AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಫ್​ ಅಲಿಖಾನ್​ ಅಭಿನಯದ ತಾಂಡವ್​ ವಿರುದ್ಧ ಸಿಡಿದೆದ್ದ ಬಿಜೆಪಿ ನಾಯಕರು; ಕ್ಷಮೆಗೆ ಒತ್ತಾಯ

ತಾಂಡವ್​ ವೆಬ್​ ಸೀರಿಸ್​ಗೆ ನಿಷೇಧ ಹೇರುವಂತೆ ಒತ್ತಾಯಿಸಿ, ಬಿಜೆಪಿ ಸಂಸದ ಮನೋಜ್​ ಕೋಟಾಕ್​ ಅವರು, ಮಾಹಿತಿ ಮತ್ತು ಪ್ರಸಾರ ಇಲಾಖೆ ಸಚಿವ ಪ್ರಕಾಶ್ ಜಾವಡೇಕರ್​ಗೆ ಪತ್ರ ಬರೆದಿದ್ದಾರೆ. ಒಟಿಟಿ ಫ್ಲಾಟ್​ಫಾರಂ ನಿಯಂತ್ರಣಕ್ಕೆ ಪ್ರಾಧಿಕಾರ ರಚಿಸುವಂತೆ ಮನವಿ ಮಾಡಿದ್ದಾರೆ.

ಸೈಫ್​ ಅಲಿಖಾನ್​ ಅಭಿನಯದ ತಾಂಡವ್​ ವಿರುದ್ಧ ಸಿಡಿದೆದ್ದ ಬಿಜೆಪಿ ನಾಯಕರು; ಕ್ಷಮೆಗೆ ಒತ್ತಾಯ
ತಾಂಡವ್​ ವೆಬ್​ಸೀರಿಸ್​ನ ಪೋಸ್ಟರ್​
Lakshmi Hegde
| Edited By: |

Updated on: Jan 17, 2021 | 6:49 PM

Share

ಇತ್ತೀಚೆಗಷ್ಟೇ ಅಮೇಜಾನ್​ ಪ್ರೈಮ್​ ವಿಡಿಯೊದಲ್ಲಿ ಬಿಡುಗಡೆಯಾಗಿರುವ, ನಟ ಸೈಫ್​ ಅಲಿಖಾನ್​ ಅಭಿನಯದ ‘ತಾಂಡವ್’​ ವೆಬ್​ ಸೀರಿಸ್​ ವಿರುದ್ಧ ಬಿಜೆಪಿ ನಾಯಕ ರಾಮ್​ ಕದಮ್ ಸೇರಿ ಹಲವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ವೆಬ್​ ಸರಣಿ ಹಿಂದೂಗಳ ಭಾವನೆಗೆ ಧಕ್ಕೆ ತರುವಂತಿದೆ ಎಂದು ಆರೋಪಿಸಿದ್ದಾರೆ.

ಅದ್ಯಾಕೆ ಸದಾ ಯಾವುದಾದರೂ ಒಂದು ಸಿನಿಮಾ ಮತ್ತು ವೆಬ್​ ಸೀರಿಸ್​ ಮೂಲಕ ಹಿಂದೂ ದೇವರು, ದೇವತೆಗಳಿಗೆ ಪದೇಪದೆ ಅಗೌರವ ತೋರಲಾಗುತ್ತದೆ? ಈಗ ಅಂಥದ್ದೇ ಒಂದು ವೆಬ್​ ಸರಣಿಯಲ್ಲಿ ಸೈಫ್ ಅಲಿಖಾನ್​ ಪಾತ್ರ ನಿರ್ವಹಿಸಿ, ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟುಮಾಡಿದ್ದಾರೆ. ಈ ವೆಬ್​ ಸೀರಿಸ್​ನಲ್ಲಿ ಶಿವನನ್ನು ತುಂಬ ಹಗುರವಾಗಿ ಚಿತ್ರಿಸಲಾಗಿದೆ. ಈ ಭಾಗವನ್ನು ನಿರ್ದೇಶಕ ಅಲಿ ಅಬ್ಬಾಸ್​ ಜಾಫರ್​ ತೆಗೆದುಹಾಕಬೇಕು ಎಂದು ಕದಮ್​ ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲ ಇದರಲ್ಲಿ ಇರುವ ಎಲ್ಲರೂ ಕ್ಷಮೆ ಕೇಳಬೇಕು ಎಂದೂ ಒತ್ತಾಯಿಸಿದ್ದಾರೆ. ವೆಬ್​ ಸರಣಿಯ ಸ್ವರೂಪವನ್ನು ಬದಲಿಸುವವರೆಗೂ ನಾವು boycott Tandavನ್ನು ಮುಂದುವರಿಸುತ್ತೇವೆ ಎಂದಿದ್ದಾರೆ.

ಪೊಲೀಸರಿಗೆ ದೂರು ಇನ್ನು ತಾಂಡವ್​ನಲ್ಲಿ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ರಾಮ್ ಕದಮ್​ ಇದರ ನಿರ್ಮಾಪಕರ ವಿರುದ್ಧ  ಘಾಟ್​​ಕೋಪಾರ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಶೋನಲ್ಲಿರುವ ಪಾತ್ರಧಾರಿಗಳು, ನಿರ್ಮಾಪಕರು, ನಿರ್ದೇಶಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದ್ದಾರೆ.

ಕೇಂದ್ರ ಸಚಿವರಿಗೆ ಪತ್ರ ಇನ್ನು ತಾಂಡವ್​ ವೆಬ್​ ಸೀರಿಸ್​ಗೆ ನಿಷೇಧ ಹೇರುವಂತೆ ಒತ್ತಾಯಿಸಿ, ಬಿಜೆಪಿ ಸಂಸದ ಮನೋಜ್​ ಕೋಟಾಕ್​ ಅವರು, ಮಾಹಿತಿ ಮತ್ತು ಪ್ರಸಾರ ಇಲಾಖೆ ಸಚಿವ ಪ್ರಕಾಶ್ ಜಾವಡೇಕರ್​ಗೆ ಪತ್ರ ಬರೆದಿದ್ದಾರೆ. ಒಟಿಟಿ ಫ್ಲಾಟ್​ಫಾರಂ ನಿಯಂತ್ರಣಕ್ಕೆ ಪ್ರಾಧಿಕಾರ ರಚಿಸುವಂತೆ ಮನವಿ ಮಾಡಿದ್ದಾರೆ. ಆನ್​ಲೈನ್​ ಫ್ಲಾಟ್​ಫಾರಂಗಳಲ್ಲಿ ಸೆನ್ಸಾರ್​ಗೆ ಯಾವುದೇ ಪ್ರಾಧಿಕಾರ ಇಲ್ಲದ ಕಾರಣ, ಪದೇಪದೆ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟಾಗುತ್ತಿದೆ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.

ಒಂದು ಕೋಟಿ ಲಂಚಕ್ಕೆ ಬೇಡಿಕೆ ಆರೋಪ -CBIನಿಂದ ಇಬ್ಬರು ಹಿರಿಯ ರೈಲ್ವೆ ಅಧಿಕಾರಿಗಳ ಬಂಧನ

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?