AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಫ್​ ಅಲಿಖಾನ್​ ಅಭಿನಯದ ತಾಂಡವ್​ ವಿರುದ್ಧ ಸಿಡಿದೆದ್ದ ಬಿಜೆಪಿ ನಾಯಕರು; ಕ್ಷಮೆಗೆ ಒತ್ತಾಯ

ತಾಂಡವ್​ ವೆಬ್​ ಸೀರಿಸ್​ಗೆ ನಿಷೇಧ ಹೇರುವಂತೆ ಒತ್ತಾಯಿಸಿ, ಬಿಜೆಪಿ ಸಂಸದ ಮನೋಜ್​ ಕೋಟಾಕ್​ ಅವರು, ಮಾಹಿತಿ ಮತ್ತು ಪ್ರಸಾರ ಇಲಾಖೆ ಸಚಿವ ಪ್ರಕಾಶ್ ಜಾವಡೇಕರ್​ಗೆ ಪತ್ರ ಬರೆದಿದ್ದಾರೆ. ಒಟಿಟಿ ಫ್ಲಾಟ್​ಫಾರಂ ನಿಯಂತ್ರಣಕ್ಕೆ ಪ್ರಾಧಿಕಾರ ರಚಿಸುವಂತೆ ಮನವಿ ಮಾಡಿದ್ದಾರೆ.

ಸೈಫ್​ ಅಲಿಖಾನ್​ ಅಭಿನಯದ ತಾಂಡವ್​ ವಿರುದ್ಧ ಸಿಡಿದೆದ್ದ ಬಿಜೆಪಿ ನಾಯಕರು; ಕ್ಷಮೆಗೆ ಒತ್ತಾಯ
ತಾಂಡವ್​ ವೆಬ್​ಸೀರಿಸ್​ನ ಪೋಸ್ಟರ್​
Lakshmi Hegde
| Updated By: ರಶ್ಮಿ ಕಲ್ಲಕಟ್ಟ|

Updated on: Jan 17, 2021 | 6:49 PM

Share

ಇತ್ತೀಚೆಗಷ್ಟೇ ಅಮೇಜಾನ್​ ಪ್ರೈಮ್​ ವಿಡಿಯೊದಲ್ಲಿ ಬಿಡುಗಡೆಯಾಗಿರುವ, ನಟ ಸೈಫ್​ ಅಲಿಖಾನ್​ ಅಭಿನಯದ ‘ತಾಂಡವ್’​ ವೆಬ್​ ಸೀರಿಸ್​ ವಿರುದ್ಧ ಬಿಜೆಪಿ ನಾಯಕ ರಾಮ್​ ಕದಮ್ ಸೇರಿ ಹಲವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ವೆಬ್​ ಸರಣಿ ಹಿಂದೂಗಳ ಭಾವನೆಗೆ ಧಕ್ಕೆ ತರುವಂತಿದೆ ಎಂದು ಆರೋಪಿಸಿದ್ದಾರೆ.

ಅದ್ಯಾಕೆ ಸದಾ ಯಾವುದಾದರೂ ಒಂದು ಸಿನಿಮಾ ಮತ್ತು ವೆಬ್​ ಸೀರಿಸ್​ ಮೂಲಕ ಹಿಂದೂ ದೇವರು, ದೇವತೆಗಳಿಗೆ ಪದೇಪದೆ ಅಗೌರವ ತೋರಲಾಗುತ್ತದೆ? ಈಗ ಅಂಥದ್ದೇ ಒಂದು ವೆಬ್​ ಸರಣಿಯಲ್ಲಿ ಸೈಫ್ ಅಲಿಖಾನ್​ ಪಾತ್ರ ನಿರ್ವಹಿಸಿ, ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟುಮಾಡಿದ್ದಾರೆ. ಈ ವೆಬ್​ ಸೀರಿಸ್​ನಲ್ಲಿ ಶಿವನನ್ನು ತುಂಬ ಹಗುರವಾಗಿ ಚಿತ್ರಿಸಲಾಗಿದೆ. ಈ ಭಾಗವನ್ನು ನಿರ್ದೇಶಕ ಅಲಿ ಅಬ್ಬಾಸ್​ ಜಾಫರ್​ ತೆಗೆದುಹಾಕಬೇಕು ಎಂದು ಕದಮ್​ ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲ ಇದರಲ್ಲಿ ಇರುವ ಎಲ್ಲರೂ ಕ್ಷಮೆ ಕೇಳಬೇಕು ಎಂದೂ ಒತ್ತಾಯಿಸಿದ್ದಾರೆ. ವೆಬ್​ ಸರಣಿಯ ಸ್ವರೂಪವನ್ನು ಬದಲಿಸುವವರೆಗೂ ನಾವು boycott Tandavನ್ನು ಮುಂದುವರಿಸುತ್ತೇವೆ ಎಂದಿದ್ದಾರೆ.

ಪೊಲೀಸರಿಗೆ ದೂರು ಇನ್ನು ತಾಂಡವ್​ನಲ್ಲಿ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ರಾಮ್ ಕದಮ್​ ಇದರ ನಿರ್ಮಾಪಕರ ವಿರುದ್ಧ  ಘಾಟ್​​ಕೋಪಾರ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಶೋನಲ್ಲಿರುವ ಪಾತ್ರಧಾರಿಗಳು, ನಿರ್ಮಾಪಕರು, ನಿರ್ದೇಶಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದ್ದಾರೆ.

ಕೇಂದ್ರ ಸಚಿವರಿಗೆ ಪತ್ರ ಇನ್ನು ತಾಂಡವ್​ ವೆಬ್​ ಸೀರಿಸ್​ಗೆ ನಿಷೇಧ ಹೇರುವಂತೆ ಒತ್ತಾಯಿಸಿ, ಬಿಜೆಪಿ ಸಂಸದ ಮನೋಜ್​ ಕೋಟಾಕ್​ ಅವರು, ಮಾಹಿತಿ ಮತ್ತು ಪ್ರಸಾರ ಇಲಾಖೆ ಸಚಿವ ಪ್ರಕಾಶ್ ಜಾವಡೇಕರ್​ಗೆ ಪತ್ರ ಬರೆದಿದ್ದಾರೆ. ಒಟಿಟಿ ಫ್ಲಾಟ್​ಫಾರಂ ನಿಯಂತ್ರಣಕ್ಕೆ ಪ್ರಾಧಿಕಾರ ರಚಿಸುವಂತೆ ಮನವಿ ಮಾಡಿದ್ದಾರೆ. ಆನ್​ಲೈನ್​ ಫ್ಲಾಟ್​ಫಾರಂಗಳಲ್ಲಿ ಸೆನ್ಸಾರ್​ಗೆ ಯಾವುದೇ ಪ್ರಾಧಿಕಾರ ಇಲ್ಲದ ಕಾರಣ, ಪದೇಪದೆ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟಾಗುತ್ತಿದೆ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.

ಒಂದು ಕೋಟಿ ಲಂಚಕ್ಕೆ ಬೇಡಿಕೆ ಆರೋಪ -CBIನಿಂದ ಇಬ್ಬರು ಹಿರಿಯ ರೈಲ್ವೆ ಅಧಿಕಾರಿಗಳ ಬಂಧನ

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ