AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ಗೃಹ ಸಚಿವರ ರಾಜೀನಾಮೆಗೆ ದೇವೇಂದ್ರ ಫಡ್ನವಿಸ್ ಒತ್ತಾಯ; ತನ್ನ ಮೇಲಿನ ಆರೋಪ ಸುಳ್ಳು ಎಂದ ಅನಿಲ್ ದೇಶ್​ಮುಖ್

ಗೃಹ ಸಚಿವರು ರಾಜೀನಾಮೆ ನೀಡಬೇಕು. ಒಂದುವೇಳೆ ಅನಿಲ್ ದೇಶ್​ಮುಖ್ ರಾಜೀನಾಮೆ ನೀಡದಿದ್ದರೆ ಖುದ್ದು ಮುಖ್ಯಮಂತ್ರಿ ಅವರು ಗೃಹ ಸಚಿವರನ್ನು ತೆಗೆದುಹಾಕಬೇಕು. ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ.

ಮಹಾರಾಷ್ಟ್ರ ಗೃಹ ಸಚಿವರ ರಾಜೀನಾಮೆಗೆ ದೇವೇಂದ್ರ ಫಡ್ನವಿಸ್ ಒತ್ತಾಯ; ತನ್ನ ಮೇಲಿನ ಆರೋಪ ಸುಳ್ಳು ಎಂದ ಅನಿಲ್ ದೇಶ್​ಮುಖ್
ದೇವೇಂದ್ರ ಫಡ್ನವಿಸ್
TV9 Web
| Edited By: |

Updated on:Apr 06, 2022 | 6:57 PM

Share

ಮುಂಬೈ: ಮಾಜಿ ಪೊಲೀಸ್ ಆಯುಕ್ತ ಹಾಗೂ ಹಾಲಿ ಕಮಾಂಡೆಂಟ್ ಜನರಲ್ ಆಫ್ ಹೋಮ್ ಗಾರ್ಡ್ಸ್ ಆಗಿರುವ ಪರಮ್​ವೀರ್ ಸಿಂಗ್, ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಸದ್ಯ ಸಸ್ಪೆಂಡ್ ಆಗಿರುವ ಎಎಸ್ಐ​ ಸಚಿನ್ ವಾಜೆ ಬಳಿ ಬಾರ್ ಮತ್ತು ರೆಸ್ಟೊರೆಂಟ್​​ಗಳಿಂದ ಪ್ರತಿ ತಿಂಗಳು 100 ಕೋಟಿ ಹಣ ವಸೂಲಿ ಮಾಡುವಂತೆ ಒತ್ತಡ ಹೇರಿದ್ದರು ಎಂದು ಆರೋಪಿಸಿರುವ ಬೆನ್ನಲ್ಲೇ ಬಿಜೆಪಿ ನಾಯಕ ಹಾಗೂ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅನಿಲ್ ದೇಶ್​ಮುಖ್ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಪರಮ್​ವೀರ್ ಸಿಂಗ್ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಬರೆದ ಪತ್ರದಲ್ಲಿ ಗೃಹ ಸಚಿವ, ಎನ್​ಸಿಪಿ ನಾಯಕ ಅನಿಲ್ ದೇಶ್​ಮುಖ್ ವಿರುದ್ಧ ಆರೋಪಗಳನ್ನು ಮಾಡಿದ್ದಾರೆ. ಪ್ರತಿ ತಿಂಗಳು 100 ಕೋಟಿ ರೂಪಾಯಿ ಸಂಗ್ರಹಿಸಲು ಹೇಳಿದ್ದರು ಎಂದು ಭ್ರಷ್ಟಾಚಾರದ ಆರೋಪ ಮಾಡಿದ್ದರು.

ಈ ಸಂಬಂಧ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ವಿರೋಧ ಪಕ್ಷದ ನಾಯಕರೂ ಆಗಿರುವ ದೇವೇಂದ್ರ ಫಡ್ನವಿಸ್, ಗೃಹ ಸಚಿವರು ರಾಜೀನಾಮೆ ನೀಡಬೇಕು. ಒಂದುವೇಳೆ ಅನಿಲ್ ದೇಶ್​ಮುಖ್ ರಾಜೀನಾಮೆ ನೀಡದಿದ್ದರೆ ಖುದ್ದು ಮುಖ್ಯಮಂತ್ರಿ ಅವರು ಗೃಹ ಸಚಿವರನ್ನು ತೆಗೆದುಹಾಕಬೇಕು. ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ. ಈ ಎಲ್ಲಾ ದುಷ್ಕೃತ್ಯಗಳ ಬಗ್ಗೆ ಮುಖ್ಯಮಂತ್ರಿಗೆ ಅರಿವಿತ್ತು ಎಂದೂ ಪತ್ರದಲ್ಲಿ ಹೇಳಲಾಗಿದೆ. ಹಾಗಾಗ್ಯೂ ಯಾಕೆ ಅವರು ಏನೂ ಕ್ರಮ ಕೈಗೊಂಡಿಲ್ಲ ಎಂದು ಕೇಳಿದ್ದಾರೆ.

ತನ್ನ ಮೇಲಿನ ಆರೋಪ ಸುಳ್ಳು ಎಂದ ಅನಿಲ್ ದೇಶ್​ಮುಖ್ ಆದರೆ, ಪರಮ್​ವೀರ್ ಸಿಂಗ್ ಮಾಡಿರುವ ಆರೋಪಗಳನ್ನು ಗೃಹ ಸಚಿವ ಅನಿಲ್ ದೇಶ್​ಮುಖ್ ತಳ್ಳಿ ಹಾಕಿದ್ದಾರೆ. ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್​ವೀರ್ ಸಿಂಗ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಅವರು ಹೇಳಿದ್ದಾರೆ.

ಪರಮ್​ವೀರ್ ಸಿಂಗ್ ಮಾಡಿರುವ ಆರೋಪಗಳು ಸಂಪೂರ್ಣ ಸುಳ್ಳು. ಹಾಗೂ ನಾನು ಮಾನಹಾನಿ ಪ್ರಕರಣ ದಾಖಲಿಸುತ್ತಿರುವ ಕಾರಣ ಅವರು ಮಾಡಿರುವ ಆರೋಪಗಳನ್ನು ಸಾಕ್ಷೀಕರಿಸಬೇಕು ಎಂದು ಅನಿಲ್ ದೇಶ್​ಮುಖ್ ತಿಳಿಸಿದ್ದಾರೆ.

ಪರಮ್​ವೀರ್ ಸಿಂಗ್ ಪತ್ರದ ಸಂಪೂರ್ಣ ವಿವರ ಇಲ್ಲಿದೆ: ಪರಮ್​ವೀರ್ ಸಿಂಗ್ ಉದ್ಧವ್ ಠಾಕ್ರೆಗೆ ಬರೆದ ಪತ್ರ

ಇದನ್ನೂ ಓದಿ: ಮುಂಬೈ ಪೊಲೀಸ್ ಕಮಿಷನರ್ ಹುದ್ದೆ ಕಳೆದುಕೊಂಡ ಪರಮ್​ವೀರ್ ಸಿಂಗ್​ ಮೈಮೇಲೆ ಎಳೆದುಕೊಂಡಿದ್ದ ವಿವಾದಗಳು ಒಂದೆರೆಡಲ್ಲ..

Published On - 10:19 pm, Sat, 20 March 21

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ