AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಪ್ರತಿಭಟನೆ ಬೆನ್ನಲ್ಲೇ ಬಿಜೆಪಿಗೆ ಶಾಕ್​ ನೀಡಿದ ಮತದಾರರು

ಹರಿಯಾಣದ ಸೋನಿಪತ್​ ಹಾಗೂ ಅಂಬಾಲಾದಲ್ಲಿ ನಗರ ಚುನಾವಣೆ ನಡೆದಿತ್ತು. ಈ ವೇಳೆ ಆಡಳಿತಾರೂಢ ಬಿಜೆಪಿ ಮೇಯರ್​ ಸ್ಥಾನವನ್ನು ಕಳೆದುಕೊಂಡಿದೆ.

ರೈತರ ಪ್ರತಿಭಟನೆ ಬೆನ್ನಲ್ಲೇ ಬಿಜೆಪಿಗೆ ಶಾಕ್​ ನೀಡಿದ ಮತದಾರರು
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 30, 2020 | 10:07 PM

Share

ಚಂಡೀಗಡ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ವಿರೋಧಿಸಿ ದೆಹಲಿ ಗಡಿಯಲ್ಲಿ ರೈತರು ಭಾರೀ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ಪರಿಣಾಮ ಹರಿಯಾಣ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮೇಲೆ ಉಂಟಾಗಿದೆ. ಈ ಚುನಾವಣೆಯಲ್ಲಿ ಬಿಜೆಪಿ ಭಾರೀ ಹಿನ್ನಡೆ ಅನುಭವಿಸಿದೆ.

ಹರಿಯಾಣದ ಸೋನಿಪತ್​ ಹಾಗೂ ಅಂಬಾಲಾದಲ್ಲಿ ನಗರಪಾಲಿಕೆ ಚುನಾವಣೆ ನಡೆದಿತ್ತು. ಎರಡೂ ಕಡೆ ಆಡಳಿತಾರೂಢ ಬಿಜೆಪಿ ಮೇಯರ್​ ಸ್ಥಾನವನ್ನು ಕಳೆದುಕೊಂಡಿದೆ. ಅಂಬಾಲ, ಪಂಚಕುಲಾ, ಸೋನಿಪತ್​, ಧರುಹೆರಾ, ಸಂಪ್ಲಾ, ಉಕ್ಲಾನಾದಲ್ಲಿ ಭಾನುವಾರ ಮತದಾನ ನಡೆದಿತ್ತು. ಇಂದು ಮತ ಎಣಿಕೆ ನಡೆದಿದೆ. ಈ ವೇಳೆ ಸೋನಿಪತ್​ನಲ್ಲಿ ಕಾಂಗ್ರೆಸ್​ 14 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದೆ.

ಕೇಂದ್ರ ಸರ್ಕಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಬಿಜೆಪಿ ಸೋಲಿಗೆ ಕಾರಣ ಎಂದು ಕಾಂಗ್ರೆಸ್​ ಹೇಳಿದೆ.

ಅಂಬಾಲಾದಲ್ಲಿ ಜನಚೇತನ ಪಕ್ಷ ಗೆದ್ದಿದೆ. ಪಂಚಕುಲದಲ್ಲಿ ಮತ ಎಣಿಕೆ ಇನ್ನೂ ನಡೆಯುತ್ತಿದ್ದು, ಬಿಜೆಪಿ ಮುಂದಿದೆ. ಬಲವಾದ ಗ್ರಾಮೀಣ ನೆಲೆಯನ್ನು ಹೊಂದಿರುವ ಬಿಜೆಪಿ ಮೈತ್ರಿ ಪಕ್ಷ ಜೆಜೆಪಿ, ಧರುಹೆರಾ ಮತ್ತು ಉಕ್ಲಾನಾದಲ್ಲಿ ಸೋತಿದೆ.

ಪಂಜಾಬ್​ ರೈತರ ಬೇಡಿಕೆಗಳಿಗೆ ಭಾಗಶಃ ಒಪ್ಪಿಗೆ: ಜನವರಿ ನಾಲ್ಕಕ್ಕೆ ಮತ್ತೊಂದು ಸಭೆ

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ