AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಪೋಸ್ಟ್ ತಡೆಹಿಡಿದ ಫೇಸ್‌ಬುಕ್: ಇದು ಭಾರತದ ಪ್ರಜಾಪ್ರಭುತ್ವದ ಮೇಲಿನ ಹಸ್ತಕ್ಷೇಪ, ತಜಿಂದರ್ ಬಗ್ಗಾ ಆಕ್ರೋಶ

ದೇಶದಲ್ಲಿ ನೀಟ್(NEET) ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಕೇಂದ್ರ ಸರ್ಕಾರ ತಂದಿರುವ ಕಠಿಣ ಕಾನೂನು ಮತ್ತು ಕೈಗೊಂಡಿರುವ ಕ್ರಮಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ್ದ ಸಾಮಾಜಿಕ ಮಾಧ್ಯಮ ಪೋಸ್ಟ್ ಅನ್ನು ಭಾರತದಲ್ಲಿ ವೀಕ್ಷಿಸದಂತೆ ಫೇಸ್‌ಬುಕ್ ತಡೆಹಿಡಿದಿರುವುದು ಭಾರಿ ವಿವಾದಕ್ಕೆ ಕಾರಣವಾಗಿದೆ. ಈ ಕುರಿತು ಬಿಜೆಪಿ ನಾಯಕ ತಜಿಂದರ್ ಪಾಲ್ ಸಿಂಗ್ ಬಗ್ಗಾ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಫೇಸ್‌ಬುಕ್ ಸಂಸ್ಥೆಯು ಭಾರತದ ಡಿಜಿಟಲ್ ಸಾರ್ವಭೌಮತ್ವ ಮತ್ತು ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ನಿಯಮಬಾಹಿರವಾಗಿ ಹಸ್ತಕ್ಷೇಪ ಮಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಪ್ರಧಾನಿ ಮೋದಿ ಪೋಸ್ಟ್ ತಡೆಹಿಡಿದ ಫೇಸ್‌ಬುಕ್: ಇದು ಭಾರತದ ಪ್ರಜಾಪ್ರಭುತ್ವದ ಮೇಲಿನ ಹಸ್ತಕ್ಷೇಪ, ತಜಿಂದರ್ ಬಗ್ಗಾ ಆಕ್ರೋಶ
ನರೇಂದ್ರ ಮೋದಿ
ನಯನಾ ರಾಜೀವ್
|

Updated on:Jul 28, 2026 | 9:56 AM

Share

ನವದೆಹಲಿ,ಜುಲೈ 28: ದೇಶದಲ್ಲಿ ನೀಟ್(NEET) ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಕೇಂದ್ರ ಸರ್ಕಾರ ತಂದಿರುವ ಕಠಿಣ ಕಾನೂನು ಮತ್ತು ಕೈಗೊಂಡಿರುವ ಕ್ರಮಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ್ದ ಸಾಮಾಜಿಕ ಮಾಧ್ಯಮ ಪೋಸ್ಟ್ ಅನ್ನು ಭಾರತದಲ್ಲಿ ವೀಕ್ಷಿಸದಂತೆ ಫೇಸ್‌ಬುಕ್ ತಡೆಹಿಡಿದಿರುವುದು ಭಾರಿ ವಿವಾದಕ್ಕೆ ಕಾರಣವಾಗಿದೆ. ಈ ಕುರಿತು ಬಿಜೆಪಿ ನಾಯಕ ತಜಿಂದರ್ ಪಾಲ್ ಸಿಂಗ್ ಬಗ್ಗಾ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಫೇಸ್‌ಬುಕ್ ಸಂಸ್ಥೆಯು ಭಾರತದ ಡಿಜಿಟಲ್ ಸಾರ್ವಭೌಮತ್ವ ಮತ್ತು ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ನಿಯಮಬಾಹಿರವಾಗಿ ಹಸ್ತಕ್ಷೇಪ ಮಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ತಜಿಂದರ್ ಬಗ್ಗಾ ಅವರ ಪ್ರಮುಖ ಆರೋಪಗಳು ಫೇಸ್‌ಬುಕ್ ತನ್ನ ಎಲ್ಲಾ ಮಿತಿಗಳನ್ನು ಮೀರಿದೆ. ಭಾರತದ ಪ್ರಧಾನಮಂತ್ರಿಯವರ ಪೋಸ್ಟ್ ಅನ್ನು ಭಾರತೀಯರೇ ನೋಡದಂತೆ ತಡೆಯಲು ಈ ವಿದೇಶಿ ವೇದಿಕೆಗೆ ಅಧಿಕಾರ ಕೊಟ್ಟವರು ಯಾರು?” ಎಂದು ಬಗ್ಗಾ ಪ್ರಶ್ನಿಸಿದ್ದಾರೆ. ಇದು ಕೇವಲ ಕಂಟೆಂಟ್ ನಿಯಂತ್ರಣ ಅಲ್ಲ, ಬದಲಿಗೆ ಭಾರತದ ಪ್ರಜಾಪ್ರಭುತ್ವದ ಮೇಲಿನ ಶೋಚನೀಯ ಹಸ್ತಕ್ಷೇಪ. ಫೇಸ್‌ಬುಕ್ ಯಾರ ‘ಕಾನೂನುಬದ್ಧ ವಿನಂತಿ’ಯನ್ನು ಆಧರಿಸಿ ಈ ಪೋಸ್ಟ್ ತೆಗೆದುಹಾಕಿದೆ ಎಂಬುದನ್ನು ದೇಶದ ಜನರಿಗೆ ಬಹಿರಂಗಪಡಿಸಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಮತ್ತಷ್ಟು ಓದಿ: ನಾನು ಬೀದಿ ಹೋರಾಟಗಾರ: ಜೈರಾಮ್ ರಮೇಶ್ ಹೇಳಿಕೆಗೆ ಧರ್ಮೇಂದ್ರ ಪ್ರಧಾನ್ ತಿರುಗೇಟು

ದೇಶಾದ್ಯಂತ ಸದ್ದು ಮಾಡುತ್ತಿರುವ ನೀಟ್ ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಮಾಫಿಯಾ ವಿರುದ್ಧ ಕೇಂದ್ರ ಸರ್ಕಾರ ತಂದಿರುವ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ-2026’ ಹಾಗೂ ನಂದನ್ ನಿಲೇಕಣಿ ನೇತೃತ್ವದ ಉನ್ನತಾಧಿಕಾರದ ಕಾರ್ಯಪಡೆ ರಚನೆಯ ಕುರಿತು ಪ್ರಧಾನಿ ಮೋದಿ ಪೋಸ್ಟ್ ಹಂಚಿಕೊಂಡಿದ್ದರು.

ಪೋಸ್ಟ್​

ಭಾರತದಲ್ಲಿ ಐಟಿ ಕಾಯ್ದೆಯಡಿ ಸರ್ಕಾರ ಅಥವಾ ನಿಯಂತ್ರಕ ಮಂಡಳಿಗಳ ವಿನಂತಿಯ ಮೇರೆಗೆ ನಿರ್ದಿಷ್ಟ ಪೋಸ್ಟ್‌ಗಳನ್ನು ತಡೆಯಲು ಅವಕಾಶವಿದೆಯಾದರೂ, ಸ್ವತಃ ದೇಶದ ಪ್ರಧಾನಿಯವರ ಅಧಿಕೃತ ಹೇಳಿಕೆಯ ಪೋಸ್ಟ್ ತಡೆಯಲ್ಪಟ್ಟಿರುವುದು ದೊಡ್ಡ ಮಟ್ಟದ ರಾಜಕೀಯ ಮತ್ತು ಕಾನೂನು ಚರ್ಚೆಗೆ ಕಾರಣವಾಗಿದೆ.

ಇತ್ತೀಚೆಗೆ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಚರ್ಚೆಗಳ ನಡುವೆ, ಸಾಮಾಜಿಕ ಜಾಲತಾಣ ಸಂಸ್ಥೆಗಳು ಹಾಗೂ ಕೇಂದ್ರ ಸರ್ಕಾರದ ನಡುವಿನ ಡಿಜಿಟಲ್ ನೀತಿ ನಿಯಮಗಳ ಸಂಘರ್ಷ ಮತ್ತೆ ಮುನ್ನೆಲೆಗೆ ಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:54 am, Tue, 28 July 26

Follow Us
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ
ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ