಳುವುದೇ ಇಲ್ಲ. ಬಿಜೆಪಿ ಅಧಿಕಾರಕ್ಕೆ ಬಂದರೆ ಕೊಳ್ಳೆ ಹೊಡೆಯುವುದಕ್ಕೆ ಅಡ್ಡಿಯಾಗುತ್ತದೆ ಎಂಬ ಆತಂಕ ಅವರಿಗಿದೆ. ಆದ್ದರಿಂದಲೇ ಬಿಜೆಪಿ ಕಾರ್ಯಕರ್ತರನ್ನು ಹೆದರಿಸಿ, ಬೆದರಿಸಿ ಬಾಯಿಮುಚ್ಚಿಸುವ ಯತ್ನಕ್ಕೆ ಕೈ ಹಾಕುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಬಿಜೆಪಿ ಪಾಪಗಳನ್ನು ತೊಳೆಯುವ ವಾಶಿಂಗ್ ಮಶೀನ್.. ಭ್ರಷ್ಟರನ್ನೂ ಸಾಧುಗಳನ್ನಾಗಿಸುತ್ತದೆ: ಮಮತಾ ಬ್ಯಾನರ್ಜಿ ವ್ಯಂಗ್ಯ

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!