Madhya Pradesh Firing: ಮಾರ್ಕೆಟ್​ನಲ್ಲಿ ಬಿಜೆಪಿ ನಾಯಕನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

ಸದಾ ಜನರಿಂದ ತುಂಬಿ ತುಳುಕುತ್ತಿರುವ ಮಧ್ಯಪ್ರದೇಶದ ಮಾರ್ಕೆಟ್ ಒಂದರ ಬಳಿ ಬಿಜೆಪಿ ನಾಯಕನ ಮೇಲೆ ಗುಂಡಿನ ದಾಳಿ ನಡೆದಿದೆ.

Madhya Pradesh Firing: ಮಾರ್ಕೆಟ್​ನಲ್ಲಿ ಬಿಜೆಪಿ ನಾಯಕನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ
ಸಿಸಿಟಿವಿ ದೃಶ್ಯImage Credit source: NDTV
Follow us
| Updated By: ನಯನಾ ರಾಜೀವ್

Updated on: Jan 09, 2023 | 7:46 AM

ಸದಾ ಜನರಿಂದ ತುಂಬಿ ತುಳುಕುತ್ತಿರುವ ಮಧ್ಯಪ್ರದೇಶದ ಮಾರ್ಕೆಟ್ ಒಂದರ ಬಳಿ ಬಿಜೆಪಿ ನಾಯಕನ ಮೇಲೆ ಗುಂಡಿನ ದಾಳಿ ನಡೆದಿದೆ. ಮಧ್ಯಪ್ರದೇಶದ ಮೊರೆನಾದಲ್ಲಿರುವ ಮಾರುಕಟ್ಟೆಯಲ್ಲಿ ಈ ಘಟನೆ ನಡೆದಿದೆ, ಬೈಕ್​ನಲ್ಲಿ ಬಂದ ಮೂವರು ಅಪರಿಚಿತರು ಗುಂಡಿನ ದಾಳಿ ನಡೆಸಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಬಿಜೆಪಿ ನಾಯಕ ಸಂತೋಷ್ ಕುಮಾರ್ ಶರ್ಮಾ ಆಭರಣ ವ್ಯಾಪಾರಿಯೂ ಕೂಡ ಆಗಿದ್ದಾರೆ. ಗುಂಡಿನ ದಾಳಿ ನಡೆದ ವೇಳೆ ಅವರು ತಮ್ಮ ಆಭರಣ ಅಂಗಡಿಯಲ್ಲಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.

ಸಂತೋಷ್ ಕುಮಾರ್ ಸ್ನೇಹಿತರೊಂದಿಗೆ ಮಾತನಾಡುತ್ತಾ ಕುಳಿತಿರುವ ಸಂದರ್ಭದಲ್ಲಿ ದಾಳಿ ನಡೆದಿದೆ, ಅವರು ತನ್ನನ್ನು ತಾನು ರಕ್ಷಿಸಿಕೊಳ್ಳಲು ಕೆಳಗೆ ಬಾಗಿದ್ದರು.

ಒಂದೇ ಬೈಕ್‌ನಲ್ಲಿ ಮುಖವಾಡ ಧರಿಸಿಕೊಂಡು ಬಂದ ಮೂವರು ಗುಂಡು ಹಾರಿಸುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದಾಗಿದೆ. ಮಧ್ಯದಲ್ಲಿ ಕುಳಿತವನು ತನ್ನ ಎರಡೂ ಕೈಗಳಿಂದ ಆಭರಣ ವ್ಯಾಪಾರಿ ಸಂತೋಷ್ ಕುಮಾರ್ ಶರ್ಮಾ ಮೇಲೆ ಗುಂಡು ಹಾರಿಸಿದ್ದಾನೆ.

ಈ ಗುಂಡಿನ ದಾಳಿ ನಡೆದ ಸಮಯದಲ್ಲಿ ಅಲ್ಲಿ ಸೈಕ್ಲಿಂಗ್ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಕಾಣಿಸಿಕೊಂಡಿದ್ದು, ಜತೆಗೆ ಸ್ವಲ್ಪ ದೂರದಲ್ಲಿ ಮತ್ತೊಬ್ಬ ನಿಂತಿರುವುದು ಕಂಡುಬಂದಿದೆ. ಗುಂಡಿನ ದಾಳಿ ನಡೆದ ಕೆಲ ಕ್ಷಣಗಳಲ್ಲೇ ಸ್ಥಳದಲ್ಲಿ ಸಾರ್ವಜನಿಕರು ಬಂದು ಜಮಾಯಿಸಿದ್ದರು.

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ, ಘಟನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ದಾಳಿಗೆ ಕಾರಣವೇನು ಎಂಬುದು ಸ್ಪಷ್ಟವಾಗಿಲ್ಲ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ ಆರೋಪಿಗಳ ವಿರುದ್ಧ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದಸರಾ ರಜೆ: ತುಂಬಿ ತುಳುಕುತ್ತಿರೋ ಬೆಂಗಳೂರಿನ KSRTC ಬಸ್​ ನಿಲ್ದಾಣ
ದಸರಾ ರಜೆ: ತುಂಬಿ ತುಳುಕುತ್ತಿರೋ ಬೆಂಗಳೂರಿನ KSRTC ಬಸ್​ ನಿಲ್ದಾಣ
ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ
ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ
ಸುಲಭ ಕ್ಯಾಚ್ ಕೈಚೆಲ್ಲಿದ ಬಾಬರ್; 262 ರನ್ ಚಚ್ಚಿದ ರೂಟ್
ಸುಲಭ ಕ್ಯಾಚ್ ಕೈಚೆಲ್ಲಿದ ಬಾಬರ್; 262 ರನ್ ಚಚ್ಚಿದ ರೂಟ್
ಪುತ್ತಿಗೆ ಮಠದ ಹಳೆಯ ಅನುಯಾಯಿಯೇನೋ ಎಂಬಂತಿತ್ತು ರತನ್ ಟಾಟಾರ ವರ್ತನೆ!
ಪುತ್ತಿಗೆ ಮಠದ ಹಳೆಯ ಅನುಯಾಯಿಯೇನೋ ಎಂಬಂತಿತ್ತು ರತನ್ ಟಾಟಾರ ವರ್ತನೆ!
ಅಭಿಮಾನಿಗಳಿಗೆ ಕೈ ಸನ್ನೆ ಮಾಡಿದ ದರ್ಶನ್; ಜೈಲಿಂದ ದಾಸ ಕೊಟ್ಟ ಸಿಗ್ನಲ್ ಏನು?
ಅಭಿಮಾನಿಗಳಿಗೆ ಕೈ ಸನ್ನೆ ಮಾಡಿದ ದರ್ಶನ್; ಜೈಲಿಂದ ದಾಸ ಕೊಟ್ಟ ಸಿಗ್ನಲ್ ಏನು?
ಮಗನನ್ನು ಪುನಃ ಲಾಂಚ್ ಮಾಡಲು ಹಟತೊಟ್ಟ ಹೆಚ್ಡಿಕೆ ಕ್ಷೇತ್ರ ಬಿಟ್ಟುಕೊಡುವರೇ?
ಮಗನನ್ನು ಪುನಃ ಲಾಂಚ್ ಮಾಡಲು ಹಟತೊಟ್ಟ ಹೆಚ್ಡಿಕೆ ಕ್ಷೇತ್ರ ಬಿಟ್ಟುಕೊಡುವರೇ?
ಪಕ್ಷದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಮಯ ಬೇಕು: ವಿಜಯೇಂದ್ರ
ಪಕ್ಷದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಮಯ ಬೇಕು: ವಿಜಯೇಂದ್ರ
ಪ್ರಧಾನಿ ನರೇಂದ್ರ ಮೋದಿ ಭೇಟಿ ಬಗ್ಗೆ ಸೋಮಣ್ಣ ಹೇಳಿದ್ದೇನು? ಇಲ್ಲಿದೆ ನೋಡಿ
ಪ್ರಧಾನಿ ನರೇಂದ್ರ ಮೋದಿ ಭೇಟಿ ಬಗ್ಗೆ ಸೋಮಣ್ಣ ಹೇಳಿದ್ದೇನು? ಇಲ್ಲಿದೆ ನೋಡಿ
ಕೋರ್ಟ್ ಆದೇಶದ ಮೇರೆಗೆ ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಪ್ರದೋಶ್ ವಾಪಸ್
ಕೋರ್ಟ್ ಆದೇಶದ ಮೇರೆಗೆ ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಪ್ರದೋಶ್ ವಾಪಸ್
ಜಗಳೂರು ವಿಧಾನಸಭಾ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಆರಂಭ!
ಜಗಳೂರು ವಿಧಾನಸಭಾ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಆರಂಭ!