AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajya Sabha ByPoll: ಮಧ್ಯಪ್ರದೇಶದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಕೇಂದ್ರ ಸಚಿವ ಎಲ್.ಮುರುಗನ್

ಮಧ್ಯಪ್ರದೇಶದ ರಾಜ್ಯಸಭಾ ಸದಸ್ಯರಾಗಿದ್ದ ಥಾವರ್​ಚಂದ್​ ಗೆಹ್ಲೋಟ್​ ಕಳೆದ ಜುಲೈನಲ್ಲಿ ರಾಜೀನಾಮೆ ನೀಡಿದ್ದು, ಅವರನ್ನು ಕರ್ನಾಟಕದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿತ್ತು.

Rajya Sabha ByPoll: ಮಧ್ಯಪ್ರದೇಶದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಕೇಂದ್ರ ಸಚಿವ ಎಲ್.ಮುರುಗನ್
ರಾಜ್ಯಸಭೆಗೆ ಆಯ್ಕೆಯಾದ ಎಲ್​ ಮುರುಗನ್​​ಗೆ ಸಿಹಿ ತಿನಿಸಿ ಸಂಭ್ರಮ (ಪಿಟಿಐ ಫೋಟೋ)
TV9 Web
| Updated By: Lakshmi Hegde|

Updated on:Sep 28, 2021 | 9:51 AM

Share

ಬಿಜೆಪಿ ನಾಯಕ, ಕೇಂದ್ರ ಸಚಿವ ಎಲ್​.ಮುರುಗನ್​ ಅವರು ಮಧ್ಯಪ್ರದೇಶದಿಂದ ರಾಜ್ಯಸಭೆಯೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲಾಗಿದೆ. ಅಕ್ಟೋಬರ್​ 4ರಂದು ರಾಜ್ಯಸಭಾ ಉಪಚುನಾವಣೆ ನಡೆಯಲಿದ್ದರೂ, ಇಲ್ಲಿ ಕಾಂಗ್ರೆಸ್​ ಯಾವುದೇ ಅಭ್ಯರ್ಥಿಯನ್ನೂ ನಿಲ್ಲಿಸಲಿಲ್ಲ. ಹೀಗಾಗಿ ಮುರುಗನ್​ ಅವಿರೋಧ ಆಯ್ಕೆಯಾಗಿದ್ದಾರೆ. ಅಲ್ಲಿಗೆ ಮಧ್ಯಪ್ರದೇಶದಿಂದ ಆಯ್ಕೆಯಾದ ರಾಜ್ಯಸಭಾ ಸದಸ್ಯರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. 

ಬಿಜೆಪಿಯಿಂದ ಎಲ್​. ಮುರುಗನ್​ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿತ್ತು. ಆದರೆ ನಿನ್ನೆ ನಾಮಪತ್ರ ಹಿಂಪಡೆಯಲು ಕೊನೇದಿನವಾಗಿದ್ದರೂ ಕಾಂಗ್ರೆಸ್​ ಸೇರಿ ಯಾವುದೇ ಪಕ್ಷದ ಅಭ್ಯರ್ಥಿಯೂ ಕಣಕ್ಕೆ ಇಳಿಯಲಿಲ್ಲ. ಹೀಗಾಗಿ ಎಲ್​. ಮುರುಗನ್ ಅವಿರೋಧ ಆಯ್ಕೆ ಎಂದು ಘೋಷಿಸಲಾಯಿತು.  ಮುರುಗನ್​ ಅವರು ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಬೇರೆ ಯಾವುದೇ ಅಭ್ಯರ್ಥಿಯೂ ಇಲ್ಲ. ಆಡಳಿತ ಪಕ್ಷಕ್ಕೆ ಸ್ಪಷ್ಟಬಹುಮತ ಇದೆ ಎಂದು ಮಧ್ಯಪ್ರದೇಶ ವಿಧಾನಸಭೆ ಸೆಕ್ರೆಟರಿಯೇಟ್ ಪ್ರಧಾನ ಕಾರ್ಯದರ್ಶಿ ಮತ್ತು ರಿಟರ್ನಿಂಗ್​ ಅಧಿಕಾರಿ ಎ.ಪಿ.ಸಿಂಗ್​ ಹೇಳಿದ್ದಾರೆ.  ಅಲ್ಲದೆ, ಮುರುಗನ್ ಅವರಿಗೆ ಗೆಲುವಿನ ಪ್ರಮಾಣಪತ್ರವನ್ನೂ ನೀಡಲಾಗಿದೆ ಎಂದಿದ್ದಾರೆ.

ಥಾವರ್​ಚಂದ್​ ಗೆಹ್ಲೋಟ್ ರಾಜೀನಾಮೆಯಿಂದ ತೆರವು ಮಧ್ಯಪ್ರದೇಶದ ರಾಜ್ಯಸಭಾ ಸದಸ್ಯರಾಗಿದ್ದ ಥಾವರ್​ಚಂದ್​ ಗೆಹ್ಲೋಟ್​ ಕಳೆದ ಜುಲೈನಲ್ಲಿ ರಾಜೀನಾಮೆ ನೀಡಿದ್ದು, ಅವರನ್ನು ಕರ್ನಾಟಕದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿತ್ತು. ಮುರುಗನ್​ ಅವರು ಜುಲೈನಲ್ಲಿ ಪ್ರಧಾನಿ ಮೋದಿ ಕ್ಯಾಬಿನೆಟ್​ ಸೇರಿದ್ದರು. ಅದಕ್ಕೂ ಮೊದಲು ತಮಿಳುನಾಡು ಬಿಜೆಪಿ ಘಟಕಕ್ಕಾಗಿ ಕೆಲಸ ಮಾಡುತ್ತಿದ್ದರು. ಕೇಂದ್ರ ಮಾಹಿತಿ, ಪ್ರಸಾರ  ಮತ್ತು ಮೀನುಗಾರಿಕೆ, ಪಶುಸಂಗೋಪನೆ ಇಲಾಖೆ ರಾಜ್ಯಸಚಿವರಾಗಿದ್ದ ಎಲ್​.ಮುರುಗನ್​ ಇದೀಗ ಮಧ್ಯಪ್ರದೇಶದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.

ಮಧ್ಯಪ್ರದೇಶ ವಿಧಾನಸಭೆಯಲ್ಲಿ 230 ಸದಸ್ಯರಿದ್ದು, ಅದರಲ್ಲಿ ಬಿಜೆಪಿಯ 125 ಶಾಸಕರು, ಕಾಂಗ್ರೆಸ್​ನ 95, ಬಹುಜನ ಸಮಾಜ ಪಾರ್ಟಿಯ 2, ಸಮಾಜವಾದಿ ಪಕ್ಷದ 1 ಮತ್ತು ಸ್ವತಂತ್ರ ಶಾಸಕರು ನಾಲ್ವರು ಇದ್ದಾರೆ. ಮೂರು ಸ್ಥಾನಗಳು ಖಾಲಿ ಇವೆ.  ಹಾಗೇ, ಮಧ್ಯಪ್ರದೇಶದಿಂದ ಒಟ್ಟು 11 ರಾಜ್ಯಸಭಾ ಸೀಟ್​ಗಳಿವೆ. ಇದೀಗ ಮುರುಗನ್​ ಆಯ್ಕೆಯ ಮೂಲಕ ಬಿಜೆಪಿ ಸದಸ್ಯರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಕಾಂಗ್ರೆಸ್​​ನ ಮೂವರು ರಾಜ್ಯಸಭಾ ಸದಸ್ಯರು ಇದ್ದಾರೆ.

ಮಧ್ಯಪ್ರದೇಶದ ಬಿಜೆಪಿ ರಾಜ್ಯಸಭಾ ಸದಸ್ಯರು: ಎಂ.ಜೆ.ಅಕ್ಬರ್​, ಜ್ಯೋತಿರಾದಿತ್ಯ ಸಿಂಧಿಯಾ, ಧರ್ಮೇಂದ್ರ ಪ್ರಧಾನ್​, ಅಜಯ್​ ಪ್ರತಾಪ್​ ಸಿಂಗ್, ಕೈಲಾಶ್​ ಸೋನಿ, ಸುಮರ್​ ಸಿಂಗ್​ ಸೋಲಂಕಿ, ಸಂಪತಿಯ ಉಯಿಕೆ ಮತ್ತು ಎಲ್​. ಮುರುಗನ್​. ಕಾಂಗ್ರೆಸ್​ ಸದಸ್ಯರು: ದಿಗ್ವಿಜಯ್​ ಸಿಂಗ್​, ವಿವೇಕ್ ತಂಖಾ ಮತ್ತು ರಾಜಮಣಿ ಪಟೇಲ್.

ಇದನ್ನೂ ಓದಿ: Rajya Sabha Bypolls: ರಾಜ್ಯಸಭೆಯ 7 ಸ್ಥಾನಕ್ಕೆ ಉಪಚುನಾವಣೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

ಬಾಬನಿಪುರದಲ್ಲಿ ಸೆಕ್ಷನ್​ 144 ಜಾರಿಮಾಡಲು ಬಿಜೆಪಿ ನಿಯೋಗ ಆಗ್ರಹ; ಗಲಾಟೆ ಬೆನ್ನಲ್ಲೇ ಚುನಾವಣಾ ಆಯೋಗಕ್ಕೆ ದೂರು

(BJP Leader L Murugan elected uncontested to the Rajya Sabha from Madhya Pradesh)

Published On - 9:47 am, Tue, 28 September 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ