AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ಗೃಹ ಸಚಿವರ ರಾಜೀನಾಮೆಗೆ ದೇವೇಂದ್ರ ಫಡ್ನವಿಸ್ ಒತ್ತಾಯ; ತನ್ನ ಮೇಲಿನ ಆರೋಪ ಸುಳ್ಳು ಎಂದ ಅನಿಲ್ ದೇಶ್​ಮುಖ್

ಗೃಹ ಸಚಿವರು ರಾಜೀನಾಮೆ ನೀಡಬೇಕು. ಒಂದುವೇಳೆ ಅನಿಲ್ ದೇಶ್​ಮುಖ್ ರಾಜೀನಾಮೆ ನೀಡದಿದ್ದರೆ ಖುದ್ದು ಮುಖ್ಯಮಂತ್ರಿ ಅವರು ಗೃಹ ಸಚಿವರನ್ನು ತೆಗೆದುಹಾಕಬೇಕು. ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ.

ಮಹಾರಾಷ್ಟ್ರ ಗೃಹ ಸಚಿವರ ರಾಜೀನಾಮೆಗೆ ದೇವೇಂದ್ರ ಫಡ್ನವಿಸ್ ಒತ್ತಾಯ; ತನ್ನ ಮೇಲಿನ ಆರೋಪ ಸುಳ್ಳು ಎಂದ ಅನಿಲ್ ದೇಶ್​ಮುಖ್
ದೇವೇಂದ್ರ ಫಡ್ನವಿಸ್
TV9 Web
| Edited By: |

Updated on:Apr 06, 2022 | 6:57 PM

Share

ಮುಂಬೈ: ಮಾಜಿ ಪೊಲೀಸ್ ಆಯುಕ್ತ ಹಾಗೂ ಹಾಲಿ ಕಮಾಂಡೆಂಟ್ ಜನರಲ್ ಆಫ್ ಹೋಮ್ ಗಾರ್ಡ್ಸ್ ಆಗಿರುವ ಪರಮ್​ವೀರ್ ಸಿಂಗ್, ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಸದ್ಯ ಸಸ್ಪೆಂಡ್ ಆಗಿರುವ ಎಎಸ್ಐ​ ಸಚಿನ್ ವಾಜೆ ಬಳಿ ಬಾರ್ ಮತ್ತು ರೆಸ್ಟೊರೆಂಟ್​​ಗಳಿಂದ ಪ್ರತಿ ತಿಂಗಳು 100 ಕೋಟಿ ಹಣ ವಸೂಲಿ ಮಾಡುವಂತೆ ಒತ್ತಡ ಹೇರಿದ್ದರು ಎಂದು ಆರೋಪಿಸಿರುವ ಬೆನ್ನಲ್ಲೇ ಬಿಜೆಪಿ ನಾಯಕ ಹಾಗೂ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅನಿಲ್ ದೇಶ್​ಮುಖ್ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಪರಮ್​ವೀರ್ ಸಿಂಗ್ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಬರೆದ ಪತ್ರದಲ್ಲಿ ಗೃಹ ಸಚಿವ, ಎನ್​ಸಿಪಿ ನಾಯಕ ಅನಿಲ್ ದೇಶ್​ಮುಖ್ ವಿರುದ್ಧ ಆರೋಪಗಳನ್ನು ಮಾಡಿದ್ದಾರೆ. ಪ್ರತಿ ತಿಂಗಳು 100 ಕೋಟಿ ರೂಪಾಯಿ ಸಂಗ್ರಹಿಸಲು ಹೇಳಿದ್ದರು ಎಂದು ಭ್ರಷ್ಟಾಚಾರದ ಆರೋಪ ಮಾಡಿದ್ದರು.

ಈ ಸಂಬಂಧ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ವಿರೋಧ ಪಕ್ಷದ ನಾಯಕರೂ ಆಗಿರುವ ದೇವೇಂದ್ರ ಫಡ್ನವಿಸ್, ಗೃಹ ಸಚಿವರು ರಾಜೀನಾಮೆ ನೀಡಬೇಕು. ಒಂದುವೇಳೆ ಅನಿಲ್ ದೇಶ್​ಮುಖ್ ರಾಜೀನಾಮೆ ನೀಡದಿದ್ದರೆ ಖುದ್ದು ಮುಖ್ಯಮಂತ್ರಿ ಅವರು ಗೃಹ ಸಚಿವರನ್ನು ತೆಗೆದುಹಾಕಬೇಕು. ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ. ಈ ಎಲ್ಲಾ ದುಷ್ಕೃತ್ಯಗಳ ಬಗ್ಗೆ ಮುಖ್ಯಮಂತ್ರಿಗೆ ಅರಿವಿತ್ತು ಎಂದೂ ಪತ್ರದಲ್ಲಿ ಹೇಳಲಾಗಿದೆ. ಹಾಗಾಗ್ಯೂ ಯಾಕೆ ಅವರು ಏನೂ ಕ್ರಮ ಕೈಗೊಂಡಿಲ್ಲ ಎಂದು ಕೇಳಿದ್ದಾರೆ.

ತನ್ನ ಮೇಲಿನ ಆರೋಪ ಸುಳ್ಳು ಎಂದ ಅನಿಲ್ ದೇಶ್​ಮುಖ್ ಆದರೆ, ಪರಮ್​ವೀರ್ ಸಿಂಗ್ ಮಾಡಿರುವ ಆರೋಪಗಳನ್ನು ಗೃಹ ಸಚಿವ ಅನಿಲ್ ದೇಶ್​ಮುಖ್ ತಳ್ಳಿ ಹಾಕಿದ್ದಾರೆ. ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್​ವೀರ್ ಸಿಂಗ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಅವರು ಹೇಳಿದ್ದಾರೆ.

ಪರಮ್​ವೀರ್ ಸಿಂಗ್ ಮಾಡಿರುವ ಆರೋಪಗಳು ಸಂಪೂರ್ಣ ಸುಳ್ಳು. ಹಾಗೂ ನಾನು ಮಾನಹಾನಿ ಪ್ರಕರಣ ದಾಖಲಿಸುತ್ತಿರುವ ಕಾರಣ ಅವರು ಮಾಡಿರುವ ಆರೋಪಗಳನ್ನು ಸಾಕ್ಷೀಕರಿಸಬೇಕು ಎಂದು ಅನಿಲ್ ದೇಶ್​ಮುಖ್ ತಿಳಿಸಿದ್ದಾರೆ.

ಪರಮ್​ವೀರ್ ಸಿಂಗ್ ಪತ್ರದ ಸಂಪೂರ್ಣ ವಿವರ ಇಲ್ಲಿದೆ: ಪರಮ್​ವೀರ್ ಸಿಂಗ್ ಉದ್ಧವ್ ಠಾಕ್ರೆಗೆ ಬರೆದ ಪತ್ರ

ಇದನ್ನೂ ಓದಿ: ಮುಂಬೈ ಪೊಲೀಸ್ ಕಮಿಷನರ್ ಹುದ್ದೆ ಕಳೆದುಕೊಂಡ ಪರಮ್​ವೀರ್ ಸಿಂಗ್​ ಮೈಮೇಲೆ ಎಳೆದುಕೊಂಡಿದ್ದ ವಿವಾದಗಳು ಒಂದೆರೆಡಲ್ಲ..

Published On - 10:19 pm, Sat, 20 March 21

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ