Madhya Pradesh Firing: ಮಾರ್ಕೆಟ್​ನಲ್ಲಿ ಬಿಜೆಪಿ ನಾಯಕನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

| Updated By: ನಯನಾ ರಾಜೀವ್

Updated on: Jan 09, 2023 | 7:46 AM

ಸದಾ ಜನರಿಂದ ತುಂಬಿ ತುಳುಕುತ್ತಿರುವ ಮಧ್ಯಪ್ರದೇಶದ ಮಾರ್ಕೆಟ್ ಒಂದರ ಬಳಿ ಬಿಜೆಪಿ ನಾಯಕನ ಮೇಲೆ ಗುಂಡಿನ ದಾಳಿ ನಡೆದಿದೆ.

Madhya Pradesh Firing: ಮಾರ್ಕೆಟ್​ನಲ್ಲಿ ಬಿಜೆಪಿ ನಾಯಕನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ
ಸಿಸಿಟಿವಿ ದೃಶ್ಯ
Image Credit source: NDTV
Follow us on

ಸದಾ ಜನರಿಂದ ತುಂಬಿ ತುಳುಕುತ್ತಿರುವ ಮಧ್ಯಪ್ರದೇಶದ ಮಾರ್ಕೆಟ್ ಒಂದರ ಬಳಿ ಬಿಜೆಪಿ ನಾಯಕನ ಮೇಲೆ ಗುಂಡಿನ ದಾಳಿ ನಡೆದಿದೆ.
ಮಧ್ಯಪ್ರದೇಶದ ಮೊರೆನಾದಲ್ಲಿರುವ ಮಾರುಕಟ್ಟೆಯಲ್ಲಿ ಈ ಘಟನೆ ನಡೆದಿದೆ, ಬೈಕ್​ನಲ್ಲಿ ಬಂದ ಮೂವರು ಅಪರಿಚಿತರು ಗುಂಡಿನ ದಾಳಿ ನಡೆಸಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಬಿಜೆಪಿ ನಾಯಕ ಸಂತೋಷ್ ಕುಮಾರ್ ಶರ್ಮಾ ಆಭರಣ ವ್ಯಾಪಾರಿಯೂ ಕೂಡ ಆಗಿದ್ದಾರೆ. ಗುಂಡಿನ ದಾಳಿ ನಡೆದ ವೇಳೆ ಅವರು ತಮ್ಮ ಆಭರಣ ಅಂಗಡಿಯಲ್ಲಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.

ಸಂತೋಷ್ ಕುಮಾರ್ ಸ್ನೇಹಿತರೊಂದಿಗೆ ಮಾತನಾಡುತ್ತಾ ಕುಳಿತಿರುವ ಸಂದರ್ಭದಲ್ಲಿ ದಾಳಿ ನಡೆದಿದೆ, ಅವರು ತನ್ನನ್ನು ತಾನು ರಕ್ಷಿಸಿಕೊಳ್ಳಲು ಕೆಳಗೆ ಬಾಗಿದ್ದರು.

ಒಂದೇ ಬೈಕ್‌ನಲ್ಲಿ ಮುಖವಾಡ ಧರಿಸಿಕೊಂಡು ಬಂದ ಮೂವರು ಗುಂಡು ಹಾರಿಸುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದಾಗಿದೆ.
ಮಧ್ಯದಲ್ಲಿ ಕುಳಿತವನು ತನ್ನ ಎರಡೂ ಕೈಗಳಿಂದ ಆಭರಣ ವ್ಯಾಪಾರಿ ಸಂತೋಷ್ ಕುಮಾರ್ ಶರ್ಮಾ ಮೇಲೆ ಗುಂಡು ಹಾರಿಸಿದ್ದಾನೆ.

ಈ ಗುಂಡಿನ ದಾಳಿ ನಡೆದ ಸಮಯದಲ್ಲಿ ಅಲ್ಲಿ ಸೈಕ್ಲಿಂಗ್ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಕಾಣಿಸಿಕೊಂಡಿದ್ದು, ಜತೆಗೆ ಸ್ವಲ್ಪ ದೂರದಲ್ಲಿ ಮತ್ತೊಬ್ಬ ನಿಂತಿರುವುದು ಕಂಡುಬಂದಿದೆ. ಗುಂಡಿನ ದಾಳಿ ನಡೆದ ಕೆಲ ಕ್ಷಣಗಳಲ್ಲೇ ಸ್ಥಳದಲ್ಲಿ ಸಾರ್ವಜನಿಕರು ಬಂದು ಜಮಾಯಿಸಿದ್ದರು.

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ, ಘಟನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ದಾಳಿಗೆ ಕಾರಣವೇನು ಎಂಬುದು ಸ್ಪಷ್ಟವಾಗಿಲ್ಲ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ ಆರೋಪಿಗಳ ವಿರುದ್ಧ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ