ಪಂಚಮಸಾಲಿ ಬೇಡಿಕೆ ಈಡೇರಿಸಬೇಕೆಂದು ಹೈಕಮಾಂಡ್ ಬಳಿ ಯತ್ನಾಳ್ ವಾದ
ಬಿಜೆಪಿ ಹೈಕಮಾಂಡ್ ಸರ್ಕಾರದ ವಿರುದ್ಧ ಹೇಳಿಕೆ ನೀಡದಂತೆ ಸೂಚಿಸಿದ್ದಂತೆ, ಮೌನ ಮುರಿದ ಯತ್ನಾಳ್, ಮೀಸಲಾತಿ ಕೋರಿ ಪಂಚಮಸಾಲಿ ಸಮುದಾಯ ಹಿಂದಿನಿಂದಲೂ ಹೋರಾಟ ನಡೆಸುತ್ತಿದೆ. ನಾನು ಮೀಸಲಾತಿ ಹೋರಾಟದಲ್ಲಿ ಹೊಸದಾಗಿ ಭಾಗಿಯಾಗಿಲ್ಲ. ಲಿಂಗಾಯತ ಪಂಚಮಸಾಲಿ ಸಮುದಾಯ ನಡೆಸುತ್ತಿರುವ ಹೋರಾಟ ನ್ಯಾಯಸಮ್ಮತವಾಗಿದ್ದು, ಸರ್ಕಾರ ಬೇಡಿಕೆ ಈಡೇರಿಸಬೇಕಿದೆ ಎಂದು ಯತ್ನಾಳ್ ರಾಷ್ಟ್ರೀಯ ಅಧ್ಯಕ್ಷ ನಡ್ಡ ಬಳಿ ವಾದಿಸಿದ್ದಾರೆ. ಆದ್ರೆ ಇನ್ನು ಮುಂದೆ ಸರ್ಕಾರವಾಗಲಿ ಅಥವಾ ಯಡಿಯೂರಪ್ಪ ವಿರುದ್ಧವಾಗಲಿ ಯಾವುದೇ ರೀತಿಯ ಹೇಳಿಕೆ ನೀಡದಂತೆ ಯತ್ನಾಳ್ಗೆ ನಡ್ಡಾ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲ ಸರ್ಕಾರಕ್ಕೆ ಮತ್ತು ಪಕ್ಷಕ್ಕೆ ಇರುಸುಮುರುಸು ಉಂಟು ಮಾಡಿದರೆ ಶಿಸ್ತು ಕ್ರಮ ಅನಿವಾರ್ಯ ಎಂಬ ಎಚ್ಚರಿಕೆಯನ್ನೂ ವರಿಷ್ಠರು ನೀಡಿದ್ದಾರೆ ಎನ್ನಲಾಗಿದೆ.
ಅಂದಹಾಗೆ ಈ ಹಿಂದೆ ಹಲವು ಬಾರಿ ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸಿದ್ದ ಯತ್ನಾಳ್ಗೆ ಹೈಕಮಾಂಡ್ ನೋಟಿಸ್ ಜಾರಿ ಮಾಡಿತ್ತು. ನೋಟಿಸ್ಗೆ ಉತ್ತರ ನೀಡುವಂತೆ ಹೈಕಮಾಂಡ್ ಸೂಚನೆ ನೀಡಿತ್ತು. 11 ಪುಟಗಳ ಉತ್ತರ ನೀಡಿದ್ದ ಯತ್ನಾಳ್ ತಮ್ಮ ಅಸಮಧಾನ ಹೊರಹಾಕಿದ್ರು. ದೆಹಲಿಗೆ ಬುಲಾವ್ ನೀಡಿದ್ದ ಹೈಕಮಾಂಡ್ ಪಕ್ಷದ ಶಿಸ್ತು ಪಾಲನಾ ಸಮಿತಿ ಎದುರು ಹಾಜರಾಗುವಂತೆ ಸೂಚಿಸಿತ್ತು.
ಸಾಮಾನ್ಯವಾಗಿ ಯತ್ನಾಳ ದೆಹಲಿಗೆ ಬಂದಾಗ ವಾಸ್ತವ್ಯ ಹೂಡುತ್ತಿದ್ದ ಕರ್ನಾಟಕ ಭವನದ ಬದಲಿಗೆ ಖಾಸಗಿ ಹೋಟೆಲ್ ಒಂದರಲ್ಲಿ ತಂಗಿದ್ದಾರೆ ಎನ್ನಲಾಗಿದೆ. ದೆಹಲಿ ಭೇಟಿ ವಿಚಾರವನ್ನು ರಹಸ್ಯವಾಗಿಯೇ ಇಟ್ಟಿದ್ದು ಯಾಕೆ ಅನ್ನೋದು ಮಾತ್ರ ಪ್ರಶ್ನೆಯಾಗಿ ಉಳಿದಿದೆ.
ಇದನ್ನೂ ಓದಿ: ಪಂಚಮಸಾಲಿ ಸಮಾವೇಶದಲ್ಲಿ ಸಿಎಂ BSY ವಿರುದ್ಧ ಯತ್ನಾಳ್ ಗುಡುಗು.. ಹೈಕಮಾಂಡ್ನಿಂದ ಬಂತು ಬುಲಾವ್
ವ್ಯಕ್ತಿ ವ್ಯಕ್ತಿತ್ವ | ವಿವಾದಗಳ ಮಾಲೆಯನ್ನೇ ಸುತ್ತಿಕೊಂಡ ಬೆಂಕಿಯುಗುಳುವ ನಾಯಕ ಬಸನಗೌಡ ಪಾಟೀಲ್ ಯತ್ನಾಳ್