AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಮತ ಹೆಚ್ಚಳ: ಜನರಿಗೆ ಧನ್ಯವಾದ ಹೇಳಿದ ಜೆ.ಪಿ.ನಡ್ಡಾ

2015ರಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶಕ್ಕೆ ಹೋಲಿಸಿದರೆ ಬಿಜೆಪಿ ಈ ಬಾರಿ ಹೆಚ್ಚು ಮತಗಳಿಸಲು ಸಫಲವಾಗಿದೆ. 7000 ವಾರ್ಡ್​ಗಳಲ್ಲಿ ಅರ್ಧದಷ್ಟಾದರೂ ವಾರ್ಡ್​​ಗಳನ್ನು ಗೆಲ್ಲಬೇಕು ಎಂದು ಎನ್​ಡಿಎ ಕಾರ್ಯತಂತ್ರ ರೂಪಿಸಿದ್ದರೂ ಗೆಲ್ಲಲು ಸಾಧ್ಯವಾಗಿದ್ದು 2000 ವಾರ್ಡ್​​ಗಳು.

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಮತ ಹೆಚ್ಚಳ: ಜನರಿಗೆ ಧನ್ಯವಾದ ಹೇಳಿದ ಜೆ.ಪಿ.ನಡ್ಡಾ
ಜೆ.ಪಿ. ನಡ್ಡಾ
ರಶ್ಮಿ ಕಲ್ಲಕಟ್ಟ
| Edited By: |

Updated on: Dec 17, 2020 | 7:47 PM

Share

ನವದೆಹಲಿ: ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಮತ ಹೆಚ್ಚಳವಾಗಿದ್ದು, ಕೇರಳದ ಮತದಾರರಿಗೆ ಧನ್ಯವಾದಗಳು. ಇನ್ನು ಮುಂದೆಯೂ ನಾವು ಎಲ್​​ಡಿಎಫ್ ಮತ್ತು ಯುಡಿಎಫ್ ಮೈತ್ರಿಕೂಟಗಳ ಭ್ರಷ್ಟಾಚಾರ, ಕೋಮುವಾದ ಮತ್ತು ಬೂಟಾಟಿಕೆಯನ್ನು ಬಯಲು ಮಾಡುವ ಕಾರ್ಯ ಮುಂದುವರಿಸುತ್ತೇವೆ ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಟ್ವೀಟಿಸಿದ್ದಾರೆ.

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಎಲ್​ಡಿಎಫ್ ಭರ್ಜರಿ ಗೆಲುವು ಸಾಧಿಸಿತ್ತು. ಎರಡನೇ ಸ್ಥಾನದಲ್ಲಿ ಯುಡಿಎಫ್ ಮತ್ತು ಬಿಜೆಪಿಗೆ ಮೂರನೇ ಸ್ಥಾನ ಲಭಿಸಿತ್ತು.

ಚುನಾವಣೆ ಫಲಿತಾಂಶ ಕೇರಳದ ಆರು ಮಹಾನಗರಪಾಲಿಕೆಗಳ ಪೈಕು ಐದನ್ನು ಎಲ್​​ಡಿಎಫ್ ಗೆದ್ದುಕೊಂಡಿದೆ. 86 ನಗರಸಭೆಗಳ ಪೈಕಿ 45ರಲ್ಲಿ ಯುಡಿಎಫ್, 35ರಲ್ಲಿ ಎಲ್​​ಡಿಎಫ್, 2 ಕಡೆ ಬಿಜೆಪಿ ಮತ್ತು 4 ಕಡೆ ಸ್ವತಂತ್ರ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದಾರೆ.

ಜಿಲ್ಲಾ ಪಂಚಾಯತಿಗಳಲ್ಲಿ ಎಲ್​​ಡಿಎಫ್ 11, ಯುಡಿಎಫ್ 3 ಕಡೆ ಗೆಲುವು ಸಾಧಿಸಿದೆ. ಗ್ರಾಮ ಪಂಚಾಯತಿ​​ಗಳಲ್ಲಿ ಎಲ್​​ಡಿಎಫ್ 514, ಯುಡಿಎಫ್ 375, ಎನ್​ಡಿಎ 29, ಇತರರು 29 ಕಡೆ ಮುನ್ನಡೆ ಸಾಧಿಸಿದ್ದಾರೆ. 152 ಬ್ಲಾಕ್ ಪಂಚಾಯತಿಗಳ ಪೈಕಿ 108 ಎಲ್​​ಡಿಎಫ್ ಮತ್ತು 44 ಕಡೆ ಯುಡಿಎಫ್ ಗೆಲುವು ಸಾಧಿಸಿದೆ.

ಕೆಪಿಸಿಸಿ ಅಧ್ಯಕ್ಷ ಮುಲ್ಲಪ್ಪಳ್ಳಿ ರಾಮಚಂದ್ರನ್ ಅವರ ಬ್ಲಾಕ್ ಪಂಚಾಯತ್ ಡಿವಿಷನ್ ಕಲ್ಲಾಮಲಯಿಲ್​​ನಲ್ಲಿ ಸಿಪಿಎಂ ಅಭ್ಯರ್ಥಿ ಡಾ. ಆಶಿಷ್ ಗೆದ್ದಿದ್ದಾರೆ. ತ್ರಿಶ್ಶೂರ್ ಕಾರ್ಪೊರೇಷನ್​ ಚುನಾವಣೆಯಲ್ಲಿ ಬಿಜೆಪಿಯ ಮೇಯರ್ ಅಭ್ಯರ್ಥಿ, ಬಿಜೆಪಿ ವಕ್ತಾರ ಬಿ. ಗೋಪಾಲಕೃಷ್ಣನ್ ಪರಾಭವಗೊಂಡಿದ್ದಾರೆ.

ಪಿಣರಾಯಿ, ಕತಿರೂರ್ ಪಂಚಾಯತ್​ನ ಎಲ್ಲ ವಾರ್ಡ್​​ಗಳನ್ನು ಎಲ್​​ಡಿಎಫ್ ಗೆದ್ದುಕೊಂಡಿದೆ. ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರ ಪುದುಪ್ಪಳ್ಳಿ ಪಂಚಾಯತಿಯಲ್ಲಿಯೂ ಎಡರಂಗ ವಿಜಯ ಗಳಿಸಿದೆ. ವೆಂಙಾನ್ನೂರ್ ಜಿಲ್ಲಾ ಪಂಚಾಯತ್ ಡಿವಿಷನ್ ನಲ್ಲಿ ಸ್ಪರ್ಧಿಸಿದ್ದ ಬಿಜೆಪಿ ರಾಜ್ಯ ಕಾರ್ಯದರ್ಶಿ ಎಸ್ . ಸುರೇಶ್ ಅವರು ಸೋತಿದ್ದಾರೆ.

ಕೇರಳದಲ್ಲಿ ಬಿಜೆಪಿ ಮೂರನೇ ಸ್ಥಾನದಲ್ಲಿದ್ದರೂ ಮತಗಳಿಕೆ ಹೆಚ್ಚಳ

2015ರಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶಕ್ಕೆ ಹೋಲಿಸಿದರೆ ಬಿಜೆಪಿ ಈ ಬಾರಿ ಹೆಚ್ಚು ಮತಗಳಿಸಲು ಸಫಲವಾಗಿದೆ. 7000 ವಾರ್ಡ್​ಗಳಲ್ಲಿ ಅರ್ಧದಷ್ಟಾದರೂ ವಾರ್ಡ್​​ಗಳನ್ನು ಗೆಲ್ಲಬೇಕು ಎಂದು ಎನ್​ಡಿಎ ಕಾರ್ಯತಂತ್ರ ರೂಪಿಸಿದ್ದರೂ ಗೆಲ್ಲಲು ಸಾಧ್ಯವಾಗಿದ್ದು 2000 ವಾರ್ಡ್​​ಗಳು.

ತಿರುವನಂತಪುರಂ ಮತ್ತು ತ್ರಿಶ್ಶೂರ್ ಮಹಾನಗರಪಾಲಿಕೆಗಳಲ್ಲಿ ಗೆಲ್ಲುವ ಆತ್ಮವಿಶ್ವಾಸ ಬಿಜೆಪಿಗಿದ್ದರೂ ಅಲ್ಲಿ ಗೆಲುವು ಸಾಧ್ಯವಾಗಲಿಲ್ಲ. ಏತನ್ಮಧ್ಯೆ ಎಡರಂಗದ ಭದ್ರಕೋಟೆ ಎಂದೇ ಕರೆಯಲ್ಪಡುವ ಕಣ್ಣೂರ್ ಸೇರಿದಂತೆ ಎಲ್ಲ ಕಾರ್ಪೊರೇಷನ್​ಗಳಲ್ಲಿ ಎನ್​​ಡಿಎ ಕೆಲವು ಸೀಟುಗಳನ್ನು ಗೆದ್ದುಕೊಂಡಿತು.

ಬಿಜೆಪಿಯನ್ನು ಪರಾಭವಗೊಳಿಸಲು ಯುಡಿಎಫ್ ಮತ್ತು ಎಲ್​​ಡಿಎಫ್ ಜತೆಯಾಗಿ ಪ್ರಯತ್ನಿಸಿದೆ ಎಂದು ಬಿಜೆಪಿ ಆರೋಪಿಸಿದೆ. ತಿರುವನಂತಪುರಂ ಕಾರ್ಪೊರೇಷನ್​ನಲ್ಲಿ ಯುಡಿಎಫ್ ಕೇವಲ 10 ಸೀಟುಗಳಿಸಿದ್ದು ಇದಕ್ಕೆ ಉದಾಹರಣೆ ಎಂದು ಬಿಜೆಪಿ ಹೇಳಿದೆ.

ಕೇರಳದಲ್ಲಿ LDF ವಿಜಯೋತ್ಸವ; ಇದು ಜನರ ಗೆಲುವು ಎಂದ ಪಿಣರಾಯಿ ವಿಜಯನ್

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ