AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder News: ರಾಜಸ್ಥಾನದಲ್ಲಿ ಮನೆಗೆ ತೆರಳುತ್ತಿದ್ದ ಬಿಜೆಪಿ ನಾಯಕನ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ

ಭರತ್‌ಪುರದ ಬಿಜೆಪಿ ಸಂಸದರಾದ ರಂಜಿತಾ ಕೋಲಿ ಅವರ ಆಪ್ತ ಸಹಾಯಕ ಕೃಪಾಲ್ ಸಿಂಗ್ ಮೇಲೆ ಗುಂಡಿನ ದಾಳಿ ನಡೆದಿದ್ದು, 7 ಬಾರಿ ಗುಂಡು ಹಾರಿಸಲಾಗಿದೆ.

Murder News: ರಾಜಸ್ಥಾನದಲ್ಲಿ ಮನೆಗೆ ತೆರಳುತ್ತಿದ್ದ ಬಿಜೆಪಿ ನಾಯಕನ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 05, 2022 | 12:41 PM

Share

ಜೈಪುರ: ರಾಜಸ್ಥಾನದ ಭರತ್‌ಪುರದಲ್ಲಿ ಬಿಜೆಪಿ ಮುಖಂಡರೊಬ್ಬರನ್ನು (BJP Leader) ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಇನ್ನೂ ಗುರುತು ಪತ್ತೆಯಾಗದ ದುಷ್ಕರ್ಮಿಗಳು 2 ಬೈಕ್‌ ಹಾಗೂ ಕಾರುಗಳಲ್ಲಿ ಬಂದು ಭಾನುವಾರ ರಾತ್ರಿ ಸರ್ಕ್ಯೂಟ್ ಹೌಸ್‌ನಿಂದ ಕಾರಿನಲ್ಲಿ ಮನೆಗೆ ಹೋಗುತ್ತಿದ್ದ ಕೃಪಾಲ್ ಸಿಂಗ್ (Kripal Singh) ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭರತ್‌ಪುರದ ಬಿಜೆಪಿ ಸಂಸದರಾದ ರಂಜಿತಾ ಕೋಲಿ ಅವರ ಆಪ್ತ ಸಹಾಯಕ ಕೃಪಾಲ್ ಸಿಂಗ್ ಮೇಲೆ ಗುಂಡಿನ ದಾಳಿ ನಡೆದಿದ್ದು, 7 ಬಾರಿ ಗುಂಡು ಹಾರಿಸಲಾಗಿದೆ. “ಆರೋಪಿಗಳನ್ನು ಗುರುತಿಸಲಾಗುತ್ತಿದೆ. ಇದುವರೆಗೆ ಯಾರನ್ನೂ ಬಂಧಿಸಿಲ್ಲ, ಮೃತಪಟ್ಟ ಕೃಪಾಲ್ ಸಿಂಗ್ ಅವರ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ” ಎಂದು ಮಥುರಾ ಗೇಟ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಅಧಿಕಾರಿ ರಾಮನಾಥ್ ಸಿಂಗ್ ತಿಳಿಸಿದ್ದಾರೆ.

ಇದನ್ನೂ ಓದಿ: ರಾಜ್ ಠಾಕ್ರೆ ನೇತೃತ್ವದ ಎಂಎನ್ಎಸ್ ಪಕ್ಷದ ನಾಯಕನಿಂದ ಮಹಿಳೆ ಮೇಲೆ ಹಲ್ಲೆ, ವಿಡಿಯೊ ವೈರಲ್

ಪೊಲೀಸರ ಪ್ರಕಾರ, ಕೃಪಾಲ್ ಸಿಂಗ್ ಅವರನ್ನು ಸರ್ಕಾರಿ ಆರ್‌ಬಿಎಂ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ಅವರು ಈಗಾಗಲೇ ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದರು.

“ಡಿಆರ್‌ಯುಸಿಸಿ (ವಿಭಾಗೀಯ ರೈಲ್ವೆ ಬಳಕೆದಾರರ ಸಲಹಾ ಸಮಿತಿ) ಸದಸ್ಯ ಮತ್ತು ಕಿಸಾನ್ ಮೋರ್ಚಾದ ಮಾಜಿ ವಕ್ತಾರ ಕೃಪಾಲ್ ಸಿಂಗ್ ಅವರ ನಿಧನದಿಂದ ಇಂದಿನ ನನ್ನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ” ಎಂದು ಸಂಸದರಾದ ರಂಜಿತಾ ಕೋಲಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಹಳೆಯ ವೈಷಮ್ಯದಿಂದ ಈ ಹತ್ಯೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ