AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರ ರಾಜ್ಯಪಾಲರಾಗಿ ಬಿಜೆಪಿ ರಾಜ್ಯಸಭಾ ಸದಸ್ಯರಾಗಿದ್ದ ಲಾ. ಗಣೇಶನ್​ ನೇಮಕ

ಆರ್​ಎಸ್​ಎಸ್ ಮೂಲದವರಾದ ಗಣೇಶನ್​ ನಂತರ ತಮಿಳುನಾಡು ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು. ಅದಾದ ಬಳಿಕ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ಮಣಿಪುರ ರಾಜ್ಯಪಾಲರಾಗಿ ಬಿಜೆಪಿ ರಾಜ್ಯಸಭಾ ಸದಸ್ಯರಾಗಿದ್ದ ಲಾ. ಗಣೇಶನ್​ ನೇಮಕ
ಲಾ ಗಣೇಶನ್​
TV9 Web
| Updated By: Lakshmi Hegde|

Updated on:Aug 22, 2021 | 12:42 PM

Share

ಮಣಿಪುರದ ರಾಜ್ಯಪಾಲರನ್ನಾಗಿ ಲಾ. ಗಣೇಶನ್​ ಅವರನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್​ ನೇಮಕ ಮಾಡಿದ್ದಾರೆ. ಬಿಜೆಪಿ ರಾಜ್ಯಸಭಾ ಸದಸ್ಯರು ಮತ್ತು ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಗಣೇಶನ್​ ಅವರು ಇಂದು ಮಣಿಪುರದ 17ನೇ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ.  ಬಿಜೆಪಿಯ ಹಲವು ಹುದ್ದೆಗಳನ್ನು ಇವರು ನಿಭಾಯಿಸಿದ್ದಾರೆ. 2016ರಲ್ಲಿ ಮಣಿಪುರದ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ್ದ ನಜ್ಮಾ ಹೆಪ್ಟುಲ್ಲಾ ಅನಾರೋಗ್ಯಕ್ಕೀಡಾದ ಹಿನ್ನೆಲೆಯಲ್ಲಿ, ಸಿಕ್ಕಿಂ ರಾಜ್ಯಪಾಲ ಗಂಗಾ ಪ್ರಸಾದ್ ಚೌರಾಸಿಯಾ ಮಣಿಪುರದ ರಾಜ್ಯಪಾಲರಾಗಿ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಂಡಿದ್ದರು. ಅದಾದ ಒಂದು ವಾರದ ಬಳಿಕ ಲಾ.ಗಣೇಶನ್​ ನೇಮಕಗೊಂಡಿದ್ದಾರೆ. 

ಲಾ.ಗಣೇಶನ್​ ಅವರು 1945ರ ಫೆಬ್ರವರಿ 16ರಂದು ತಮಿಳುನಾಡಿನಲ್ಲಿ ಹುಟ್ಟಿದ್ದಾರೆ. ಆರ್​ಎಸ್​ಎಸ್ ಮೂಲದವರಾದ ಗಣೇಶನ್​ ನಂತರ ತಮಿಳುನಾಡು ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು. ಅದಾದ ಬಳಿಕ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ನಂತರ ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡಿದ್ದರು.  ಇನ್ನೊಂದು ಆಸಕ್ತಿದಾಯಕ ವಿಷಯವೆಂದರೆ, 2016ರಲ್ಲಿ ಮಧ್ಯಪ್ರದೇಶದಿಂದ ಗಣೇಶನ್​ ಅವರು ರಾಜ್ಯಸಭೆಗೆ ಹೋಗುವಾಗಲೂ ಇದೇ ನಜ್ಮಾ ಹೆಪ್ಟುಲ್ಲಾ ಬದಲಿಗೇ ಹೋಗಿದ್ದರು.

ಇದನ್ನೂ ಓದಿ: ತಾಲಿಬಾನಿಗಳ ಕ್ರೌರ್ಯವನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಸಲ್ಮಾನ್​ ಖಾನ್​ ನಾಯಕಿ; 20 ವರ್ಷ ಹಿಂದಕ್ಕೆ ಹೋದ ಆಪ್ಘನ್​

ಸುಶಾಂತ್​ ಸಿಂಗ್​ಗೆ ರಕ್ಷಾ ಬಂಧನದ ಶುಭಾಶಯ ಕೋರಿದ ಸಹೋದರಿ ಶ್ವೇತಾ; ಚಿತ್ರ ನೋಡಿ ಭಾವುಕರಾದ ಅಭಿಮಾನಿಗಳು

(BJP Leader La Ganesan Appointed as governor of Manipur)

Published On - 12:12 pm, Sun, 22 August 21

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ