Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರುಣಾಚಲದಲ್ಲಿ ಜೆಡಿಯು ಶಾಸಕರ ಪಕ್ಷಾಂತರಕ್ಕೂ ಬಿಹಾರ ಮೈತ್ರಿಕೂಟಕ್ಕೂ ಸಂಬಂಧವಿಲ್ಲ: ಸುಶೀಲ್ ಕುಮಾರ್ ಮೋದಿ

ಅರುಣಾಚಲ ಪ್ರದೇಶದಲ್ಲಿ ಜೆಡಿಯುವಿನ 6 ಶಾಸಕರು ಬಿಜೆಪಿಗೆ ಪಕ್ಷಾಂತರವಾಗಿದ್ದಾರೆ. ಈ ಘಟನೆ ಬಿಹಾರದ ಬಿಜೆಪಿ-ಜೆಡಿಯು ಮೈತ್ರಿಕೂಟದ ಸರ್ಕಾರಕ್ಕೆ ಧಕ್ಕೆ ತರದು ಎಂದು ರಾಜ್ಯಸಭಾ ಸಂಸದ ಸುಶೀಲ್ ಕುಮಾರ್ ಮೋದಿ ಹೇಳಿದ್ದಾರೆ.

ಅರುಣಾಚಲದಲ್ಲಿ ಜೆಡಿಯು ಶಾಸಕರ ಪಕ್ಷಾಂತರಕ್ಕೂ ಬಿಹಾರ ಮೈತ್ರಿಕೂಟಕ್ಕೂ ಸಂಬಂಧವಿಲ್ಲ: ಸುಶೀಲ್ ಕುಮಾರ್ ಮೋದಿ
ರಾಜ್ಯಸಭಾ ಸದಸ್ಯ ಸುಶೀಲ್ ಕುಮಾರ್ ಮೋದಿ
Follow us
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 28, 2020 | 8:20 PM

ಪಟನಾ: ಜೆಡಿಯು-ಬಿಜೆಪಿ ಶಾಸಕರ ಕೋರಿಕೆಯ ಮೇರೆಗೆ ಬಿಹಾರದಲ್ಲಿ ನಿತೀಶ್​ ಕುಮಾರ್ ಮುಖ್ಯಮಂತ್ರಿಯಾಗಿದ್ದಾರೆ. ಅರುಣಾಚಲ ಪ್ರದೇಶದಲ್ಲಿ ಜೆಡಿಯು ಶಾಸಕರ ಪಕ್ಷಾಂತರವು ಬಿಹಾರ ಸರ್ಕಾರಕ್ಕೆ ಯಾವುದೇ ಧಕ್ಕೆ ತರುವುದಿಲ್ಲ ಎಂದು ಬಿಹಾರದ ಮಾಜಿ ಮುಖ್ಯಮಂತ್ರಿ, ರಾಜ್ಯಸಭಾ ಸಂಸದ ಸುಶೀಲ್ ಕುಮಾರ್ ಮೋದಿ ತಿಳಿಸಿದ್ದಾರೆ.

ಅರುಣಾಚಲ ಪ್ರದೇಶದಲ್ಲಿ ಆರು ಮಂದಿ ಜೆಡಿಯು ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡ ನಂತರ ಬಿಹಾರದಲ್ಲಿ ಮೈತ್ರಿಕೂಟಕ್ಕೆ ಇರಿಸುಮುರಿಸಾಗಿತ್ತು. ಮೈತ್ರಿಕೂಟದ ಅಂಗವಾಗಿರುವ ಪಕ್ಷವೇ ತಮ್ಮ ಶಾಸಕರನ್ನು ಸೆಳೆದ ವಿಚಾರ ರಾಷ್ಟ್ರಪಟ್ಟದಲ್ಲಿ ಜೆಡಿಯು ವ್ಯಂಗ್ಯಕ್ಕೆ ಗುರಿಯಾಗುವಂತೆ ಮಾಡಿತ್ತು. ಈ ಘಟನೆಯ ನಂತರ ಕರೆದಿದ್ದ ಜೆಡಿಯು ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಹೊಸ ಅಧ್ಯಕ್ಷರಾಗಿ ಆರ್​ಸಿಪಿ ಸಿಂಗ್​ ಅವರನ್ನು ಆಯ್ಕೆ ಮಾಡಲಾಗಿತ್ತು.

ಈ ಬೆಳವಣಿಗೆಗಳ ತರುವಾಯ ಹೇಳಿಕೆ ನೀಡಿದ್ದ ಬಿಹಾರ ಸಿಎಂ ನಿತೀಶ್ ಕುಮಾರ್, ಮುಖ್ಯಮಂತ್ರಿ ಪದವಿ ತೊರೆಯಲು ಸಿದ್ಧನಿದ್ದೇನೆ ಎಂದಿದ್ದರು. ಬಿಜೆಪಿ ಜತೆಗಿನ ಸಖ್ಯ ತೊರೆಯುವ ಕುರಿತೂ ಜೆಡಿಯು ಕಾರ್ಯಕರ್ತರು ಒತ್ತಡ ಹಾಕಿದ್ದರು.

ಆದರೆ ನಿತೀಶ್ ಕುಮಾರ್​ ರಾಜಕೀಯ ಅಂಗಳದ ಗೆಳೆಯ ಸುಶೀಲ್ ಕುಮಾರ್ ಮೋದಿ ಈ ಕಾವನ್ನು ಶಮನಗೊಳಿಸುವ ಯತ್ನಕ್ಕೆ ಕೈಹಾಕಿದ್ದಾರೆ. ಅರುಣಾಚಲಪ್ರದೇಶದಲ್ಲಿ ಏನೇ ಆದರೂ ಬಿಹಾರದಲ್ಲಿ ಬಿಜೆಪಿ-ಜೆಡಿಯು ಗೆಳೆತನಕ್ಕೆ ಧಕ್ಕೆ ಬರುವುದಿಲ್ಲ ಎಂದು ಗಾಯಕ್ಕೆ ಮುಲಾಮು ಸವರಿದ್ದಾರೆ.

ಬಿಹಾರದಲ್ಲಿ ಫಲಿತಾಂಶದ ನಂತರ ಬಿಜೆಪಿ ಶಾಸಕರೇ ನಿತೀಶ್ ಕುಮಾರ್ ಅವರಲ್ಲಿ ಮುಖ್ಯಮಂತ್ರಿಯಾಗಲು ಬೇಡಿಕೆಯಿಟ್ಟಿದ್ದರು. ಹೀಗಾಗಿ, ಅರುಣಾಚಲ ಪ್ರದೇಶದಲ್ಲಿ 6 ಶಾಸಕರ ಪಕ್ಷಾಂತರದ ನಂತರವೂ ಬಿಹಾರದಲ್ಲಿ ಬಿಜೆಪಿ-ಜೆಡಿಯು ಮೈತ್ರಿ ಸರ್ಕಾರ ಮುಂದುವರೆಯಲಿದೆ ಎಂದು ಬಿಹಾರದ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ತಿಳಿಸಿದ್ದಾರೆ.

ಸುಶೀಲ್ ಕುಮಾರ್ ಮೋದಿ ತ್ಯಾಗಕ್ಕೆ ಸಿಕ್ತು ​ಪ್ರತಿಫಲ! ಎಲ್​ಜೆಪಿಗೆ ಕೈತಪ್ಪಿತು ಒಂದು ರಾಜ್ಯಸಭಾ ಸ್ಥಾನ

ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ