AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್ ಸಿಎಂ ಹಿಮಾಚಲದಲ್ಲಿ ತನ್ನ ಸಾಧನೆಗಳನ್ನು ಎಣಿಸುತ್ತಿರುವಾಗ ಪಂಜಾಬ್ ರಕ್ತದ ಕಣ್ಣೀರು ಸುರಿಸುತ್ತಿದೆ: ಬಿಜೆಪಿ ವಾಗ್ದಾಳಿ

ಹೆಚ್ಚು ದುಃಖಕರ ವಿಷಯವೆಂದರೆ ಭಗವಂತಮಾನ್ ಹಿಮಾಚಲ ಪ್ರವಾಸದಲ್ಲಿ ಅವರ ಸಾಧನೆಗಳನ್ನು ಎಣಿಸುತ್ತಿದ್ದಾರೆ, ಆದರೆ ಅವರ ಆಳ್ವಿಕೆಯಲ್ಲಿ ಪಂಜಾಬ್ ಪ್ರತಿದಿನ ರಕ್ತದ ಕಣ್ಣೀರು ಸುರಿಸುತ್ತಿದೆ ಎಂದು ಸಿರ್ಸಾ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಪಂಜಾಬ್ ಸಿಎಂ ಹಿಮಾಚಲದಲ್ಲಿ ತನ್ನ ಸಾಧನೆಗಳನ್ನು ಎಣಿಸುತ್ತಿರುವಾಗ ಪಂಜಾಬ್ ರಕ್ತದ ಕಣ್ಣೀರು ಸುರಿಸುತ್ತಿದೆ: ಬಿಜೆಪಿ ವಾಗ್ದಾಳಿ
ಪಂಜಾಬ್ ಪೊಲೀಸ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jun 12, 2022 | 6:23 PM

Share

ಕೌನ್ಸಿಲರ್‌ನ ಮಗ ಗುಂಡು ಹಾರಿಸಿದ ಪರಿಣಾಮ ಒಬ್ಬ ವ್ಯಕ್ತಿ ಸಾವಿಗೀಡಾಗಿದ್ದು, ಮೂವರು ಗಾಯಗೊಂಡ ಘಟನೆ ಖಂಡಿಸಿದ ಬಿಜೆಪಿ (BJP) ನಾಯಕ ಮಂಜಿಂದರ್ ಸಿಂಗ್ ಸಿರ್ಸಾ (Manjinder Singh Sirsa) ಭಾನುವಾರ ಆಮ್ ಆದ್ಮಿ ಪಕ್ಷ ಮತ್ತು  ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪೊಲೀಸರ ಸಮ್ಮುಖದಲ್ಲಿ ಅಮಾಯಕನೊಬ್ಬ ಸಾವನ್ನಪ್ಪಿದ್ದಾನೆ ಎಂದು ಹೇಳಿದ ಸಿರ್ಸಾ, ಹಿಮಾಚಲದಲ್ಲಿ ಮಾನ್ ತನ್ನ ಸಾಧನೆಗಳನ್ನು ಎಣಿಸುತ್ತಿರುವಾಗ ಪಂಜಾಬ್ ರಕ್ತದ ಕಣ್ಣೀರು ಸುರಿಸುತ್ತಿದೆ ಎಂದು ಹೇಳಿದ್ದಾರೆ. ಅಮೃತಸರದಲ್ಲಿ ಎಎಪಿ ಪಂಜಾಬ್ ಕೌನ್ಸಿಲರ್ ಮಗ ಪ್ಲಾಟ್ ವಶಪಡಿಸಿಕೊಳ್ಳಲು ಗುಂಡು ಹಾರಿಸಿದ. ಪೊಲೀಸರ ಸಮ್ಮುಖದಲ್ಲಿ ಒಬ್ಬ ಅಮಾಯಕ ಸಾವನ್ನಪ್ಪಿದ್ದಾನೆ. ಹೆಚ್ಚು ದುಃಖಕರ ವಿಷಯವೆಂದರೆ ಭಗವಂತಮಾನ್ ಹಿಮಾಚಲ ಪ್ರವಾಸದಲ್ಲಿ ಅವರ ಸಾಧನೆಗಳನ್ನು ಎಣಿಸುತ್ತಿದ್ದಾರೆ, ಆದರೆ ಅವರ ಆಳ್ವಿಕೆಯಲ್ಲಿ ಪಂಜಾಬ್ ಪ್ರತಿದಿನ ರಕ್ತದ ಕಣ್ಣೀರು ಸುರಿಸುತ್ತಿದೆ ಎಂದು ಸಿರ್ಸಾ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಬಿ-ವಿಭಾಗದ ಪೊಲೀಸ್ ಠಾಣಾ ವ್ಯಾಪ್ತಿಯ 100 ಅಡಿ ರಸ್ತೆ ಪ್ರದೇಶದಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಎಂಸಿ ಕೌನ್ಸಿಲರ್ ದಲ್ಬೀರ್ ಕೌರ್ ಅವರ ಪುತ್ರ ಎಎಪಿ ಕಾರ್ಯಕರ್ತ ಚರಣ್‌ದೀಪ್ ಸಿಂಗ್ ಅಲಿಯಾಸ್ ಬಬ್ಬಾ ಗುಂಡು ಹಾರಿಸಿದ ಪರಿಣಾಮ 35 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಘಟನೆಯ ವಿಡಿಯೊ ವೈರಲ್ ಆಗಿದ್ದು, ಗುಂಡಿನ ಚಕಮಕಿ ನಡೆದಾಗ ಸ್ಥಳದಲ್ಲಿ ಪೋಲೀಸರು ಇದ್ದಾರೆ ಎಂದು ಹೇಳಲಾಗಿದೆ.

ಮೃತರನ್ನು ಗುರ್ ಪರ್ತಾಪ್ ಸಿಂಗ್ ಅಲಿಯಾಸ್ ರಾಜ ಎಂದು ಗುರುತಿಸಲಾಗಿದ್ದು, ಗಾಯಗೊಂಡವರು ಅವರ ಸ್ನೇಹಿತರಾದ ರಿಷಿ ಚೌಧರಿ ಮತ್ತು ಜಸ್ಪ್ರೀತ್ ಸಿಂಗ್ ಎಂದು ಗುರುತಿಸಲಾಗಿದೆ. ಇನ್ನೊಬ್ಬರು ಕಾರ್ಮಿಕ ಆಗಿದ್ದು ಅವರ ಗುರುತು ಇದುವರೆಗೆ ಪತ್ತೆಯಾಗಿಲ್ಲ.

ಇದನ್ನೂ ಓದಿ
Image
ಪ್ರವಾದಿ ಮೊಹ್ಮದರ ವಿರುದ್ಧ ನೂಪುರ್ ಶರ್ಮಾ ಹೇಳಿಕೆ: ಬೆಳಗಾವಿಯಲ್ಲಿ ಪ್ರತಿಕೃತಿ ಗಲ್ಲಿಗೇರಿಸಿದ್ದ ಮೂವರ ಬಂಧನ
Image
ಪ್ರವಾದಿ ಮೊಹ್ಮದರ ವಿರುದ್ಧ ನೂಪುರ್ ಶರ್ಮಾ ಹೇಳಿಕೆ: ನೂಪುರ್ ಶರ್ಮಾಗೆ ಸಮನ್ಸ್ ನೀಡಿದ ಮುಂಬೈ ಪೊಲೀಸ್​​
Image
Nupur Sharma controversy: ನೂಪುರ ಶರ್ಮಾ ಆಕ್ಷೇಪಾರ್ಹ ಮಾತು, ದಿಢೀರ್ ಪ್ರತಿಭಟನೆಯ ಕಾವು ತಣ್ಣಗಾಗ್ತಿದೆ, ದೇಶದಲ್ಲಿ ಇಂದಿನ ಪರಿಸ್ಥಿತಿ ಹೇಗಿದೆ?

ಗಾಯಗೊಂಡ ಸಂತ್ರಸ್ತರೊಬ್ಬರ ಪ್ರಕಾರ, ಪೊಲೀಸರ ಸಮ್ಮುಖದಲ್ಲಿ ಆರೋಪಿಗಳು ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಮೂಲಗಳ ಪ್ರಕಾರ ಮೃತ ವ್ಯಕ್ತಿ ಮತ್ತು ಚರಣ್‌ದೀಪ್ ಸಿಂಗ್ ನಡುವೆ ವಿವಾದವಿತ್ತು. ಎಪ್ರಿಲ್‌ನಲ್ಲಿ ಅಮೃತಸರ ಮೇಯರ್ ಕರಮ್‌ಜಿತ್ ಸಿಂಗ್ ರಿಂಟು ನೇತೃತ್ವದಲ್ಲಿ ತಾಯಿ ಮತ್ತು ಮಗ ಇಬ್ಬರು ಎಎಪಿ ಸೇರಿದ್ದರು. ವರದಿಯ ಪ್ರಕಾರ, ಕೌನ್ಸಿಲರ್‌ನ ಮಗ ಕಾಂಗ್ರೆಸ್‌ನ ಮಾಜಿ ಸಚಿವ ನವಜೋತ್ ಸಿಂಗ್ ಸಿಧು ಅವರ ನಿಕಟವರ್ತಿಯೂ ಆಗಿದ್ದರು.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 5:48 pm, Sun, 12 June 22

Follow Us
TV9 Web
TV9 Web

TV9 Kannada

Read More
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ