AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರುಣಾಚಲದಲ್ಲಿ ಜೆಡಿಯು ಶಾಸಕರ ಪಕ್ಷಾಂತರಕ್ಕೂ ಬಿಹಾರ ಮೈತ್ರಿಕೂಟಕ್ಕೂ ಸಂಬಂಧವಿಲ್ಲ: ಸುಶೀಲ್ ಕುಮಾರ್ ಮೋದಿ

ಅರುಣಾಚಲ ಪ್ರದೇಶದಲ್ಲಿ ಜೆಡಿಯುವಿನ 6 ಶಾಸಕರು ಬಿಜೆಪಿಗೆ ಪಕ್ಷಾಂತರವಾಗಿದ್ದಾರೆ. ಈ ಘಟನೆ ಬಿಹಾರದ ಬಿಜೆಪಿ-ಜೆಡಿಯು ಮೈತ್ರಿಕೂಟದ ಸರ್ಕಾರಕ್ಕೆ ಧಕ್ಕೆ ತರದು ಎಂದು ರಾಜ್ಯಸಭಾ ಸಂಸದ ಸುಶೀಲ್ ಕುಮಾರ್ ಮೋದಿ ಹೇಳಿದ್ದಾರೆ.

ಅರುಣಾಚಲದಲ್ಲಿ ಜೆಡಿಯು ಶಾಸಕರ ಪಕ್ಷಾಂತರಕ್ಕೂ ಬಿಹಾರ ಮೈತ್ರಿಕೂಟಕ್ಕೂ ಸಂಬಂಧವಿಲ್ಲ: ಸುಶೀಲ್ ಕುಮಾರ್ ಮೋದಿ
ರಾಜ್ಯಸಭಾ ಸದಸ್ಯ ಸುಶೀಲ್ ಕುಮಾರ್ ಮೋದಿ
guruganesh bhat
| Edited By: |

Updated on: Dec 28, 2020 | 8:20 PM

Share

ಪಟನಾ: ಜೆಡಿಯು-ಬಿಜೆಪಿ ಶಾಸಕರ ಕೋರಿಕೆಯ ಮೇರೆಗೆ ಬಿಹಾರದಲ್ಲಿ ನಿತೀಶ್​ ಕುಮಾರ್ ಮುಖ್ಯಮಂತ್ರಿಯಾಗಿದ್ದಾರೆ. ಅರುಣಾಚಲ ಪ್ರದೇಶದಲ್ಲಿ ಜೆಡಿಯು ಶಾಸಕರ ಪಕ್ಷಾಂತರವು ಬಿಹಾರ ಸರ್ಕಾರಕ್ಕೆ ಯಾವುದೇ ಧಕ್ಕೆ ತರುವುದಿಲ್ಲ ಎಂದು ಬಿಹಾರದ ಮಾಜಿ ಮುಖ್ಯಮಂತ್ರಿ, ರಾಜ್ಯಸಭಾ ಸಂಸದ ಸುಶೀಲ್ ಕುಮಾರ್ ಮೋದಿ ತಿಳಿಸಿದ್ದಾರೆ.

ಅರುಣಾಚಲ ಪ್ರದೇಶದಲ್ಲಿ ಆರು ಮಂದಿ ಜೆಡಿಯು ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡ ನಂತರ ಬಿಹಾರದಲ್ಲಿ ಮೈತ್ರಿಕೂಟಕ್ಕೆ ಇರಿಸುಮುರಿಸಾಗಿತ್ತು. ಮೈತ್ರಿಕೂಟದ ಅಂಗವಾಗಿರುವ ಪಕ್ಷವೇ ತಮ್ಮ ಶಾಸಕರನ್ನು ಸೆಳೆದ ವಿಚಾರ ರಾಷ್ಟ್ರಪಟ್ಟದಲ್ಲಿ ಜೆಡಿಯು ವ್ಯಂಗ್ಯಕ್ಕೆ ಗುರಿಯಾಗುವಂತೆ ಮಾಡಿತ್ತು. ಈ ಘಟನೆಯ ನಂತರ ಕರೆದಿದ್ದ ಜೆಡಿಯು ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಹೊಸ ಅಧ್ಯಕ್ಷರಾಗಿ ಆರ್​ಸಿಪಿ ಸಿಂಗ್​ ಅವರನ್ನು ಆಯ್ಕೆ ಮಾಡಲಾಗಿತ್ತು.

ಈ ಬೆಳವಣಿಗೆಗಳ ತರುವಾಯ ಹೇಳಿಕೆ ನೀಡಿದ್ದ ಬಿಹಾರ ಸಿಎಂ ನಿತೀಶ್ ಕುಮಾರ್, ಮುಖ್ಯಮಂತ್ರಿ ಪದವಿ ತೊರೆಯಲು ಸಿದ್ಧನಿದ್ದೇನೆ ಎಂದಿದ್ದರು. ಬಿಜೆಪಿ ಜತೆಗಿನ ಸಖ್ಯ ತೊರೆಯುವ ಕುರಿತೂ ಜೆಡಿಯು ಕಾರ್ಯಕರ್ತರು ಒತ್ತಡ ಹಾಕಿದ್ದರು.

ಆದರೆ ನಿತೀಶ್ ಕುಮಾರ್​ ರಾಜಕೀಯ ಅಂಗಳದ ಗೆಳೆಯ ಸುಶೀಲ್ ಕುಮಾರ್ ಮೋದಿ ಈ ಕಾವನ್ನು ಶಮನಗೊಳಿಸುವ ಯತ್ನಕ್ಕೆ ಕೈಹಾಕಿದ್ದಾರೆ. ಅರುಣಾಚಲಪ್ರದೇಶದಲ್ಲಿ ಏನೇ ಆದರೂ ಬಿಹಾರದಲ್ಲಿ ಬಿಜೆಪಿ-ಜೆಡಿಯು ಗೆಳೆತನಕ್ಕೆ ಧಕ್ಕೆ ಬರುವುದಿಲ್ಲ ಎಂದು ಗಾಯಕ್ಕೆ ಮುಲಾಮು ಸವರಿದ್ದಾರೆ.

ಬಿಹಾರದಲ್ಲಿ ಫಲಿತಾಂಶದ ನಂತರ ಬಿಜೆಪಿ ಶಾಸಕರೇ ನಿತೀಶ್ ಕುಮಾರ್ ಅವರಲ್ಲಿ ಮುಖ್ಯಮಂತ್ರಿಯಾಗಲು ಬೇಡಿಕೆಯಿಟ್ಟಿದ್ದರು. ಹೀಗಾಗಿ, ಅರುಣಾಚಲ ಪ್ರದೇಶದಲ್ಲಿ 6 ಶಾಸಕರ ಪಕ್ಷಾಂತರದ ನಂತರವೂ ಬಿಹಾರದಲ್ಲಿ ಬಿಜೆಪಿ-ಜೆಡಿಯು ಮೈತ್ರಿ ಸರ್ಕಾರ ಮುಂದುವರೆಯಲಿದೆ ಎಂದು ಬಿಹಾರದ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ತಿಳಿಸಿದ್ದಾರೆ.

ಸುಶೀಲ್ ಕುಮಾರ್ ಮೋದಿ ತ್ಯಾಗಕ್ಕೆ ಸಿಕ್ತು ​ಪ್ರತಿಫಲ! ಎಲ್​ಜೆಪಿಗೆ ಕೈತಪ್ಪಿತು ಒಂದು ರಾಜ್ಯಸಭಾ ಸ್ಥಾನ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!