AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಕ್ಕಿಂತಲೂ ತೃಣಮೂಲ ಕಾಂಗ್ರೆಸ್​ ಅಪಾಯಕಾರಿ: ಟಿಎಂಸಿ ವೈರಸ್​ಗೆ ಬಿಜೆಪಿಯೇ ಲಸಿಕೆ

ಟಿಎಂಸಿ ಪಕ್ಷ ಕೊರೊನಾ ವೈರಸ್​ಗಿಂತಲೂ ಅಪಾಯಕಾರಿ. ಅದನ್ನು ಮಣಿಸಲು ಬಿಜೆಪಿ ಎಂಬ ಲಸಿಕೆಯಿಂದಷ್ಟೇ ಸಾಧ್ಯ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಈ ಲಸಿಕೆ ಕೆಲಸ ಮಾಡಲಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಪಕ್ಷದ ಕಾರ್ಯಕರ್ತರ ವಿರುದ್ಧ ಹಾಕಲಾಗಿರುವ ಸುಳ್ಳು ಕೇಸ್​ಗಳನ್ನು ಹಿಂಪಡೆಯಲಾಗುವುದು.

ಕೊರೊನಾಕ್ಕಿಂತಲೂ ತೃಣಮೂಲ ಕಾಂಗ್ರೆಸ್​ ಅಪಾಯಕಾರಿ: ಟಿಎಂಸಿ ವೈರಸ್​ಗೆ ಬಿಜೆಪಿಯೇ ಲಸಿಕೆ
ಮಮತಾ ಬ್ಯಾನರ್ಜಿ(ಎಡ), ದಿಲೀಪ್​ ಘೋಷ್​ (ಬಲ)
Skanda
| Edited By: |

Updated on:Dec 23, 2020 | 10:05 PM

Share

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್​ ಕೊರೊನಾ ವೈರಸ್​ಗಿಂತಲೂ ಅಪಾಯಕಾರಿ ಎಂದು ಬಿಜೆಪಿ ಪಶ್ಚಿಮ ಬಂಗಾಳ ಘಟಕದ ಮುಖ್ಯಸ್ಥ ದಿಲೀಪ್​ ಘೋಷ್ ಹೇಳಿಕೆ ನೀಡಿದ್ದಾರೆ. TMC ಪಕ್ಷ ಎಂಬ ವೈರಾಣುವನ್ನು ನಿವಾರಿಸಲು ಕೇಸರಿ ಪಕ್ಷವೇ ಲಸಿಕೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಟಿಎಂಸಿಯನ್ನು ನಿರ್ಮೂಲನೆ ಮಾಡಲಿದೆ ಎಂದು ಕುಲ್ಪಿ ಪ್ರದೇಶದಲ್ಲಿ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಹೇಳಿದ್ದಾರೆ.

ಬಿಜೆಪಿ ಅಧಿಕಾರಕ್ಕೆ ಬಂದರೆ ಪಕ್ಷದ ಕಾರ್ಯಕರ್ತರ ವಿರುದ್ಧ ಹಾಕಲಾಗಿರುವ ಸುಳ್ಳು ಕೇಸ್​ಗಳನ್ನು ಹಿಂಪಡೆಯಲಾಗುವುದು. ಟಿಎಂಸಿ ಪಟಾಲಂ ಪ್ರತಿಪಕ್ಷಗಳಿಗೆ ಅನಾವಶ್ಯಕವಾಗಿ ನೀಡುತ್ತಿರುವ ತೊಂದರೆಗೆ ಪಾಠ ಕಲಿಸಲಾಗುವುದು ಎಂದು ಕಾರ್ಯಕರ್ತರಿಗೆ ಭರವಸೆ ನೀಡಿದ್ದಾರೆ.

ಟಿಎಂಸಿ ಪಕ್ಷ ಕೊರೊನಾ ವೈರಸ್​ಗಿಂತಲೂ ಅಪಾಯಕಾರಿ. ಅದನ್ನು ಮಣಿಸಲು ಬಿಜೆಪಿ ಎಂಬ ಲಸಿಕೆಯಿಂದಷ್ಟೇ ಸಾಧ್ಯ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಈ ಲಸಿಕೆ ಕೆಲಸ ಮಾಡಲಿದೆ ಎಂದು ಟಿಎಂಸಿ ನಾಯಕರ ಕಾಲೆಳೆದಿದ್ದಾರೆ. ಇನ್ನು ಬೆರಳೆಣಿಕೆ ದಿನವಷ್ಟೇ ಅಧಿಕಾರ ನಡೆಸುವುದು ಸಾಧ್ಯ ಎಂದು ಗೊತ್ತಿದ್ದರೂ ಟಿಎಂಸಿ ಬೆಂಬಲಿಗರು ಬಿಜೆಪಿ ಕಾರ್ಯಕರ್ತರ ವಿರುದ್ಧ ಗೂಂಡಾಗಿರಿ ನಡೆಸುತ್ತಿದ್ದಾರೆ. ನಾವು ಅಧಿಕಾರಕ್ಕೆ ಬಂದ ಕೂಡಲೇ ಅವರಿಗೆ ಪಾಠ ಕಲಿಸುತ್ತೇವೆ ಎಂದು ಗುಡುಗಿದ್ದಾರೆ.

ಕೇಂದ್ರ ಸರ್ಕಾರದ ಯೋಜನೆಗಳಾದ ಪಿಎಂ ಕಿಸಾನ್​ ಸಮ್ಮಾನ್ ಮತ್ತು ಆಯುಷ್ಮಾನ್​ ಭಾರತ್ ಯೋಜನೆಗಳನ್ನು ಪ.ಬಂಗಾಳದಲ್ಲಿ ಅಳವಡಿಸಲು ಟಿಎಂಸಿ ಅವಕಾಶವೇ ನೀಡಿಲ್ಲ. ಅದೊಂದು ಪ್ರಜಾಪ್ರಭುತ್ವ ವಿರೋಧಿ ಪಕ್ಷ. ಕಡೇಪಕ್ಷ ಬಿಜೆಪಿಯ ಆಡಳಿತ ವೈಖರಿಯನ್ನಾದರೂ ನೋಡಿ ಟಿಎಂಸಿ ಪಾಠ ಕಲಿಯಬೇಕು ಎಂದು ಕಿಚಾಯಿಸಿದ್ದಾರೆ.

ಟಿಎಂಸಿ ಕೊರೊನಾಕ್ಕಿಂತಲೂ ಅಪಾಯಕಾರಿ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿರುವ ತೃಣಮೂಲ ಕಾಂಗ್ರೆಸ್​ನ ಪ್ರಧಾನ ಕಾರ್ಯದರ್ಶಿ ಪಾರ್ಥ ಚಟರ್ಜಿ, ಇಂತಹ ಕೀಳುಮಟ್ಟದ ಹೇಳಿಕೆಗೆ ನಾವು ಪ್ರತಿಕ್ರಿಯತಿಸುವುದಿಲ್ಲ. ಇದು ಬಿಜೆಪಿಯ ಮನಸ್ಥಿತಿಯನ್ನು ತೋರಿಸುವ ಹೇಳಿಕೆ ಎನ್ನುವುದು ಸ್ಪಷ್ಟ. ಇದಕ್ಕೆಲ್ಲಾ ಜನರೇ ಪಾಠ ಕಲಿಸುತ್ತಾರೆ ಎಂದು ತಿರುಗೇಟು ನೀಡಿದ್ದಾರೆ.

ಪಶ್ಚಿಮ ಬಂಗಾಳ: ಅಮಿತ್ ಶಾ ಸಮ್ಮುಖದಲ್ಲಿ ಸುವೇಂದು ಅಧಿಕಾರಿ, 11 ಶಾಸಕರು, 1 ಎಂಪಿ ಬಿಜೆಪಿ ಸೇರ್ಪಡೆ

Published On - 10:04 pm, Wed, 23 December 20

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ