AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಊಳಿಗಮಾನ್ಯ ವ್ಯವಸ್ಥೆಯ ಜಮೀನುದಾರನಂತೆ ವರ್ತಿಸುತ್ತಿದೆ: ಕೇಂದ್ರ ವಿರುದ್ಧ ಮಮತಾ ವಾಗ್ದಾಳಿ

ಬಿಜೆಪಿಯನ್ನು ಮಹಾಭಾರತದ ದುಶ್ಶಾಸನ ಮತ್ತು ದುರ್ಯೋಧನ ಎಂದು ಬಣ್ಣಿಸಿದ ಮಮತಾ ಬ್ಯಾನರ್ಜಿ ಈ ದುಶ್ಶಾಸನ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲು ಭಾರತದ ಪ್ರತಿಯೊಂದು ರಾಜಕೀಯ ಪಕ್ಷಗಳು ಒಂದಾಗಬೇಕೆಂದು ನಾನು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ

ಬಿಜೆಪಿ ಊಳಿಗಮಾನ್ಯ ವ್ಯವಸ್ಥೆಯ ಜಮೀನುದಾರನಂತೆ ವರ್ತಿಸುತ್ತಿದೆ: ಕೇಂದ್ರ ವಿರುದ್ಧ ಮಮತಾ ವಾಗ್ದಾಳಿ
ಮಮತಾ ಬ್ಯಾನರ್ಜಿ
ರಶ್ಮಿ ಕಲ್ಲಕಟ್ಟ
|

Updated on:Mar 30, 2023 | 8:40 PM

Share

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಇಂದು ಬಿಜೆಪಿ (BJP) ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದು, 2002ರ ಗುಜರಾತ್ ಗಲಭೆಗಳನ್ನು (2002 Gujarat riots) ಉಲ್ಲೇಖಿಸಿ ಪಕ್ಷ ಊಳಿಗಮಾನ್ಯ ವ್ಯವಸ್ಥೆಯ ಜಮೀನುದಾರನಂತೆ ವರ್ತಿಸುತ್ತಿದೆ, ಟೀಕಿಸುವವರನ್ನು ಜೈಲಿಗೆ ಕಳುಹಿಸುತ್ತಿದೆ ಎಂದು ಆರೋಪಿಸಿದ್ದಾರೆ. ಬಂಗಾಳದಲ್ಲಿ ನರಮೇಧವಿದೆ ಎಂದು ಅವರು ಹೇಳುತ್ತಾರೆ. ನರಮೇಧದ ಅರ್ಥ ನಿಮಗೆ ಅರ್ಥವಾಗಿದೆಯೇ? ಇದು ಗೋಧ್ರಾದಲ್ಲಿ ಸಂಭವಿಸಿದೆ. ಇದು ಬಿಲ್ಕಿಸ್‌ನೊಂದಿಗೆ ಸಂಭವಿಸಿದೆ. ಇದು ಎನ್‌ಆರ್‌ಸಿ/ಸಿಎಎಯೊಂದಿಗೆ ಸಂಭವಿಸಿದೆ. ದೆಹಲಿಯಲ್ಲಿ ಏನಾಯಿತು? ಎಂದು ಕೊಲ್ಕತ್ತಾದಲ್ಲಿ ಧರಣಿ ನಡೆಸುತ್ತಿರುವ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ತನಿಖಾ ಏಜೆನ್ಸಿಗಳ ಮೂಲಕ ಆಡಳಿತರೂಢ ಪಕ್ಷ ವಿರೋಧ ಪಕ್ಷಗಳನ್ನು ಗುರಿಯಾಗಿಸಿಕೊಂಡಿದೆ. ಬಿಜೆಪಿಯವರು ಊಳಿಗಮಾನ್ಯ ಭೂಮಾಲೀಕರಂತೆ ವರ್ತಿಸುತ್ತಿದ್ದಾರೆ, ಬಿಜೆಪಿ ವಿರುದ್ಧ ಯಾರಾದರೂ ಏನಾದರೂ ಹೇಳಿದರೆ ಜೈಲಿಗೆ ಕಳುಹಿಸುತ್ತಾರೆ, ಬಿಜೆಪಿ ವಿರುದ್ಧ ಏನಾದರೂ ಹೇಳಿದರೆ ಅವರನ್ನು ಸದನದಿಂದ ಹೊರಹಾಕುತ್ತಾರೆ. ಬಿಜೆಪಿ ವಿರುದ್ಧ ಯಾರಾದರೂ ಏನಾದರೂ ಹೇಳಿದರೆ ಇಡಿ, ಸಿಬಿಐಯನ್ನು ಕಳುಹಿಸುತ್ತಾರೆ. ಅವರು ಎಂಥಾ ಪ್ರಾಮಾಣಿಕ ಪಕ್ಷದವರು. ಭಾರತದಲ್ಲಿ ಮಾತ್ರವಲ್ಲ, ಬಿಬಿಸಿ ಕೂಡ ಅದನ್ನು ಹೇಳುತ್ತಿದೆ. ನಾವು ದೇಶದೊಂದಿಗೆ ಇದ್ದೇವೆ, ಅದರ ವಿರುದ್ಧ ಏನನ್ನೂ ಕೇಳಲು ಇಷ್ಟಪಡುವುದಿಲ್ಲ ಎಂದು ತೃಣಮೂಲ ಮುಖ್ಯಸ್ಥರು ಹೇಳಿದ್ದಾರೆ.

ಬಂಗಾಳದಲ್ಲಿನ ಪಂಚಾಯತ್ ಚುನಾವಣೆಗೆ ಮುನ್ನ ತನ್ನ ಎರಡು ದಿನಗಳ ಧರಣಿಯಲ್ಲಿ ಮಾತನಾಡಿದ ಮಮತಾ, ಬಿಜೆಪಿಯು ಬಂಗಾಳಕ್ಕೆ ಹಣವನ್ನು ತಡೆಹಿಡಿಯುತ್ತಿದೆ. ಕೇಂದ್ರೀಯ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: Narendra Modi: ಮೋದಿ ಭೇಟಿ ಮಾಡಿದ ಆಸ್ಕರ್ ವಿಜೇತ ದಿ ಎಲಿಫೆಂಟ್ ವಿಸ್ಪರರ್ಸ್ ತಂಡ

ಬಿಜೆಪಿಗೆ ಸೇರಿದ ನಂತರ ರಾಜಕಾರಣಿಗಳ ವಿರುದ್ಧದ ಕ್ರಿಮಿನಲ್ ಆರೋಪಗಳನ್ನು ಹೇಗೆ ತೆರವುಗೊಳಿಸಲಾಗುತ್ತದೆ ಎಂಬುದನ್ನು ತೋರಿಸಲು ಮಮತಾ ಧರಣಿ ವೇದಿಕೆಯಲ್ಲಿ ವಾಷಿಂಗ್ ಮೆಷಿನ್​​ ಮಾದರಿಯನ್ನು ಪ್ರದರ್ಶಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಆರಂಭದಲ್ಲಿ ಘೋಷಿಸಿದ ನಂತರ ಮಮತಾ ಬ್ಯಾನರ್ಜಿ ನಿನ್ನೆ ರಾಜಕೀಯ ಪಕ್ಷಗಳು ಒಗ್ಗಟ್ಟಾಗಲು ಕರೆನೀಡಿದ್ದಾರೆ.

ಬಿಜೆಪಿಯನ್ನು ಮಹಾಭಾರತದ ದುಶ್ಶಾಸನ ಮತ್ತು ದುರ್ಯೋಧನ ಎಂದು ಬಣ್ಣಿಸಿದ ಅವರು ಈ ದುಶ್ಶಾಸನ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲು ಭಾರತದ ಪ್ರತಿಯೊಂದು ರಾಜಕೀಯ ಪಕ್ಷಗಳು ಒಂದಾಗಬೇಕೆಂದು ನಾನು ಒತ್ತಾಯಿಸುತ್ತೇನೆ. ದೇಶದ ಜನಸಾಮಾನ್ಯರನ್ನು ಹಾಗೂ ಭಾರತೀಯ ಪ್ರಜಾಪ್ರಭುತ್ವವನ್ನು ಉಳಿಸಲು ಈ ದುರ್ಯೋಧನ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಬೇಕು ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:32 pm, Thu, 30 March 23

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್