AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೇಶ ಮೊದಲು’ ಮಂತ್ರದೊಂದಿಗೆ ಜನಸೇವೆಯಲ್ಲಿ ತೊಡಗಿರುವ ಬಿಜೆಪಿ ದೇಶದ ಅತ್ಯಂತ ನೆಚ್ಚಿನ ಪಕ್ಷ: ಪ್ರಧಾನಿ ಮೋದಿ

BJP Foundation Day 2024: ಬಿಜೆಪಿ ಸ್ಥಾಪನಾ ದಿನದಂದು ಪ್ರಧಾನಿ ನರೇಂದ್ರ ಮೋದಿ ಪಕ್ಷದ ಎಲ್ಲಾ ಕಾರ್ಯಕರ್ತರು ಮತ್ತು ನಾಯಕರಿಗೆ ಶುಭ ಹಾರೈಸಿದ್ದಾರೆ. ಬಿಜೆಪಿ ‘ದೇಶ ಮೊದಲು' ಎಂಬ ಮಂತ್ರದೊಂದಿಗೆ ಜನಸೇವೆಯಲ್ಲಿ ತೊಡಗಿರುವ ದೇಶದ ಅತ್ಯಂತ ನೆಚ್ಚಿನ ಪಕ್ಷ ಎಂದು ಅವರು ಬಣ್ಣಿಸಿದ್ದಾರೆ.

‘ದೇಶ ಮೊದಲು' ಮಂತ್ರದೊಂದಿಗೆ ಜನಸೇವೆಯಲ್ಲಿ ತೊಡಗಿರುವ ಬಿಜೆಪಿ ದೇಶದ ಅತ್ಯಂತ ನೆಚ್ಚಿನ ಪಕ್ಷ: ಪ್ರಧಾನಿ ಮೋದಿ
‘ದೇಶ ಮೊದಲು' ಮಂತ್ರದೊಂದಿಗೆ ಜನಸೇವೆಯಲ್ಲಿ ತೊಡಗಿರುವ ಬಿಜೆಪಿ ದೇಶದ ಅತ್ಯಂತ ನೆಚ್ಚಿನ ಪಕ್ಷ: ಪ್ರಧಾನಿ ಮೋದಿ
ಗಣಪತಿ ಶರ್ಮಾ
|

Updated on:Apr 06, 2024 | 12:10 PM

Share

ನವದೆಹಲಿ, ಏಪ್ರಿಲ್ 6: ಬಿಜೆಪಿ ಸಂಸ್ಥಾಪನಾ ದಿನದಂದು (BJP Foundation Day) ಪ್ರಧಾನಿ ನರೇಂದ್ರ ಮೋದಿ (Narendra Modi) ಪಕ್ಷದ ಎಲ್ಲ ಕಾರ್ಯಕರ್ತರಿಗೆ, ನಾಯಕರಿಗೆ ಶುಭ ಹಾರೈಸಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿರುವ ಅವರು, ‘ದೇಶ ಮೊದಲು’ ಮಂತ್ರದೊಂದಿಗೆ ಜನಸೇವೆಯಲ್ಲಿ ತೊಡಗಿರುವ ಬಿಜೆಪಿ ದೇಶದ ಅತ್ಯಂತ ನೆಚ್ಚಿನ ಪಕ್ಷ ಎಂದು ಉಲ್ಲೇಖಿಸಿದ್ದಾರೆ.

‘ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನದಂದು ದೇಶಾದ್ಯಂತ ನನ್ನ ಪಕ್ಷದ ಶ್ರಮಜೀವಿಗಳಿಗೆ ಅಭಿನಂದನೆಗಳು ಮತ್ತು ಶುಭಾಶಯಗಳು. ಹಲವು ವರ್ಷಗಳಿಂದ ಶ್ರಮ, ಹೋರಾಟ ಮತ್ತು ತ್ಯಾಗದಿಂದ ಪಕ್ಷವನ್ನು ಈ ಎತ್ತರಕ್ಕೆ ಕೊಂಡೊಯ್ದ ಬಿಜೆಪಿಯ ಎಲ್ಲಾ ಮಹಾನ್ ವ್ಯಕ್ತಿಗಳಿಗೆ ಇಂದು ಗೌರವ ಸಲ್ಲಿಸುವ ದಿನವಾಗಿದೆ. ‘ದೇಶ ಮೊದಲು’ ಎಂಬ ಮಂತ್ರದೊಂದಿಗೆ ಜನಸೇವೆಯಲ್ಲಿ ತೊಡಗಿರುವ ಬಿಜೆಪಿ ದೇಶದ ಅತ್ಯಂತ ನೆಚ್ಚಿನ ಪಕ್ಷ ಎಂದು ಇಂದು ನಾನು ಸಂಪೂರ್ಣ ವಿಶ್ವಾಸದಿಂದ ಹೇಳಬಲ್ಲೆ’ ಎಂದು ಎಕ್ಸ್​ ಸಂದೇಶದಲ್ಲಿ ಮೋದಿ ಉಲ್ಲೇಖಿಸಿದ್ದಾರೆ.

‘ಬಿಜೆಪಿ ಸಂಸ್ಥಾಪನಾ ದಿನದಂದು ಭಾರತದ ಉದ್ದಗಲಕ್ಕೂ ಇರುವ ಎಲ್ಲಾ ಪಕ್ಷದ ಕಾರ್ಯಕರ್ತರಿಗೆ ನಾನು ನನ್ನ ಶುಭಾಶಯಗಳನ್ನು ಹೇಳುತ್ತೇನೆ. ಹಲವು ವರ್ಷಗಳ ಪರಿಶ್ರಮದಿಂದ ನಮ್ಮ ಪಕ್ಷವನ್ನು ಕಟ್ಟಿದ ಎಲ್ಲ ಮಹಾನ್ ಮಹಿಳೆಯರು ಮತ್ತು ಪುರುಷರ ಶ್ರಮ, ಹೋರಾಟ ಮತ್ತು ತ್ಯಾಗವನ್ನು ನಾನು ಬಹಳ ಗೌರವದಿಂದ ಸ್ಮರಿಸಿಕೊಳ್ಳುತ್ತೇನೆ’ ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: 17 ರಾಜ್ಯಗಳಲ್ಲಿ ಸರ್ಕಾರ, 303 ಸಂಸದರು: ಬಿಜೆಪಿಯ 44 ವರ್ಷಗಳ ಪಯಣದ ಸಂಕ್ಷಿಪ್ತ ಹಿನ್ನೋಟ ಇಲ್ಲಿದೆ

ಭಾರತೀಯ ಜನತಾ ಪಕ್ಷ ಪ್ರತಿ ವರ್ಷ ಏಪ್ರಿಲ್ 6 ರಂದು ಸಂಸ್ಥಾಪನಾ ದಿನ ಆಚರಿಸುತ್ತಿದೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮತ್ತು ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ 1980 ರ ಏಪ್ರಿಲ್ 6 ರಂದು ಬಿಜೆಪಿಯನ್ನು ಸ್ಥಾಪಿಸಿದ್ದರು.

ಈ ಬಾರಿ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿಯು ಸಂಸ್ಥಾಪನಾ ದಿನದಂದು ದೇಶಾದ್ಯಂತ 10 ಲಕ್ಷಕ್ಕೂ ಹೆಚ್ಚು ಬೂತ್‌ಗಳಲ್ಲಿ ‘ಮತ್ತೊಮ್ಮೆ ಮೋದಿ ಸರ್ಕಾರ’ ಎಂಬ ಘೋಷಣೆಯೊಂದಿಗೆ ವಿಶೇಷ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:09 pm, Sat, 6 April 24

Follow Us
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್