AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಕಿಸಾನ್​ ಮೋರ್ಚಾ ಅಧ್ಯಕ್ಷ ಮತ್ತವರ ಪತ್ನಿಯ ಹತ್ಯೆ; ಉಗ್ರರ ಗುಂಡಿಗೆ ಇಬ್ಬರೂ ಬಲಿ

ಶುಕ್ರವಾರ ಜಮ್ಮು-ಕಾಶ್ಮೀರದ 11 ಸರ್ಕಾರಿ ಉದ್ಯೋಗಿಗಳು ಉಗ್ರರೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪದಡಿ ಅಮಾನತುಗೊಂಡಿದ್ದರು. ಇನ್ನೊಂದೆಡೆ ಜಮ್ಮು-ಕಾಶ್ಮಿರದಲ್ಲಿ ಇತ್ತೀಚೆಗೆ ಡ್ರೋನ್​ಗಳ ಹಾರಾಟ ಹೆಚ್ಚಾಗಿದೆ.

ಬಿಜೆಪಿ ಕಿಸಾನ್​ ಮೋರ್ಚಾ ಅಧ್ಯಕ್ಷ ಮತ್ತವರ ಪತ್ನಿಯ ಹತ್ಯೆ; ಉಗ್ರರ ಗುಂಡಿಗೆ ಇಬ್ಬರೂ ಬಲಿ
ಬಿಜೆಪಿ ನಾಯಕನ ಗುಂಡಿನ ದಾಳಿ ನಡೆದ ಸ್ಥಳಕ್ಕೆ ಆಗಮಿಸಿದ ಪೊಲೀಸರು
TV9 Web
| Updated By: Lakshmi Hegde|

Updated on: Aug 09, 2021 | 5:58 PM

Share

ದೆಹಲಿ: ಜಮ್ಮು-ಕಾಶ್ಮೀರದ ಅನಂತ್​ನಾಗ್​ ಜಿಲ್ಲೆಯಲ್ಲಿ ಬಿಜೆಪಿ ಕಿಸಾನ್​ ಮೋರ್ಚಾ ನಾಯಕ (BJP Kisan Morcha President) ಮತ್ತು ಅವರ ಪತ್ನಿಯನ್ನು ಇಂದು ಉಗ್ರರು ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಬಿಜೆಪಿಯ ಕುಲಗಾಂವ್​ನ ಕಿಸಾನ್​ ಮೋರ್ಚಾ ಅಧ್ಯಕ್ಷ ಗುಲಾಮ್​ ರಸೂಲ್​ ದಾರ್​ ಮತ್ತು ಅವರ ಪತ್ನಿಗೆ ಉಗ್ರರು ಗುಂಡು (Terror Attack) ಹೊಡೆದಿದ್ದರು. ಇಬ್ಬರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಗುಲಾಮ್​ ರಸೂಲ್ ದಾರ್​ ಮತ್ತವರ ಪತ್ನಿ ಇಬ್ಬರೂ ಬದುಕುಳಿಯಲಿಲ್ಲ ಎಂದು ಬಿಜೆಪಿ ನಾಯಕ ಅಲ್ತಾಫ್​ ಠಾಕೂರ್ ತಿಳಿಸಿದ್ದಾರೆ.

ಅನಂತ್​ನಾಗ್​ನ ಲಾಲ್​ಚೌಕ್​​ನಲ್ಲಿ ದುರ್ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.  ಗುಲಾಮ್​ ರಸೂಲ್​ ದಾರ್ ದಂಪತಿ ಹತ್ಯೆಯನ್ನು ಬಿಜೆಪಿ ಖಂಡಿಸಿದ್ದು, ಇದೊಂದು ತುಂಬ ಭೀಕರವಾದ ಹತ್ಯೆ ಎಂದು ಹೇಳಿದೆ. ಹಾಗೇ, ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್​ ಅಬ್ದುಲ್ಲಾ ಅವರು ಈ ಹತ್ಯೆಯನ್ನು ಖಂಡಿಸಿದ್ದಾರೆ. ರಾಷ್ಟ್ರೀಯ ತನಿಖಾ ದಳ (NIA) ಇತ್ತೀಚೆಗೆ ಅನಂತ್​ನಾಗ್​ನ ಹಲವು ಪ್ರದೇಶಗಳಲ್ಲಿ ಶೋಧ ಕಾರ್ಯ ನಡೆಸಿತ್ತು. ಉಗ್ರಸಂಘಟನೆಗಳಿಗೆ ಧನಸಹಾಯ ನೀಡುತ್ತಿದ್ದಾರೆ ಎಂಬ ಆರೋಪದಡಿ ಈ ಶೋಧ ಕಾರ್ಯ ನಡೆದಿತ್ತು. ಅಷ್ಟೇ ಅಲ್ಲ, ಜು.10 ರಂದು ಇದೇ ಪ್ರಕರಣದಡಿ ಆರು ಮಂದಿಯನ್ನು ಬಂಧಿಸಿದೆ.

ಶುಕ್ರವಾರ ಜಮ್ಮು-ಕಾಶ್ಮೀರದ 11 ಸರ್ಕಾರಿ ಉದ್ಯೋಗಿಗಳು ಉಗ್ರರೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪದಡಿ ಅಮಾನತುಗೊಂಡಿದ್ದರು. ಇನ್ನೊಂದೆಡೆ ಜಮ್ಮು-ಕಾಶ್ಮಿರದಲ್ಲಿ ಇತ್ತೀಚೆಗೆ ಡ್ರೋನ್​ಗಳ ಹಾರಾಟ ಹೆಚ್ಚಾಗಿದೆ. ಜೂನ್​ನಲ್ಲಿ ಜಮ್ಮುವಿನ ವಾಯುನೆಲೆ ಮೇಲೆ ಎರಡು ಸ್ಫೋಟಗೊಂಡ ಬೆನ್ನಲ್ಲೇ ಪದೇಪದೆ ಡ್ರೋನ್​ ಹಾರಾಡುತ್ತಿದೆ.

ಇದನ್ನೂ ಓದಿ: Health Tips: ಈ ನಾಲ್ಕು ಬಗೆಯ ಅಕ್ಕಿಗಳಲ್ಲಿದೆ ಆರೋಗ್ಯ ಪ್ರಯೋಜನಗಳು

ಟೋಕಿಯೊದಿಂದ ಭಾರತಕ್ಕೆ ವಾಪಸ್ಸಾದ ಒಲಂಪಿಕ್ಸ್ ಹೀರೋಗಳು; ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!