AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajya Sabha ByPoll: ಮಧ್ಯಪ್ರದೇಶದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಕೇಂದ್ರ ಸಚಿವ ಎಲ್.ಮುರುಗನ್

ಮಧ್ಯಪ್ರದೇಶದ ರಾಜ್ಯಸಭಾ ಸದಸ್ಯರಾಗಿದ್ದ ಥಾವರ್​ಚಂದ್​ ಗೆಹ್ಲೋಟ್​ ಕಳೆದ ಜುಲೈನಲ್ಲಿ ರಾಜೀನಾಮೆ ನೀಡಿದ್ದು, ಅವರನ್ನು ಕರ್ನಾಟಕದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿತ್ತು.

Rajya Sabha ByPoll: ಮಧ್ಯಪ್ರದೇಶದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಕೇಂದ್ರ ಸಚಿವ ಎಲ್.ಮುರುಗನ್
ರಾಜ್ಯಸಭೆಗೆ ಆಯ್ಕೆಯಾದ ಎಲ್​ ಮುರುಗನ್​​ಗೆ ಸಿಹಿ ತಿನಿಸಿ ಸಂಭ್ರಮ (ಪಿಟಿಐ ಫೋಟೋ)
TV9 Web
| Edited By: |

Updated on:Sep 28, 2021 | 9:51 AM

Share

ಬಿಜೆಪಿ ನಾಯಕ, ಕೇಂದ್ರ ಸಚಿವ ಎಲ್​.ಮುರುಗನ್​ ಅವರು ಮಧ್ಯಪ್ರದೇಶದಿಂದ ರಾಜ್ಯಸಭೆಯೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲಾಗಿದೆ. ಅಕ್ಟೋಬರ್​ 4ರಂದು ರಾಜ್ಯಸಭಾ ಉಪಚುನಾವಣೆ ನಡೆಯಲಿದ್ದರೂ, ಇಲ್ಲಿ ಕಾಂಗ್ರೆಸ್​ ಯಾವುದೇ ಅಭ್ಯರ್ಥಿಯನ್ನೂ ನಿಲ್ಲಿಸಲಿಲ್ಲ. ಹೀಗಾಗಿ ಮುರುಗನ್​ ಅವಿರೋಧ ಆಯ್ಕೆಯಾಗಿದ್ದಾರೆ. ಅಲ್ಲಿಗೆ ಮಧ್ಯಪ್ರದೇಶದಿಂದ ಆಯ್ಕೆಯಾದ ರಾಜ್ಯಸಭಾ ಸದಸ್ಯರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. 

ಬಿಜೆಪಿಯಿಂದ ಎಲ್​. ಮುರುಗನ್​ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿತ್ತು. ಆದರೆ ನಿನ್ನೆ ನಾಮಪತ್ರ ಹಿಂಪಡೆಯಲು ಕೊನೇದಿನವಾಗಿದ್ದರೂ ಕಾಂಗ್ರೆಸ್​ ಸೇರಿ ಯಾವುದೇ ಪಕ್ಷದ ಅಭ್ಯರ್ಥಿಯೂ ಕಣಕ್ಕೆ ಇಳಿಯಲಿಲ್ಲ. ಹೀಗಾಗಿ ಎಲ್​. ಮುರುಗನ್ ಅವಿರೋಧ ಆಯ್ಕೆ ಎಂದು ಘೋಷಿಸಲಾಯಿತು.  ಮುರುಗನ್​ ಅವರು ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಬೇರೆ ಯಾವುದೇ ಅಭ್ಯರ್ಥಿಯೂ ಇಲ್ಲ. ಆಡಳಿತ ಪಕ್ಷಕ್ಕೆ ಸ್ಪಷ್ಟಬಹುಮತ ಇದೆ ಎಂದು ಮಧ್ಯಪ್ರದೇಶ ವಿಧಾನಸಭೆ ಸೆಕ್ರೆಟರಿಯೇಟ್ ಪ್ರಧಾನ ಕಾರ್ಯದರ್ಶಿ ಮತ್ತು ರಿಟರ್ನಿಂಗ್​ ಅಧಿಕಾರಿ ಎ.ಪಿ.ಸಿಂಗ್​ ಹೇಳಿದ್ದಾರೆ.  ಅಲ್ಲದೆ, ಮುರುಗನ್ ಅವರಿಗೆ ಗೆಲುವಿನ ಪ್ರಮಾಣಪತ್ರವನ್ನೂ ನೀಡಲಾಗಿದೆ ಎಂದಿದ್ದಾರೆ.

ಥಾವರ್​ಚಂದ್​ ಗೆಹ್ಲೋಟ್ ರಾಜೀನಾಮೆಯಿಂದ ತೆರವು ಮಧ್ಯಪ್ರದೇಶದ ರಾಜ್ಯಸಭಾ ಸದಸ್ಯರಾಗಿದ್ದ ಥಾವರ್​ಚಂದ್​ ಗೆಹ್ಲೋಟ್​ ಕಳೆದ ಜುಲೈನಲ್ಲಿ ರಾಜೀನಾಮೆ ನೀಡಿದ್ದು, ಅವರನ್ನು ಕರ್ನಾಟಕದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿತ್ತು. ಮುರುಗನ್​ ಅವರು ಜುಲೈನಲ್ಲಿ ಪ್ರಧಾನಿ ಮೋದಿ ಕ್ಯಾಬಿನೆಟ್​ ಸೇರಿದ್ದರು. ಅದಕ್ಕೂ ಮೊದಲು ತಮಿಳುನಾಡು ಬಿಜೆಪಿ ಘಟಕಕ್ಕಾಗಿ ಕೆಲಸ ಮಾಡುತ್ತಿದ್ದರು. ಕೇಂದ್ರ ಮಾಹಿತಿ, ಪ್ರಸಾರ  ಮತ್ತು ಮೀನುಗಾರಿಕೆ, ಪಶುಸಂಗೋಪನೆ ಇಲಾಖೆ ರಾಜ್ಯಸಚಿವರಾಗಿದ್ದ ಎಲ್​.ಮುರುಗನ್​ ಇದೀಗ ಮಧ್ಯಪ್ರದೇಶದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.

ಮಧ್ಯಪ್ರದೇಶ ವಿಧಾನಸಭೆಯಲ್ಲಿ 230 ಸದಸ್ಯರಿದ್ದು, ಅದರಲ್ಲಿ ಬಿಜೆಪಿಯ 125 ಶಾಸಕರು, ಕಾಂಗ್ರೆಸ್​ನ 95, ಬಹುಜನ ಸಮಾಜ ಪಾರ್ಟಿಯ 2, ಸಮಾಜವಾದಿ ಪಕ್ಷದ 1 ಮತ್ತು ಸ್ವತಂತ್ರ ಶಾಸಕರು ನಾಲ್ವರು ಇದ್ದಾರೆ. ಮೂರು ಸ್ಥಾನಗಳು ಖಾಲಿ ಇವೆ.  ಹಾಗೇ, ಮಧ್ಯಪ್ರದೇಶದಿಂದ ಒಟ್ಟು 11 ರಾಜ್ಯಸಭಾ ಸೀಟ್​ಗಳಿವೆ. ಇದೀಗ ಮುರುಗನ್​ ಆಯ್ಕೆಯ ಮೂಲಕ ಬಿಜೆಪಿ ಸದಸ್ಯರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಕಾಂಗ್ರೆಸ್​​ನ ಮೂವರು ರಾಜ್ಯಸಭಾ ಸದಸ್ಯರು ಇದ್ದಾರೆ.

ಮಧ್ಯಪ್ರದೇಶದ ಬಿಜೆಪಿ ರಾಜ್ಯಸಭಾ ಸದಸ್ಯರು: ಎಂ.ಜೆ.ಅಕ್ಬರ್​, ಜ್ಯೋತಿರಾದಿತ್ಯ ಸಿಂಧಿಯಾ, ಧರ್ಮೇಂದ್ರ ಪ್ರಧಾನ್​, ಅಜಯ್​ ಪ್ರತಾಪ್​ ಸಿಂಗ್, ಕೈಲಾಶ್​ ಸೋನಿ, ಸುಮರ್​ ಸಿಂಗ್​ ಸೋಲಂಕಿ, ಸಂಪತಿಯ ಉಯಿಕೆ ಮತ್ತು ಎಲ್​. ಮುರುಗನ್​. ಕಾಂಗ್ರೆಸ್​ ಸದಸ್ಯರು: ದಿಗ್ವಿಜಯ್​ ಸಿಂಗ್​, ವಿವೇಕ್ ತಂಖಾ ಮತ್ತು ರಾಜಮಣಿ ಪಟೇಲ್.

ಇದನ್ನೂ ಓದಿ: Rajya Sabha Bypolls: ರಾಜ್ಯಸಭೆಯ 7 ಸ್ಥಾನಕ್ಕೆ ಉಪಚುನಾವಣೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

ಬಾಬನಿಪುರದಲ್ಲಿ ಸೆಕ್ಷನ್​ 144 ಜಾರಿಮಾಡಲು ಬಿಜೆಪಿ ನಿಯೋಗ ಆಗ್ರಹ; ಗಲಾಟೆ ಬೆನ್ನಲ್ಲೇ ಚುನಾವಣಾ ಆಯೋಗಕ್ಕೆ ದೂರು

(BJP Leader L Murugan elected uncontested to the Rajya Sabha from Madhya Pradesh)

Published On - 9:47 am, Tue, 28 September 21

ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ