ಒಂದು ರಾಷ್ಟ್ರ, ಒಂದು ಚುನಾವಣೆ ವಿರೋಧಿಸುತ್ತಿರುವ ಕೇರಳ ಸರ್ಕಾರವನ್ನು ಟೀಕಿಸಿದ ಬಿಜೆಪಿ ನಾಯಕ

|

Updated on: Oct 11, 2024 | 3:25 PM

ನಾಗರಿಕರ ತಿದ್ದುಪಡಿ ಕಾಯಿದೆಯ ಉದಾಹರಣೆಯನ್ನು ತೆಗೆದುಕೊಂಡರೆ, ಸರ್ಕಾರದಲ್ಲಿ ವಿರೋಧ ಪಕ್ಷಗಳಿರುವ ರಾಜ್ಯಗಳು ತಮ್ಮದೇ ಆದ ರಾಜ್ಯ ಆಧಾರಿತ ನಿರ್ಣಯಗಳ ಮೂಲಕ ಮಾಹಿತಿ ಸಂಗ್ರಹಿಸುವ ಮತ್ತು ಪೌರತ್ವವನ್ನು ಖಚಿತಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಕೆಸರೆರಚಿದೆ ಎಂದು ಅವರು ಹೇಳಿದ್ದಾರೆ.

ಒಂದು ರಾಷ್ಟ್ರ, ಒಂದು ಚುನಾವಣೆ ವಿರೋಧಿಸುತ್ತಿರುವ ಕೇರಳ ಸರ್ಕಾರವನ್ನು ಟೀಕಿಸಿದ ಬಿಜೆಪಿ ನಾಯಕ
ಕೇರಳ ಅಸೆಂಬ್ಲಿ
Follow us on

ದೆಹಲಿ ಅಕ್ಟೋಬರ್ 11: ಕೇಂದ್ರದ ‘ಒಂದು ರಾಷ್ಟ್ರ, ಒಂದು ಚುನಾವಣೆ’ (One Nation, One Election) ನೀತಿಯನ್ನು ವಿರೋಧಿಸುವ ನಿರ್ಣಯವನ್ನು ಅಂಗೀಕರಿಸಿದ್ದಕ್ಕಾಗಿ ಬಿಜೆಪಿ ನಾಯಕ ಎನ್ ರಾಮಚಂದರ್ ರಾವ್ (N Ramchander Rao) ಕೇರಳ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಪ್ರಸ್ತಾವಿತ ನೀತಿಯನ್ನು ವಿರೋಧಿಸಿದ ಏಕೈಕ ಕಾರಣವೆಂದರೆ ಬಿಜೆಪಿ ವಿರೋಧಿ ಭಾವನೆಗಳು ಎಂದು ರಾವ್ ಹೇಳಿದ್ದಾರೆ. ಕೇಂದ್ರ ಸರ್ಕಾರವು ತನ್ನ ಉದ್ದೇಶಿತ “ಒಂದು ರಾಷ್ಟ್ರ, ಒಂದು ಚುನಾವಣೆ” ಸುಧಾರಣೆಯನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ಗುರುವಾರ ಕೇರಳ ವಿಧಾನಸಭೆಯು ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಿದ ನಂತರ ಅವರ ಹೇಳಿಕೆಗಳು ಬಂದಿವೆ. ಸಭೆಯು ಪ್ರಸ್ತಾವನೆಯನ್ನು “ಪ್ರಜಾಪ್ರಭುತ್ವ ವಿರೋಧಿ” ಮತ್ತು ರಾಷ್ಟ್ರಕ್ಕೆ ಹಾನಿಕಾರಕ ಎಂದು ಉಲ್ಲೇಖಿಸಿದೆ.

ಬಿಜೆಪಿ ನಾಯಕ ರಾವ್, ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ, ನಿರ್ಣಯವನ್ನು ರದ್ದುಗೊಳಿಸುವಂತೆ ಕೇರಳ ಸರ್ಕಾರಕ್ಕೆ ಕರೆ ನೀಡಿದ್ದು, ರಾಷ್ಟ್ರೀಯ ಹಿತಾಸಕ್ತಿಗಿಂತ ರಾಜಕೀಯ ಹಿತಾಸಕ್ತಿಯಿಂದ ಇದನ್ನು ಮಾಡಲಾಗಿದೆ ಎಂದು ಹೇಳಿದ್ದಾರೆ.

“ಒಂದು ರಾಷ್ಟ್ರ, ಒಂದು ಚುನಾವಣೆ” ತಿರಸ್ಕರಿಸಲ್ಪಡುವ ಏಕೈಕ ಕಾರಣವೆಂದರೆ ಅದನ್ನು ಬಿಜೆಪಿ ನೇತೃತ್ವದ ಸರ್ಕಾರವು ಪ್ರಸ್ತಾಪಿಸಿದ್ದರಿಂದ, ಇದು ‘ಫೆಡರಲಿಸಂ’ ಬಗ್ಗೆ ಅಸೆಂಬ್ಲಿಯ ಧೋರಣೆಯನ್ನು ಕಳಪೆಯಾಗಿ ಪ್ರತಿಬಿಂಬಿಸುತ್ತದೆ ಎಂದು ಅವರು ಹೇಳಿದ್ದಾರೆ.

ನಾಗರಿಕರ ತಿದ್ದುಪಡಿ ಕಾಯಿದೆಯ ಉದಾಹರಣೆಯನ್ನು ತೆಗೆದುಕೊಂಡರೆ, ಸರ್ಕಾರದಲ್ಲಿ ವಿರೋಧ ಪಕ್ಷಗಳಿರುವ ರಾಜ್ಯಗಳು ತಮ್ಮದೇ ಆದ ರಾಜ್ಯ ಆಧಾರಿತ ನಿರ್ಣಯಗಳ ಮೂಲಕ ಮಾಹಿತಿ ಸಂಗ್ರಹಿಸುವ ಮತ್ತು ಪೌರತ್ವವನ್ನು ಖಚಿತಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಕೆಸರೆರಚಿದೆ ಎಂದು ಅವರು ಹೇಳಿದ್ದಾರೆ.

“ಆದ್ದರಿಂದ, ಪ್ರತಿಪಕ್ಷ ಸರ್ಕಾರಗಳು, ಮುಖ್ಯವಾಗಿ ಕಾಂಗ್ರೆಸ್ ಮತ್ತು ಕಮ್ಯುನಿಸ್ಟರು ಕೇಂದ್ರ ಸರ್ಕಾರದ ಯಾವುದೇ ನಿರ್ಧಾರವನ್ನು ಸಮಾನವಾಗಿ ವಿರೋಧಿಸುತ್ತಿದ್ದಾರೆ. ಅವರು ವಿರೋಧಕ್ಕಾಗಿ ಮಾತ್ರ ಅದನ್ನು ವಿರೋಧಿಸಲು ಬಯಸುತ್ತಾರೆ. ಕಮ್ಯುನಿಸ್ಟ್ ಪಕ್ಷವು ಅವರ ರಾಜಕೀಯ ಹಿತಾಸಕ್ತಿಗಿಂತ ಕಡಿಮೆ ರಾಷ್ಟ್ರೀಯ ಹಿತಾಸಕ್ತಿ ಹೊಂದಿದೆ ಎಂದಿದ್ದಾರೆ ಅವರು.

ಗುರುವಾರ, ಕೇರಳ ವಿಧಾನಸಭೆಯು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಅನುಪಸ್ಥಿತಿಯಲ್ಲಿ ಸಂಸದೀಯ ವ್ಯವಹಾರಗಳ ಸಚಿವ ಎಂ.ಬಿ.ರಾಜೇಶ್ ಅವರು ನಿಯಮ 118 ರ ಅಡಿಯಲ್ಲಿ ಮಂಡಿಸಿದ ನಿರ್ಣಯವನ್ನು ಅಂಗೀಕರಿಸಿದರು.

ಲೋಕಸಭೆ, ವಿಧಾನಸಭೆ ಮತ್ತು ಪಂಚಾಯತ್‌ಗಳಂತಹ ಆಡಳಿತದ ವಿವಿಧ ಹಂತಗಳಲ್ಲಿ ಏಕಕಾಲಿಕ ಚುನಾವಣೆಗಳ ಕಲ್ಪನೆಯು ಭಾರತದಲ್ಲಿ ಪ್ರಜಾಪ್ರಭುತ್ವ ಪ್ರಕ್ರಿಯೆ ಮತ್ತು ವೈವಿಧ್ಯತೆಯನ್ನು ದುರ್ಬಲಗೊಳಿಸುತ್ತಿದೆ ಎಂದು ನಿರ್ಣಯವು ಪರಿಗಣಿಸುತ್ತದೆ.

ಇದು ಬಹು-ಪಕ್ಷದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ ಮತ್ತು ರಾಜ್ಯ ಮತ್ತು ಸ್ಥಳೀಯ ಸಂಸ್ಥೆಗಳ ಮೇಲೆ ಕೆಲವು ನಿರ್ಬಂಧಗಳನ್ನು ವಿಧಿಸುತ್ತದೆ, ಅಧಿಕಾರವನ್ನು ಕೇಂದ್ರೀಕರಿಸುತ್ತದೆ. ಕೇರಳ ವಿಧಾನಸಭೆಯು ಈ ನೀತಿಯನ್ನು ಹಿಂದಕ್ಕೆ ಪಡೆಯುವಂತೆ ಕೇಳಿಕೊಂಡಿದೆ.

ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಒಮರ್​ ಅಬ್ದುಲ್ಲಾರ ಪಕ್ಷ ಬೆಂಬಲಿಸುವುದಾಗಿ ಘೋಷಿಸಿದ ಆಮ್ ​ಆದ್ಮಿ ಪಕ್ಷ

“ಏಕಕಾಲಿಕ ಚುನಾವಣೆಗಳ ಪ್ರಸ್ತಾಪವು ಚುನಾವಣಾ ಪ್ರಜಾಪ್ರಭುತ್ವದ ಆಳವಾದ ಮೌಲ್ಯವನ್ನು ನಿರ್ಲಕ್ಷಿಸಿ ಚುನಾವಣೆಗಳನ್ನು ಕೇವಲ ವೆಚ್ಚವೆಂದು ನೋಡುವ ಪ್ರಜಾಪ್ರಭುತ್ವ ವಿರೋಧಿ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ” ಎಂದು ನಿರ್ಣಯವು ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ