AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್ ಸಿಎಂ ಹಿಮಾಚಲದಲ್ಲಿ ತನ್ನ ಸಾಧನೆಗಳನ್ನು ಎಣಿಸುತ್ತಿರುವಾಗ ಪಂಜಾಬ್ ರಕ್ತದ ಕಣ್ಣೀರು ಸುರಿಸುತ್ತಿದೆ: ಬಿಜೆಪಿ ವಾಗ್ದಾಳಿ

ಹೆಚ್ಚು ದುಃಖಕರ ವಿಷಯವೆಂದರೆ ಭಗವಂತಮಾನ್ ಹಿಮಾಚಲ ಪ್ರವಾಸದಲ್ಲಿ ಅವರ ಸಾಧನೆಗಳನ್ನು ಎಣಿಸುತ್ತಿದ್ದಾರೆ, ಆದರೆ ಅವರ ಆಳ್ವಿಕೆಯಲ್ಲಿ ಪಂಜಾಬ್ ಪ್ರತಿದಿನ ರಕ್ತದ ಕಣ್ಣೀರು ಸುರಿಸುತ್ತಿದೆ ಎಂದು ಸಿರ್ಸಾ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಪಂಜಾಬ್ ಸಿಎಂ ಹಿಮಾಚಲದಲ್ಲಿ ತನ್ನ ಸಾಧನೆಗಳನ್ನು ಎಣಿಸುತ್ತಿರುವಾಗ ಪಂಜಾಬ್ ರಕ್ತದ ಕಣ್ಣೀರು ಸುರಿಸುತ್ತಿದೆ: ಬಿಜೆಪಿ ವಾಗ್ದಾಳಿ
ಪಂಜಾಬ್ ಪೊಲೀಸ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jun 12, 2022 | 6:23 PM

Share

ಕೌನ್ಸಿಲರ್‌ನ ಮಗ ಗುಂಡು ಹಾರಿಸಿದ ಪರಿಣಾಮ ಒಬ್ಬ ವ್ಯಕ್ತಿ ಸಾವಿಗೀಡಾಗಿದ್ದು, ಮೂವರು ಗಾಯಗೊಂಡ ಘಟನೆ ಖಂಡಿಸಿದ ಬಿಜೆಪಿ (BJP) ನಾಯಕ ಮಂಜಿಂದರ್ ಸಿಂಗ್ ಸಿರ್ಸಾ (Manjinder Singh Sirsa) ಭಾನುವಾರ ಆಮ್ ಆದ್ಮಿ ಪಕ್ಷ ಮತ್ತು  ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪೊಲೀಸರ ಸಮ್ಮುಖದಲ್ಲಿ ಅಮಾಯಕನೊಬ್ಬ ಸಾವನ್ನಪ್ಪಿದ್ದಾನೆ ಎಂದು ಹೇಳಿದ ಸಿರ್ಸಾ, ಹಿಮಾಚಲದಲ್ಲಿ ಮಾನ್ ತನ್ನ ಸಾಧನೆಗಳನ್ನು ಎಣಿಸುತ್ತಿರುವಾಗ ಪಂಜಾಬ್ ರಕ್ತದ ಕಣ್ಣೀರು ಸುರಿಸುತ್ತಿದೆ ಎಂದು ಹೇಳಿದ್ದಾರೆ. ಅಮೃತಸರದಲ್ಲಿ ಎಎಪಿ ಪಂಜಾಬ್ ಕೌನ್ಸಿಲರ್ ಮಗ ಪ್ಲಾಟ್ ವಶಪಡಿಸಿಕೊಳ್ಳಲು ಗುಂಡು ಹಾರಿಸಿದ. ಪೊಲೀಸರ ಸಮ್ಮುಖದಲ್ಲಿ ಒಬ್ಬ ಅಮಾಯಕ ಸಾವನ್ನಪ್ಪಿದ್ದಾನೆ. ಹೆಚ್ಚು ದುಃಖಕರ ವಿಷಯವೆಂದರೆ ಭಗವಂತಮಾನ್ ಹಿಮಾಚಲ ಪ್ರವಾಸದಲ್ಲಿ ಅವರ ಸಾಧನೆಗಳನ್ನು ಎಣಿಸುತ್ತಿದ್ದಾರೆ, ಆದರೆ ಅವರ ಆಳ್ವಿಕೆಯಲ್ಲಿ ಪಂಜಾಬ್ ಪ್ರತಿದಿನ ರಕ್ತದ ಕಣ್ಣೀರು ಸುರಿಸುತ್ತಿದೆ ಎಂದು ಸಿರ್ಸಾ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಬಿ-ವಿಭಾಗದ ಪೊಲೀಸ್ ಠಾಣಾ ವ್ಯಾಪ್ತಿಯ 100 ಅಡಿ ರಸ್ತೆ ಪ್ರದೇಶದಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಎಂಸಿ ಕೌನ್ಸಿಲರ್ ದಲ್ಬೀರ್ ಕೌರ್ ಅವರ ಪುತ್ರ ಎಎಪಿ ಕಾರ್ಯಕರ್ತ ಚರಣ್‌ದೀಪ್ ಸಿಂಗ್ ಅಲಿಯಾಸ್ ಬಬ್ಬಾ ಗುಂಡು ಹಾರಿಸಿದ ಪರಿಣಾಮ 35 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಘಟನೆಯ ವಿಡಿಯೊ ವೈರಲ್ ಆಗಿದ್ದು, ಗುಂಡಿನ ಚಕಮಕಿ ನಡೆದಾಗ ಸ್ಥಳದಲ್ಲಿ ಪೋಲೀಸರು ಇದ್ದಾರೆ ಎಂದು ಹೇಳಲಾಗಿದೆ.

ಮೃತರನ್ನು ಗುರ್ ಪರ್ತಾಪ್ ಸಿಂಗ್ ಅಲಿಯಾಸ್ ರಾಜ ಎಂದು ಗುರುತಿಸಲಾಗಿದ್ದು, ಗಾಯಗೊಂಡವರು ಅವರ ಸ್ನೇಹಿತರಾದ ರಿಷಿ ಚೌಧರಿ ಮತ್ತು ಜಸ್ಪ್ರೀತ್ ಸಿಂಗ್ ಎಂದು ಗುರುತಿಸಲಾಗಿದೆ. ಇನ್ನೊಬ್ಬರು ಕಾರ್ಮಿಕ ಆಗಿದ್ದು ಅವರ ಗುರುತು ಇದುವರೆಗೆ ಪತ್ತೆಯಾಗಿಲ್ಲ.

ಇದನ್ನೂ ಓದಿ
Image
ಪ್ರವಾದಿ ಮೊಹ್ಮದರ ವಿರುದ್ಧ ನೂಪುರ್ ಶರ್ಮಾ ಹೇಳಿಕೆ: ಬೆಳಗಾವಿಯಲ್ಲಿ ಪ್ರತಿಕೃತಿ ಗಲ್ಲಿಗೇರಿಸಿದ್ದ ಮೂವರ ಬಂಧನ
Image
ಪ್ರವಾದಿ ಮೊಹ್ಮದರ ವಿರುದ್ಧ ನೂಪುರ್ ಶರ್ಮಾ ಹೇಳಿಕೆ: ನೂಪುರ್ ಶರ್ಮಾಗೆ ಸಮನ್ಸ್ ನೀಡಿದ ಮುಂಬೈ ಪೊಲೀಸ್​​
Image
Nupur Sharma controversy: ನೂಪುರ ಶರ್ಮಾ ಆಕ್ಷೇಪಾರ್ಹ ಮಾತು, ದಿಢೀರ್ ಪ್ರತಿಭಟನೆಯ ಕಾವು ತಣ್ಣಗಾಗ್ತಿದೆ, ದೇಶದಲ್ಲಿ ಇಂದಿನ ಪರಿಸ್ಥಿತಿ ಹೇಗಿದೆ?

ಗಾಯಗೊಂಡ ಸಂತ್ರಸ್ತರೊಬ್ಬರ ಪ್ರಕಾರ, ಪೊಲೀಸರ ಸಮ್ಮುಖದಲ್ಲಿ ಆರೋಪಿಗಳು ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಮೂಲಗಳ ಪ್ರಕಾರ ಮೃತ ವ್ಯಕ್ತಿ ಮತ್ತು ಚರಣ್‌ದೀಪ್ ಸಿಂಗ್ ನಡುವೆ ವಿವಾದವಿತ್ತು. ಎಪ್ರಿಲ್‌ನಲ್ಲಿ ಅಮೃತಸರ ಮೇಯರ್ ಕರಮ್‌ಜಿತ್ ಸಿಂಗ್ ರಿಂಟು ನೇತೃತ್ವದಲ್ಲಿ ತಾಯಿ ಮತ್ತು ಮಗ ಇಬ್ಬರು ಎಎಪಿ ಸೇರಿದ್ದರು. ವರದಿಯ ಪ್ರಕಾರ, ಕೌನ್ಸಿಲರ್‌ನ ಮಗ ಕಾಂಗ್ರೆಸ್‌ನ ಮಾಜಿ ಸಚಿವ ನವಜೋತ್ ಸಿಂಗ್ ಸಿಧು ಅವರ ನಿಕಟವರ್ತಿಯೂ ಆಗಿದ್ದರು.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 5:48 pm, Sun, 12 June 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ