AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಕಿಸಾನ್​ ಮೋರ್ಚಾ ಅಧ್ಯಕ್ಷ ಮತ್ತವರ ಪತ್ನಿಯ ಹತ್ಯೆ; ಉಗ್ರರ ಗುಂಡಿಗೆ ಇಬ್ಬರೂ ಬಲಿ

ಶುಕ್ರವಾರ ಜಮ್ಮು-ಕಾಶ್ಮೀರದ 11 ಸರ್ಕಾರಿ ಉದ್ಯೋಗಿಗಳು ಉಗ್ರರೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪದಡಿ ಅಮಾನತುಗೊಂಡಿದ್ದರು. ಇನ್ನೊಂದೆಡೆ ಜಮ್ಮು-ಕಾಶ್ಮಿರದಲ್ಲಿ ಇತ್ತೀಚೆಗೆ ಡ್ರೋನ್​ಗಳ ಹಾರಾಟ ಹೆಚ್ಚಾಗಿದೆ.

ಬಿಜೆಪಿ ಕಿಸಾನ್​ ಮೋರ್ಚಾ ಅಧ್ಯಕ್ಷ ಮತ್ತವರ ಪತ್ನಿಯ ಹತ್ಯೆ; ಉಗ್ರರ ಗುಂಡಿಗೆ ಇಬ್ಬರೂ ಬಲಿ
ಬಿಜೆಪಿ ನಾಯಕನ ಗುಂಡಿನ ದಾಳಿ ನಡೆದ ಸ್ಥಳಕ್ಕೆ ಆಗಮಿಸಿದ ಪೊಲೀಸರು
TV9 Web
| Edited By: |

Updated on: Aug 09, 2021 | 5:58 PM

Share

ದೆಹಲಿ: ಜಮ್ಮು-ಕಾಶ್ಮೀರದ ಅನಂತ್​ನಾಗ್​ ಜಿಲ್ಲೆಯಲ್ಲಿ ಬಿಜೆಪಿ ಕಿಸಾನ್​ ಮೋರ್ಚಾ ನಾಯಕ (BJP Kisan Morcha President) ಮತ್ತು ಅವರ ಪತ್ನಿಯನ್ನು ಇಂದು ಉಗ್ರರು ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಬಿಜೆಪಿಯ ಕುಲಗಾಂವ್​ನ ಕಿಸಾನ್​ ಮೋರ್ಚಾ ಅಧ್ಯಕ್ಷ ಗುಲಾಮ್​ ರಸೂಲ್​ ದಾರ್​ ಮತ್ತು ಅವರ ಪತ್ನಿಗೆ ಉಗ್ರರು ಗುಂಡು (Terror Attack) ಹೊಡೆದಿದ್ದರು. ಇಬ್ಬರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಗುಲಾಮ್​ ರಸೂಲ್ ದಾರ್​ ಮತ್ತವರ ಪತ್ನಿ ಇಬ್ಬರೂ ಬದುಕುಳಿಯಲಿಲ್ಲ ಎಂದು ಬಿಜೆಪಿ ನಾಯಕ ಅಲ್ತಾಫ್​ ಠಾಕೂರ್ ತಿಳಿಸಿದ್ದಾರೆ.

ಅನಂತ್​ನಾಗ್​ನ ಲಾಲ್​ಚೌಕ್​​ನಲ್ಲಿ ದುರ್ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.  ಗುಲಾಮ್​ ರಸೂಲ್​ ದಾರ್ ದಂಪತಿ ಹತ್ಯೆಯನ್ನು ಬಿಜೆಪಿ ಖಂಡಿಸಿದ್ದು, ಇದೊಂದು ತುಂಬ ಭೀಕರವಾದ ಹತ್ಯೆ ಎಂದು ಹೇಳಿದೆ. ಹಾಗೇ, ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್​ ಅಬ್ದುಲ್ಲಾ ಅವರು ಈ ಹತ್ಯೆಯನ್ನು ಖಂಡಿಸಿದ್ದಾರೆ. ರಾಷ್ಟ್ರೀಯ ತನಿಖಾ ದಳ (NIA) ಇತ್ತೀಚೆಗೆ ಅನಂತ್​ನಾಗ್​ನ ಹಲವು ಪ್ರದೇಶಗಳಲ್ಲಿ ಶೋಧ ಕಾರ್ಯ ನಡೆಸಿತ್ತು. ಉಗ್ರಸಂಘಟನೆಗಳಿಗೆ ಧನಸಹಾಯ ನೀಡುತ್ತಿದ್ದಾರೆ ಎಂಬ ಆರೋಪದಡಿ ಈ ಶೋಧ ಕಾರ್ಯ ನಡೆದಿತ್ತು. ಅಷ್ಟೇ ಅಲ್ಲ, ಜು.10 ರಂದು ಇದೇ ಪ್ರಕರಣದಡಿ ಆರು ಮಂದಿಯನ್ನು ಬಂಧಿಸಿದೆ.

ಶುಕ್ರವಾರ ಜಮ್ಮು-ಕಾಶ್ಮೀರದ 11 ಸರ್ಕಾರಿ ಉದ್ಯೋಗಿಗಳು ಉಗ್ರರೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪದಡಿ ಅಮಾನತುಗೊಂಡಿದ್ದರು. ಇನ್ನೊಂದೆಡೆ ಜಮ್ಮು-ಕಾಶ್ಮಿರದಲ್ಲಿ ಇತ್ತೀಚೆಗೆ ಡ್ರೋನ್​ಗಳ ಹಾರಾಟ ಹೆಚ್ಚಾಗಿದೆ. ಜೂನ್​ನಲ್ಲಿ ಜಮ್ಮುವಿನ ವಾಯುನೆಲೆ ಮೇಲೆ ಎರಡು ಸ್ಫೋಟಗೊಂಡ ಬೆನ್ನಲ್ಲೇ ಪದೇಪದೆ ಡ್ರೋನ್​ ಹಾರಾಡುತ್ತಿದೆ.

ಇದನ್ನೂ ಓದಿ: Health Tips: ಈ ನಾಲ್ಕು ಬಗೆಯ ಅಕ್ಕಿಗಳಲ್ಲಿದೆ ಆರೋಗ್ಯ ಪ್ರಯೋಜನಗಳು

ಟೋಕಿಯೊದಿಂದ ಭಾರತಕ್ಕೆ ವಾಪಸ್ಸಾದ ಒಲಂಪಿಕ್ಸ್ ಹೀರೋಗಳು; ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ

Follow Us
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!