AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಪ್ರತಿಭಟನೆ ಬೆನ್ನಲ್ಲೇ ಬಿಜೆಪಿಗೆ ಶಾಕ್​ ನೀಡಿದ ಮತದಾರರು

ಹರಿಯಾಣದ ಸೋನಿಪತ್​ ಹಾಗೂ ಅಂಬಾಲಾದಲ್ಲಿ ನಗರ ಚುನಾವಣೆ ನಡೆದಿತ್ತು. ಈ ವೇಳೆ ಆಡಳಿತಾರೂಢ ಬಿಜೆಪಿ ಮೇಯರ್​ ಸ್ಥಾನವನ್ನು ಕಳೆದುಕೊಂಡಿದೆ.

ರೈತರ ಪ್ರತಿಭಟನೆ ಬೆನ್ನಲ್ಲೇ ಬಿಜೆಪಿಗೆ ಶಾಕ್​ ನೀಡಿದ ಮತದಾರರು
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 30, 2020 | 10:07 PM

Share

ಚಂಡೀಗಡ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ವಿರೋಧಿಸಿ ದೆಹಲಿ ಗಡಿಯಲ್ಲಿ ರೈತರು ಭಾರೀ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ಪರಿಣಾಮ ಹರಿಯಾಣ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮೇಲೆ ಉಂಟಾಗಿದೆ. ಈ ಚುನಾವಣೆಯಲ್ಲಿ ಬಿಜೆಪಿ ಭಾರೀ ಹಿನ್ನಡೆ ಅನುಭವಿಸಿದೆ.

ಹರಿಯಾಣದ ಸೋನಿಪತ್​ ಹಾಗೂ ಅಂಬಾಲಾದಲ್ಲಿ ನಗರಪಾಲಿಕೆ ಚುನಾವಣೆ ನಡೆದಿತ್ತು. ಎರಡೂ ಕಡೆ ಆಡಳಿತಾರೂಢ ಬಿಜೆಪಿ ಮೇಯರ್​ ಸ್ಥಾನವನ್ನು ಕಳೆದುಕೊಂಡಿದೆ. ಅಂಬಾಲ, ಪಂಚಕುಲಾ, ಸೋನಿಪತ್​, ಧರುಹೆರಾ, ಸಂಪ್ಲಾ, ಉಕ್ಲಾನಾದಲ್ಲಿ ಭಾನುವಾರ ಮತದಾನ ನಡೆದಿತ್ತು. ಇಂದು ಮತ ಎಣಿಕೆ ನಡೆದಿದೆ. ಈ ವೇಳೆ ಸೋನಿಪತ್​ನಲ್ಲಿ ಕಾಂಗ್ರೆಸ್​ 14 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದೆ.

ಕೇಂದ್ರ ಸರ್ಕಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಬಿಜೆಪಿ ಸೋಲಿಗೆ ಕಾರಣ ಎಂದು ಕಾಂಗ್ರೆಸ್​ ಹೇಳಿದೆ.

ಅಂಬಾಲಾದಲ್ಲಿ ಜನಚೇತನ ಪಕ್ಷ ಗೆದ್ದಿದೆ. ಪಂಚಕುಲದಲ್ಲಿ ಮತ ಎಣಿಕೆ ಇನ್ನೂ ನಡೆಯುತ್ತಿದ್ದು, ಬಿಜೆಪಿ ಮುಂದಿದೆ. ಬಲವಾದ ಗ್ರಾಮೀಣ ನೆಲೆಯನ್ನು ಹೊಂದಿರುವ ಬಿಜೆಪಿ ಮೈತ್ರಿ ಪಕ್ಷ ಜೆಜೆಪಿ, ಧರುಹೆರಾ ಮತ್ತು ಉಕ್ಲಾನಾದಲ್ಲಿ ಸೋತಿದೆ.

ಪಂಜಾಬ್​ ರೈತರ ಬೇಡಿಕೆಗಳಿಗೆ ಭಾಗಶಃ ಒಪ್ಪಿಗೆ: ಜನವರಿ ನಾಲ್ಕಕ್ಕೆ ಮತ್ತೊಂದು ಸಭೆ

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ