AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರಷ್ಟ ಡಿಎಂಕೆ ಸರ್ಕಾರದ ಸೇಡಿನ ಕ್ರಮ ಜಾರಿಗೊಳಿಸುವುದಷ್ಟೇ ತಮಿಳುನಾಡು ಪೊಲೀಸರ ಕೆಲಸವೇ; ಬಿಜೆಪಿ ನಾಯಕ ಅಣ್ಣಾಮಲೈ ಪ್ರಶ್ನೆ

ಹಿರಿಯ ರಾಜಕೀಯ ವಿಶ್ಲೇಷಕ, ಯೂಟ್ಯೂಬರ್, ಪ್ರಸಿದ್ಧ ಪ್ರಕಾಶನ ಸಂಸ್ಥೆಯ ಸಂಸ್ಥಾಪಕ ಬದರಿ ಶೇಷಾದ್ರಿ ಅವರನ್ನು ಬಂಧಿಸಿರುವ ವಿಚಾರವಾಗಿ ತಮಿಳುನಾಡಿನ ಡಿಎಂಕೆ ಸರ್ಕಾರದ ವಿರುದ್ಧ ಅಣ್ಣಾಮಲೈ ವಾಗ್ದಾಳಿ ನಡೆಸಿದ್ದಾರೆ.

ಭ್ರಷ್ಟ ಡಿಎಂಕೆ ಸರ್ಕಾರದ ಸೇಡಿನ ಕ್ರಮ ಜಾರಿಗೊಳಿಸುವುದಷ್ಟೇ ತಮಿಳುನಾಡು ಪೊಲೀಸರ ಕೆಲಸವೇ; ಬಿಜೆಪಿ ನಾಯಕ ಅಣ್ಣಾಮಲೈ ಪ್ರಶ್ನೆ
ಕೆ ಅಣ್ಣಾಮಲೈ ಮತ್ತು ಶೇಷಾದ್ರಿ
ಗಣಪತಿ ಶರ್ಮಾ
|

Updated on: Jul 29, 2023 | 11:45 AM

Share

ಚೆನ್ನೈ: ಭ್ರಷ್ಟ ಡಿಎಂಕೆ ಸರ್ಕಾರದ ಸೇಡಿನ ಕ್ರಮ ಜಾರಿಗೊಳಿಸುವುದಷ್ಟೇ ತಮಿಳುನಾಡು ಪೊಲೀಸರ ಕೆಲಸವೇ ಎಂದು ಬಿಜೆಪಿಯ ತಮಿಳುನಾಡು ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ (K Annamalai) ಪ್ರಶ್ನಿಸಿದ್ದಾರೆ. ಅವರ ನೇತೃತ್ವದಲ್ಲಿ ಆರಂಭವಾಗಿರುವ ‘ಎನ್ ಮಣ್ಣ್ ಎನ್ ಮಕ್ಕಳ್’ (En Mann En Makkal) ಯಾತ್ರೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ರಾಮೇಶ್ವರಂನಲ್ಲಿ ಚಾಲನೆ ನೀಡಿದ್ದರು. ಯಾತ್ರೆ ಪ್ರಗತಿಯಲ್ಲಿದ್ದು, ಇದೇ ವೇಳೆ, ತಮಿಳುನಾಡು ಸರ್ಕಾರದ ರಾಜಕೀಯ ಕ್ರಮಗಳ ವಿರುದ್ಧ ಅಣ್ಣಾಮಲೈ ವಾಗ್ದಾಳಿ ನಡೆಸಿದ್ದಾರೆ.

ಹಿರಿಯ ರಾಜಕೀಯ ವಿಶ್ಲೇಷಕ, ಯೂಟ್ಯೂಬರ್, ಪ್ರಸಿದ್ಧ ಪ್ರಕಾಶನ ಸಂಸ್ಥೆಯ ಸಂಸ್ಥಾಪಕ ಬದರಿ ಶೇಷಾದ್ರಿ ಅವರನ್ನು ಬಂಧಿಸಿರುವ ವಿಚಾರವಾಗಿ ತಮಿಳುನಾಡಿನ ಡಿಎಂಕೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಅಣ್ಣಾಮಲೈ, ಶೇಷಾದ್ರಿ ಅವರನ್ನು ಇಂದು ಬೆಳಗ್ಗೆ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ಇದನ್ನು ತಮಿಳುನಾಡು ಬಿಜೆಪಿ ಬಲವಾಗಿ ಖಂಡಿಸುತ್ತದೆ. ಈ ಭ್ರಷ್ಟ ಡಿಎಂಕೆ ಸರ್ಕಾರವು ಸಾಮಾನ್ಯ ಜನರ ಅಭಿಪ್ರಾಯಗಳನ್ನು ಹತ್ತಿಕ್ಕಲು ಬಂಧನಕ್ಕೆ ಆದೇಶ ನೀಡುತ್ತಿದೆ. ಭ್ರಷ್ಟ ಡಿಎಂಕೆ ಸರ್ಕಾರದ ಸೇಡಿನ ಕ್ರಮಗಳನ್ನು ಜಾರಿಗೊಳಿಸುವುದು ಮಾತ್ರ ತಮಿಳುನಾಡು ಪೊಲೀಸರ ಕೆಲಸವೇ ಎಂದು ಟ್ವೀಟ್ ಮಾಡಿದ್ದಾರೆ.

ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನವೊಂದರಲ್ಲಿ ಮಣಿಪುರದ ಹಿಂಸಾಚಾರಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್​​ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಬಗ್ಗೆ ನೀಡಿದ್ದ ಹೇಳಿಕೆಗಾಗಿ ಅವರನ್ನು ಬಂಧಿಸಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: Tamil Nadu: ರಾಮೇಶ್ವರಂನಲ್ಲಿ ಅಣ್ಣಾಮಲೈ ಅವರ ‘ಎನ್ ಮಣ್ಣ್ ಎನ್ ಮಕ್ಕಳ್’ ಪಾದಯಾತ್ರೆಗೆ ಅಮಿತ್ ಶಾ ಚಾಲನೆ

ಮಣಿಪುರ ಹಿಂಸಾಚಾರದ ವಿಷಯದಲ್ಲಿ ನ್ಯಾಯಾಲಯ ವಿನಾ ಕಾರಣ ಮಧ್ಯಪ್ರವೇಶ ಮಾಡುತ್ತಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದರು. ಸಿಜೆಐ ಅವರು ಮಣಿಪುರದಲ್ಲಿ ಬಂದೂಕು ಹಿಡಿದು ನಿಲ್ಲುವ ಧೈರ್ಯ ಮಾಡುತ್ತಾರಾ ಎಂದೂ ಅವರು ಪ್ರಶ್ನಿಸಿದ್ದರು ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಆದರೆ, ಸುಪ್ರೀಂ ಕೋರ್ಟ್ ಆಗಲೀ ನ್ಯಾಯಾಂಗವಾಗಲೀ ಯಾವುದೇ ಸೂಚನೆ ನೀಡದೆ ತಮಿಳುನಾಡು ಸರ್ಕಾರವು ರಾಜಕೀಯ ಪ್ರೇರಿತವಾಗಿ ಶೇಷಾದ್ರಿ ಅವರನ್ನು ಬಂಧಿಸಿದೆ ಎಂದು ಬಿಜೆಪಿ ಟೀಕಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ