Narendra Modi: ಭಾರತದಲ್ಲಿ ಪ್ರಜಾಸತ್ತಾತ್ಮಕ ಪ್ರಕ್ರಿಯೆ ಅನುಸರಿಸುತ್ತಿರುವ ಏಕೈಕ ರಾಜಕೀಯ ಪಕ್ಷ ಬಿಜೆಪಿ; ಪ್ರಧಾನಿ ಮೋದಿ

BJP Sadasyata Abhiyan: ದೆಹಲಿಯಲ್ಲಿ ಇಂದು ಬಿಜೆಪಿ ಸದಸ್ಯತಾ ಅಭಿಯಾನಕ್ಕೆ ಚಾಲನೆ ನೀಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಳಿಕ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಬಿಜೆಪಿ 10 ಕೋಟಿ ಸದಸ್ಯರ ನೋಂದಣಿಯನ್ನು ತಲುಪುವ ಗುರಿಯನ್ನು ಹೊಂದಿದೆ.

Narendra Modi: ಭಾರತದಲ್ಲಿ ಪ್ರಜಾಸತ್ತಾತ್ಮಕ ಪ್ರಕ್ರಿಯೆ ಅನುಸರಿಸುತ್ತಿರುವ ಏಕೈಕ ರಾಜಕೀಯ ಪಕ್ಷ ಬಿಜೆಪಿ; ಪ್ರಧಾನಿ ಮೋದಿ
ಪ್ರಧಾನಿ ಮೋದಿ
Follow us
|

Updated on: Sep 02, 2024 | 10:30 PM

ನವದೆಹಲಿ: ರಾಜವಂಶದ ರಾಜಕೀಯದ ಬಗ್ಗೆ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಅನುಸರಿಸುತ್ತಿರುವ ಏಕೈಕ ರಾಜಕೀಯ ಪಕ್ಷವೆಂದರೆ ಅದು ಬಿಜೆಪಿ ಎಂದು ಹೇಳಿದ್ದಾರೆ. ನವದೆಹಲಿಯ ಪಕ್ಷದ ಪ್ರಧಾನ ಕಛೇರಿಯಲ್ಲಿ ಬಿಜೆಪಿಯ ಸದಸ್ಯತ್ವ ಅಭಿಯಾನ – ‘ಸಂಘಟನ್ ಪರ್ವ, ಸದಾಸ್ಯತ ಅಭಿಯಾನ 2024’ಕ್ಕೆ ಚಾಲನೆ ನೀಡಿದ ಪ್ರಧಾನ ಮಂತ್ರಿ ಮೋದಿ ಈ ಹೇಳಿಕೆ ನೀಡಿದ್ದಾರೆ.

ಈ ವೇಳೆ ಪಕ್ಷದ ಹಲವಾರು ಕಾರ್ಯಕರ್ತರನ್ನು ಸ್ಮರಿಸಿದ ಪ್ರಧಾನಿ, “ಹಲವಾರು ತಲೆಮಾರುಗಳು ಈ ಪಕ್ಷಕ್ಕೆ ತಮ್ಮ ಜೀವನವನ್ನು ಹೂಡಿದ್ದಾರೆ. ಅದರಿಂದಲೇ ಇಂದು ಪಕ್ಷವು ಜನರ ಹೃದಯದಲ್ಲಿ ಸ್ಥಾನ ಪಡೆದಿದೆ” ಎಂದು ಹೇಳಿದರು.

ಇದನ್ನೂ ಓದಿ: Vande Bharat: 3 ಹೊಸ ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ

ಗೋಡೆಯಲ್ಲಿ ಕಮಲದ ಚಿತ್ರ ಬಿಡಿಸಿದ್ದೆ:

ಬಿಜೆಪಿಗೆ ಸೇರ್ಪಡೆಯಾದ ತಮ್ಮ ಆರಂಭದ ದಿನಗಳನ್ನು ಸ್ಮರಿಸಿದ ನರೇಂದ್ರ ಮೋದಿ, ನಾನು ಆರಂಭದಲ್ಲಿ ಗೋಡೆಗಳ ಮೇಲೆ ಕಮಲವನ್ನು ಚಿತ್ರಿಸಿದ್ದೇನೆ. ಆದರೆ, ಮುಂದೊಂದು ದಿನ ಜನರ ಹೃದಯದಲ್ಲಿ ಕಮಲ ಅರಳುತ್ತದೆ ಎಂಬ ನಂಬಿಕೆ ನನಗೆ ಯಾವಾಗಲೂ ಇತ್ತು. ನಾನು ರಾಜಕೀಯದಲ್ಲಿ ಇಲ್ಲದಿದ್ದಾಗ, ಜನಸಂಘದ ಕಾಲದಲ್ಲಿ ಉತ್ಸಾಹಿ ಕಾರ್ಯಕರ್ತರು ಗೋಡೆಗಳ ಮೇಲೆ ದೀಪಗಳನ್ನು ಹಚ್ಚುತ್ತಿದ್ದರು. ಇತರ ರಾಜಕೀಯ ಪಕ್ಷಗಳ ಅನೇಕ ಮುಖಂಡರು ತಮ್ಮ ಭಾಷಣದಲ್ಲಿ ಗೋಡೆಗೆ ದೀಪ ಹಚ್ಚಿದರೆ ಅಧಿಕಾರ ಸಿಗುವುದಿಲ್ಲ ಎಂದು ಲೇವಡಿ ಮಾಡುತ್ತಿದ್ದರು. ಭಕ್ತಿಯಿಂದ ಗೋಡೆಗಳ ಮೇಲೆ ಕಮಲಗಳನ್ನು ಚಿತ್ರಿಸಿದ ಜನರು ಗೋಡೆಗಳ ಮೇಲೆ ಚಿತ್ರಿಸಿದ ಕಮಲವು ಅಂತಿಮವಾಗಿ ಹೃದಯದ ಮೇಲೂ ಚಿತ್ರಿಸುತ್ತದೆ ಎಂದು ನಾವು ನಂಬಿದ್ದೆವು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸದಸ್ಯತಾ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಸದಸ್ಯತ್ವ ಕುಟುಂಬದ ವಿಸ್ತರಣೆ:

ಬಿಜೆಪಿಗೆ ಸದಸ್ಯತ್ವ ಅಭಿಯಾನವು ಕುಟುಂಬದ ವಿಸ್ತರಣೆಯಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ. ಚುನಾವಣೆಯಲ್ಲಿ ಮಹಿಳೆಯರ ಗರಿಷ್ಠ ಭಾಗವಹಿಸುವಿಕೆಗೆ ಆದ್ಯತೆ ನೀಡಬೇಕಿದೆ. “ಈ ಸದಸ್ಯತ್ವ ಅಭಿಯಾನವು ಕೇವಲ ಆಚರಣೆಯಲ್ಲ. ಇದು ನಮ್ಮ ಕುಟುಂಬದ ವಿಸ್ತರಣೆಯಾಗಿದೆ. ಇದು ಸಂಖ್ಯೆಗಳ ಆಟವಲ್ಲ. ನಾವು ಸಾಧಿಸುವ ಸಂಖ್ಯೆಗಳು ಮುಖ್ಯವಲ್ಲ. ಈ ಸದಸ್ಯತ್ವ ಅಭಿಯಾನವು ಸೈದ್ಧಾಂತಿಕ ಮತ್ತು ಭಾವನಾತ್ಮಕ ಆಂದೋಲನವಾಗಿದೆ ಎಂದು ಮೋದಿ ಹೇಳಿದ್ದಾರೆ.

ಬಿಜೆಪಿಗೆ “ಚುನಾವಣಾ ಯಂತ್ರ” ಎಂಬ ಪದವನ್ನು ಬಳಸುವುದು ಈ ಪಕ್ಷಕ್ಕೆ ಅವಮಾನ ಎಂದು ಹೇಳಿದ ಮೋದಿ ಚುನಾವಣೆಯಲ್ಲಿ ಗೆಲ್ಲುವುದು ಈ ಪಕ್ಷದ ಕಾರ್ಯಕರ್ತರ ಪ್ರಯತ್ನದ ಫಲವಾಗಿದೆ ಎಂದು ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ