AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gandhinagar Election Result 2021 ಗಾಂಧಿನಗರ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಜಯ

Gandhinagar Municipal Election Results 2021: ರಾಜ್ಯ ಚುನಾವಣಾ ಆಯೋಗ (SEC) ಬಿಡುಗಡೆ ಮಾಡಿದ ಅಂತಿಮ ಲೆಕ್ಕಾಚಾರದ ಪ್ರಕಾರ, ಜಿಎಂಸಿಯಲ್ಲಿ ಒಟ್ಟು 44 ಸ್ಥಾನಗಳಲ್ಲಿ, ಬಿಜೆಪಿ 41 ಸ್ಥಾನಗಳನ್ನು ಗೆದ್ದಿದೆ, ಕಾಂಗ್ರೆಸ್ ಎರಡು ಮತ್ತು ಎಎಪಿ ಒಂದು ಸ್ಥಾನವನ್ನು ಗಳಿಸಿದೆ.

Gandhinagar Election Result 2021 ಗಾಂಧಿನಗರ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಜಯ
ಬಿಜೆಪಿ ಧ್ವಜ (ಪ್ರಾತಿನಿಧಿಕ ಚಿತ್ರ)
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Oct 05, 2021 | 4:57 PM

Share

ಗಾಂಧಿನಗರ: ಭಾರತೀಯ ಜನತಾ ಪಕ್ಷದ (BJP) ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ (Jagat Prakash Nadda) ಮಂಗಳವಾರ ಗಾಂಧಿನಗರ ಮುನ್ಸಿಪಲ್ ಕಾರ್ಪೊರೇಷನ್ (GMC) ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಗುಜರಾತ್ ಜನತೆಗೆ ಧನ್ಯವಾದ ಅರ್ಪಿಸಿದರು. ಈ ಗೆಲುವಿಗೆ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಗುಜರಾತ್ ಬಿಜೆಪಿ ಮುಖ್ಯಸ್ಥ ಸಿಆರ್ ಪಾಟೀಲ್ ಅವರನ್ನೂ ನಡ್ಡಾ  ಅಭಿನಂದಿಸಿದರು.  ಗುಜರಾತ್ ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ್ತು ಗಾಂಧಿನಗರ ಮುನ್ಸಿಪಲ್ ಕಾರ್ಪೊರೇಶನ್ ಚುನಾವಣೆಯಲ್ಲಿ ಬಿಜೆಪಿ ಭಾರೀ ಬಹುಮತವನ್ನು ಗಳಿಸಿದೆ. ಗುಜರಾತಿನ ಜನರ ನಿರಂತರ ಬೆಂಬಲ ಮತ್ತು ಆಶೀರ್ವಾದಕ್ಕಾಗಿ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ ಮತ್ತು ಅಭೂತಪೂರ್ವ ಗೆಲುವಿಗೆ ಮುಖ್ಯಮಂತ್ರಿ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ರಾಜ್ಯ ಘಟಕದ ಅಧ್ಯಕ್ಷ ಸಿಆರ್ ಪಾಟೀಲ್ ಮತ್ತು ಪಕ್ಷದ ಕಾರ್ಯಕರ್ತರನ್ನು ಅಭಿನಂದಿಸುತ್ತೇನೆ ಎಂದು ನಡ್ಡಾ ಟ್ವೀಟ್ ಮಾಡಿದ್ದಾರೆ.

ಆಡಳಿತಾರೂಢ ಬಿಜೆಪಿ ಮಂಗಳವಾರ ಜಿಎಂಸಿಯನ್ನು ಉಳಿಸಿಕೊಂಡಿದೆ ಮತ್ತು ಗುಜರಾತ್‌ನ ಇತರ ಎರಡು ನಾಗರಿಕ ಸಂಸ್ಥೆಗಳಲ್ಲಿ ಗೆಲುವು ಸಾಧಿಸಿದೆ. ಅದೇ ವೇಳೆ ಕಾಂಗ್ರೆಸ್ ದೇವಭೂಮಿ-ದ್ವಾರಕಾ ಜಿಲ್ಲೆಯ ಭನ್ವಾಡ್ ಪುರಸಭೆಯಲ್ಲಿ ವಿಜಯಗಳಿಸಿದೆ.

ಆಮ್ ಆದ್ಮಿ ಪಕ್ಷದ (ಎಎಪಿ) ಪ್ರವೇಶದ ನಂತರ ಈ ವರ್ಷದ ಸ್ಪರ್ಧೆಯು ತ್ರಿಪಕ್ಷೀಯವಾಗಿದ್ದರೂ, ಬಿಜೆಪಿ ಬೆಳಿಗ್ಗೆ 9 ಗಂಟೆಗೆ ಎಣಿಕೆಯ ಆರಂಭದಿಂದಲೂ ಜಿಎಂಸಿಯಲ್ಲಿ ತನ್ನ ಮುನ್ನಡೆಯನ್ನು ಸಾಧಿಸಿದ್ದು ಕಾಂಗ್ರೆಸ್ ಮತ್ತು ಎಎಪಿಯನ್ನು ಭಾರೀ ಅಂತರದಿಂದ ಪರಾಭವಗೊಳಿಸಿತು.

ರಾಜ್ಯ ಚುನಾವಣಾ ಆಯೋಗ (ಎಸ್‌ಇಸಿ) ಬಿಡುಗಡೆ ಮಾಡಿದ ಅಂತಿಮ ಲೆಕ್ಕಾಚಾರದ ಪ್ರಕಾರ, ಜಿಎಂಸಿಯಲ್ಲಿ ಒಟ್ಟು 44 ಸ್ಥಾನಗಳಲ್ಲಿ, ಬಿಜೆಪಿ 41 ಸ್ಥಾನಗಳನ್ನು ಗೆದ್ದಿದೆ, ಕಾಂಗ್ರೆಸ್ ಎರಡು ಮತ್ತು ಎಎಪಿ ಒಂದು ಸ್ಥಾನವನ್ನು ಗಳಿಸಿದೆ.

ದೇವಭೂಮಿ -ದ್ವಾರಕಾ ಜಿಲ್ಲೆಯ ಓಖಾ ಮತ್ತು ಭನ್ವಾಡ್ ಮತ್ತು ಬನಸ್ಕಾಂತ ಜಿಲ್ಲೆಯ ಥರಾ ಪುರಸಭೆಯ ಇತರ ಮೂರು ಪುರಸಭೆಗಳ ಮತ ಎಣಿಕೆ ನಡೆಯಿತು. ಮತಗಳ ಎಣಿಕೆಯ ನಂತರ ಎಸ್ಇಸಿ ಬಿಡುಗಡೆ ಮಾಡಿದ ಅಂತಿಮ ಅಂಕಿಅಂಶಗಳ ಪ್ರಕಾರ, ಥರಾದಲ್ಲಿ ಬಿಜೆಪಿ 24 ರಲ್ಲಿ 20 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ ಕೇವಲ ನಾಲ್ಕು ಸ್ಥಾನಗಳನ್ನು ಪಡೆಯಿತು. 36 ಸ್ಥಾನಗಳಲ್ಲಿ 34 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಓಖಾ ಪುರಸಭೆಯನ್ನು ಉಳಿಸಿಕೊಂಡರೆ, ಎರಡು ಸ್ಥಾನಗಳು ಕಾಂಗ್ರೆಸ್ ಪಾಲಾಯಿತು.

ಆದಾಗ್ಯೂ,ಕಾಂಗ್ರೆಸ್ 24 ರಲ್ಲಿ 16 ಸ್ಥಾನಗಳನ್ನು ಗೆಲ್ಲುವ ಮೂಲಕ ಭನ್ವಾಡ್‌ನಲ್ಲಿ ವಿಜಯಶಾಲಿಯಾಗಿ ಹೊರಹೊಮ್ಮಿತು. ಈ ಬಾರಿ ಕೇವಲ ಎಂಟು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾದ ಬಿಜೆಪಿ 1995 ರಿಂದ ಭನ್ವಾಡ್​​ನಲ್ಲಿ ಅಧಿಕಾರದಲ್ಲಿತ್ತು.

ಗುಜರಾತ್ ಮುಖ್ಯಮಂತ್ರಿಯಾಗಿ ಪಟೇಲ್ ಅಧಿಕಾರ ವಹಿಸಿಕೊಂಡ ನಂತರ ನಡೆದ ಮೊದಲ ಪ್ರಮುಖ ಚುನಾವಣೆ ಇದಾಗಿದ್ದು, ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಮುನ್ನ ಇಡೀ ಸರ್ಕಾರವನ್ನು ಬದಲಾಯಿಸುವ ಬಿಜೆಪಿಯ ಹಠಾತ್ ಮತ್ತು ಆಶ್ಚರ್ಯಕರ ನಿರ್ಧಾರಕ್ಕೆ ಇದು ಪರೀಕ್ಷೆಯಂತಿತ್ತು. ಫೆಬ್ರವರಿಯಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ದಾಖಲಿಸಿತ್ತು. ಜಿಎಂಸಿ ಮತ್ತು ಇತರ ಮೂರು ಪುರಸಭೆಗಳ ಚುನಾವಣೆಗೆ ಭಾನುವಾರ ಮತದಾನ ನಡೆದಿತ್ತು.

ಇದನ್ನೂ ಓದಿ: ‘ಡ್ರಗ್ಸ್​ ಕೇಸ್​ನಲ್ಲಿ ಆರ್ಯನ್​ ಖಾನ್​ಗೆ ಶಿಕ್ಷೆ ಆಗಲ್ಲ’; ಭವಿಷ್ಯ ನುಡಿದ ಕಮಾಲ್ ಆರ್​. ಖಾನ್​

Published On - 4:33 pm, Tue, 5 October 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ