ಪ್ರಧಾನಿ ಮೋದಿ ಪೋಸ್ಟ್ ತಡೆಹಿಡಿದ ಫೇಸ್‌ಬುಕ್: ಇದು ಭಾರತದ ಪ್ರಜಾಪ್ರಭುತ್ವದ ಮೇಲಿನ ಹಸ್ತಕ್ಷೇಪ, ತಜಿಂದರ್ ಬಗ್ಗಾ ಆಕ್ರೋಶ

ದೇಶದಲ್ಲಿ ನೀಟ್(NEET) ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಕೇಂದ್ರ ಸರ್ಕಾರ ತಂದಿರುವ ಕಠಿಣ ಕಾನೂನು ಮತ್ತು ಕೈಗೊಂಡಿರುವ ಕ್ರಮಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ್ದ ಸಾಮಾಜಿಕ ಮಾಧ್ಯಮ ಪೋಸ್ಟ್ ಅನ್ನು ಭಾರತದಲ್ಲಿ ವೀಕ್ಷಿಸದಂತೆ ಫೇಸ್‌ಬುಕ್ ತಡೆಹಿಡಿದಿರುವುದು ಭಾರಿ ವಿವಾದಕ್ಕೆ ಕಾರಣವಾಗಿದೆ. ಈ ಕುರಿತು ಬಿಜೆಪಿ ನಾಯಕ ತಜಿಂದರ್ ಪಾಲ್ ಸಿಂಗ್ ಬಗ್ಗಾ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಫೇಸ್‌ಬುಕ್ ಸಂಸ್ಥೆಯು ಭಾರತದ ಡಿಜಿಟಲ್ ಸಾರ್ವಭೌಮತ್ವ ಮತ್ತು ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ನಿಯಮಬಾಹಿರವಾಗಿ ಹಸ್ತಕ್ಷೇಪ ಮಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಪ್ರಧಾನಿ ಮೋದಿ ಪೋಸ್ಟ್ ತಡೆಹಿಡಿದ ಫೇಸ್‌ಬುಕ್: ಇದು ಭಾರತದ ಪ್ರಜಾಪ್ರಭುತ್ವದ ಮೇಲಿನ ಹಸ್ತಕ್ಷೇಪ, ತಜಿಂದರ್ ಬಗ್ಗಾ ಆಕ್ರೋಶ
ನರೇಂದ್ರ ಮೋದಿ

Updated on: Jul 28, 2026 | 9:56 AM

ನವದೆಹಲಿ,ಜುಲೈ 28: ದೇಶದಲ್ಲಿ ನೀಟ್(NEET) ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಕೇಂದ್ರ ಸರ್ಕಾರ ತಂದಿರುವ ಕಠಿಣ ಕಾನೂನು ಮತ್ತು ಕೈಗೊಂಡಿರುವ ಕ್ರಮಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ್ದ ಸಾಮಾಜಿಕ ಮಾಧ್ಯಮ ಪೋಸ್ಟ್ ಅನ್ನು ಭಾರತದಲ್ಲಿ ವೀಕ್ಷಿಸದಂತೆ ಫೇಸ್‌ಬುಕ್ ತಡೆಹಿಡಿದಿರುವುದು ಭಾರಿ ವಿವಾದಕ್ಕೆ ಕಾರಣವಾಗಿದೆ. ಈ ಕುರಿತು ಬಿಜೆಪಿ ನಾಯಕ ತಜಿಂದರ್ ಪಾಲ್ ಸಿಂಗ್ ಬಗ್ಗಾ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಫೇಸ್‌ಬುಕ್ ಸಂಸ್ಥೆಯು ಭಾರತದ ಡಿಜಿಟಲ್ ಸಾರ್ವಭೌಮತ್ವ ಮತ್ತು ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ನಿಯಮಬಾಹಿರವಾಗಿ ಹಸ್ತಕ್ಷೇಪ ಮಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ತಜಿಂದರ್ ಬಗ್ಗಾ ಅವರ ಪ್ರಮುಖ ಆರೋಪಗಳು
ಫೇಸ್‌ಬುಕ್ ತನ್ನ ಎಲ್ಲಾ ಮಿತಿಗಳನ್ನು ಮೀರಿದೆ. ಭಾರತದ ಪ್ರಧಾನಮಂತ್ರಿಯವರ ಪೋಸ್ಟ್ ಅನ್ನು ಭಾರತೀಯರೇ ನೋಡದಂತೆ ತಡೆಯಲು ಈ ವಿದೇಶಿ ವೇದಿಕೆಗೆ ಅಧಿಕಾರ ಕೊಟ್ಟವರು ಯಾರು?” ಎಂದು ಬಗ್ಗಾ ಪ್ರಶ್ನಿಸಿದ್ದಾರೆ. ಇದು ಕೇವಲ ಕಂಟೆಂಟ್ ನಿಯಂತ್ರಣ ಅಲ್ಲ, ಬದಲಿಗೆ ಭಾರತದ ಪ್ರಜಾಪ್ರಭುತ್ವದ ಮೇಲಿನ ಶೋಚನೀಯ ಹಸ್ತಕ್ಷೇಪ. ಫೇಸ್‌ಬುಕ್ ಯಾರ ‘ಕಾನೂನುಬದ್ಧ ವಿನಂತಿ’ಯನ್ನು ಆಧರಿಸಿ ಈ ಪೋಸ್ಟ್ ತೆಗೆದುಹಾಕಿದೆ ಎಂಬುದನ್ನು ದೇಶದ ಜನರಿಗೆ ಬಹಿರಂಗಪಡಿಸಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಮತ್ತಷ್ಟು ಓದಿ: ನಾನು ಬೀದಿ ಹೋರಾಟಗಾರ: ಜೈರಾಮ್ ರಮೇಶ್ ಹೇಳಿಕೆಗೆ ಧರ್ಮೇಂದ್ರ ಪ್ರಧಾನ್ ತಿರುಗೇಟು

ದೇಶಾದ್ಯಂತ ಸದ್ದು ಮಾಡುತ್ತಿರುವ ನೀಟ್ ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಮಾಫಿಯಾ ವಿರುದ್ಧ ಕೇಂದ್ರ ಸರ್ಕಾರ ತಂದಿರುವ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ-2026’ ಹಾಗೂ ನಂದನ್ ನಿಲೇಕಣಿ ನೇತೃತ್ವದ ಉನ್ನತಾಧಿಕಾರದ ಕಾರ್ಯಪಡೆ ರಚನೆಯ ಕುರಿತು ಪ್ರಧಾನಿ ಮೋದಿ ಪೋಸ್ಟ್ ಹಂಚಿಕೊಂಡಿದ್ದರು.

ಪೋಸ್ಟ್​

ಭಾರತದಲ್ಲಿ ಐಟಿ ಕಾಯ್ದೆಯಡಿ ಸರ್ಕಾರ ಅಥವಾ ನಿಯಂತ್ರಕ ಮಂಡಳಿಗಳ ವಿನಂತಿಯ ಮೇರೆಗೆ ನಿರ್ದಿಷ್ಟ ಪೋಸ್ಟ್‌ಗಳನ್ನು ತಡೆಯಲು ಅವಕಾಶವಿದೆಯಾದರೂ, ಸ್ವತಃ ದೇಶದ ಪ್ರಧಾನಿಯವರ ಅಧಿಕೃತ ಹೇಳಿಕೆಯ ಪೋಸ್ಟ್ ತಡೆಯಲ್ಪಟ್ಟಿರುವುದು ದೊಡ್ಡ ಮಟ್ಟದ ರಾಜಕೀಯ ಮತ್ತು ಕಾನೂನು ಚರ್ಚೆಗೆ ಕಾರಣವಾಗಿದೆ.

ಇತ್ತೀಚೆಗೆ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಚರ್ಚೆಗಳ ನಡುವೆ, ಸಾಮಾಜಿಕ ಜಾಲತಾಣ ಸಂಸ್ಥೆಗಳು ಹಾಗೂ ಕೇಂದ್ರ ಸರ್ಕಾರದ ನಡುವಿನ ಡಿಜಿಟಲ್ ನೀತಿ ನಿಯಮಗಳ ಸಂಘರ್ಷ ಮತ್ತೆ ಮುನ್ನೆಲೆಗೆ ಬಂದಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:54 am, Tue, 28 July 26

Follow Us