ಬಿಜೆಪಿ ಊಳಿಗಮಾನ್ಯ ವ್ಯವಸ್ಥೆಯ ಜಮೀನುದಾರನಂತೆ ವರ್ತಿಸುತ್ತಿದೆ: ಕೇಂದ್ರ ವಿರುದ್ಧ ಮಮತಾ ವಾಗ್ದಾಳಿ

ಬಿಜೆಪಿಯನ್ನು ಮಹಾಭಾರತದ ದುಶ್ಶಾಸನ ಮತ್ತು ದುರ್ಯೋಧನ ಎಂದು ಬಣ್ಣಿಸಿದ ಮಮತಾ ಬ್ಯಾನರ್ಜಿ ಈ ದುಶ್ಶಾಸನ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲು ಭಾರತದ ಪ್ರತಿಯೊಂದು ರಾಜಕೀಯ ಪಕ್ಷಗಳು ಒಂದಾಗಬೇಕೆಂದು ನಾನು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ

ಬಿಜೆಪಿ ಊಳಿಗಮಾನ್ಯ ವ್ಯವಸ್ಥೆಯ ಜಮೀನುದಾರನಂತೆ ವರ್ತಿಸುತ್ತಿದೆ: ಕೇಂದ್ರ ವಿರುದ್ಧ ಮಮತಾ ವಾಗ್ದಾಳಿ
ಮಮತಾ ಬ್ಯಾನರ್ಜಿ
Follow us
|

Updated on:Mar 30, 2023 | 8:40 PM

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಇಂದು ಬಿಜೆಪಿ (BJP) ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದು, 2002ರ ಗುಜರಾತ್ ಗಲಭೆಗಳನ್ನು (2002 Gujarat riots) ಉಲ್ಲೇಖಿಸಿ ಪಕ್ಷ ಊಳಿಗಮಾನ್ಯ ವ್ಯವಸ್ಥೆಯ ಜಮೀನುದಾರನಂತೆ ವರ್ತಿಸುತ್ತಿದೆ, ಟೀಕಿಸುವವರನ್ನು ಜೈಲಿಗೆ ಕಳುಹಿಸುತ್ತಿದೆ ಎಂದು ಆರೋಪಿಸಿದ್ದಾರೆ. ಬಂಗಾಳದಲ್ಲಿ ನರಮೇಧವಿದೆ ಎಂದು ಅವರು ಹೇಳುತ್ತಾರೆ. ನರಮೇಧದ ಅರ್ಥ ನಿಮಗೆ ಅರ್ಥವಾಗಿದೆಯೇ? ಇದು ಗೋಧ್ರಾದಲ್ಲಿ ಸಂಭವಿಸಿದೆ. ಇದು ಬಿಲ್ಕಿಸ್‌ನೊಂದಿಗೆ ಸಂಭವಿಸಿದೆ. ಇದು ಎನ್‌ಆರ್‌ಸಿ/ಸಿಎಎಯೊಂದಿಗೆ ಸಂಭವಿಸಿದೆ. ದೆಹಲಿಯಲ್ಲಿ ಏನಾಯಿತು? ಎಂದು ಕೊಲ್ಕತ್ತಾದಲ್ಲಿ ಧರಣಿ ನಡೆಸುತ್ತಿರುವ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ತನಿಖಾ ಏಜೆನ್ಸಿಗಳ ಮೂಲಕ ಆಡಳಿತರೂಢ ಪಕ್ಷ ವಿರೋಧ ಪಕ್ಷಗಳನ್ನು ಗುರಿಯಾಗಿಸಿಕೊಂಡಿದೆ. ಬಿಜೆಪಿಯವರು ಊಳಿಗಮಾನ್ಯ ಭೂಮಾಲೀಕರಂತೆ ವರ್ತಿಸುತ್ತಿದ್ದಾರೆ, ಬಿಜೆಪಿ ವಿರುದ್ಧ ಯಾರಾದರೂ ಏನಾದರೂ ಹೇಳಿದರೆ ಜೈಲಿಗೆ ಕಳುಹಿಸುತ್ತಾರೆ, ಬಿಜೆಪಿ ವಿರುದ್ಧ ಏನಾದರೂ ಹೇಳಿದರೆ ಅವರನ್ನು ಸದನದಿಂದ ಹೊರಹಾಕುತ್ತಾರೆ. ಬಿಜೆಪಿ ವಿರುದ್ಧ ಯಾರಾದರೂ ಏನಾದರೂ ಹೇಳಿದರೆ ಇಡಿ, ಸಿಬಿಐಯನ್ನು ಕಳುಹಿಸುತ್ತಾರೆ. ಅವರು ಎಂಥಾ ಪ್ರಾಮಾಣಿಕ ಪಕ್ಷದವರು. ಭಾರತದಲ್ಲಿ ಮಾತ್ರವಲ್ಲ, ಬಿಬಿಸಿ ಕೂಡ ಅದನ್ನು ಹೇಳುತ್ತಿದೆ. ನಾವು ದೇಶದೊಂದಿಗೆ ಇದ್ದೇವೆ, ಅದರ ವಿರುದ್ಧ ಏನನ್ನೂ ಕೇಳಲು ಇಷ್ಟಪಡುವುದಿಲ್ಲ ಎಂದು ತೃಣಮೂಲ ಮುಖ್ಯಸ್ಥರು ಹೇಳಿದ್ದಾರೆ.

ಬಂಗಾಳದಲ್ಲಿನ ಪಂಚಾಯತ್ ಚುನಾವಣೆಗೆ ಮುನ್ನ ತನ್ನ ಎರಡು ದಿನಗಳ ಧರಣಿಯಲ್ಲಿ ಮಾತನಾಡಿದ ಮಮತಾ, ಬಿಜೆಪಿಯು ಬಂಗಾಳಕ್ಕೆ ಹಣವನ್ನು ತಡೆಹಿಡಿಯುತ್ತಿದೆ. ಕೇಂದ್ರೀಯ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: Narendra Modi: ಮೋದಿ ಭೇಟಿ ಮಾಡಿದ ಆಸ್ಕರ್ ವಿಜೇತ ದಿ ಎಲಿಫೆಂಟ್ ವಿಸ್ಪರರ್ಸ್ ತಂಡ

ಬಿಜೆಪಿಗೆ ಸೇರಿದ ನಂತರ ರಾಜಕಾರಣಿಗಳ ವಿರುದ್ಧದ ಕ್ರಿಮಿನಲ್ ಆರೋಪಗಳನ್ನು ಹೇಗೆ ತೆರವುಗೊಳಿಸಲಾಗುತ್ತದೆ ಎಂಬುದನ್ನು ತೋರಿಸಲು ಮಮತಾ ಧರಣಿ ವೇದಿಕೆಯಲ್ಲಿ ವಾಷಿಂಗ್ ಮೆಷಿನ್​​ ಮಾದರಿಯನ್ನು ಪ್ರದರ್ಶಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಆರಂಭದಲ್ಲಿ ಘೋಷಿಸಿದ ನಂತರ ಮಮತಾ ಬ್ಯಾನರ್ಜಿ ನಿನ್ನೆ ರಾಜಕೀಯ ಪಕ್ಷಗಳು ಒಗ್ಗಟ್ಟಾಗಲು ಕರೆನೀಡಿದ್ದಾರೆ.

ಬಿಜೆಪಿಯನ್ನು ಮಹಾಭಾರತದ ದುಶ್ಶಾಸನ ಮತ್ತು ದುರ್ಯೋಧನ ಎಂದು ಬಣ್ಣಿಸಿದ ಅವರು ಈ ದುಶ್ಶಾಸನ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲು ಭಾರತದ ಪ್ರತಿಯೊಂದು ರಾಜಕೀಯ ಪಕ್ಷಗಳು ಒಂದಾಗಬೇಕೆಂದು ನಾನು ಒತ್ತಾಯಿಸುತ್ತೇನೆ. ದೇಶದ ಜನಸಾಮಾನ್ಯರನ್ನು ಹಾಗೂ ಭಾರತೀಯ ಪ್ರಜಾಪ್ರಭುತ್ವವನ್ನು ಉಳಿಸಲು ಈ ದುರ್ಯೋಧನ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಬೇಕು ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:32 pm, Thu, 30 March 23

ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ