AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಲಗಾಂವ್​ನಲ್ಲಿ ಬಿಜೆಪಿ ಮುಖಂಡನ ಹತ್ಯೆಗೈದ ಉಗ್ರರು; ಒಂದೇ ತಿಂಗಳಲ್ಲಿ ಪಕ್ಷದ ಇಬ್ಬರು ನಾಯಕರ ಕೊಲೆ

ಆಗಸ್ಟ್​ ತಿಂಗಳಲ್ಲಿ ಉಗ್ರರ ಗುಂಡೇಟಿಗೆ ಬಲಿಯಾಗುತ್ತಿರುವ ಎರಡನೇ ಬಿಜೆಪಿ ಮುಖಂಡ ಇವರಾಗಿದ್ದಾರೆ. ಜಾವೇದ್​ ಅಹ್ಮದ್ ಹತ್ಯೆಯನ್ನು ಬಿಜೆಪಿ ನಾಯಕರು ಖಂಡಿಸಿದ್ದಾರೆ.

ಕುಲಗಾಂವ್​ನಲ್ಲಿ ಬಿಜೆಪಿ ಮುಖಂಡನ ಹತ್ಯೆಗೈದ ಉಗ್ರರು; ಒಂದೇ ತಿಂಗಳಲ್ಲಿ ಪಕ್ಷದ ಇಬ್ಬರು ನಾಯಕರ ಕೊಲೆ
ಮೃತ ಬಿಜೆಪಿ ಮುಖಂಡ
TV9 Web
| Edited By: |

Updated on:Aug 17, 2021 | 6:06 PM

Share

ಜಮ್ಮು-ಕಾಶ್ಮೀರದ ಕುಲಗಾಂವ್​ ಜಿಲ್ಲೆಯಲ್ಲಿ ಭಾರತೀಯ ಜನತಾ ಪಾರ್ಟಿ (BJP)ಯ ಮುಖಂಡರೊಬ್ಬರನ್ನು ಉಗ್ರರು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಜಾವೇದ್​ ಅಹ್ಮದ್​ ದಾರ್​ ಮೃತ ಬಿಜೆಪಿ ಮುಖಂಡ. ಇವರು ಹೋಮ್​ಶಾಲಿಬಗ್​ ಕ್ಷೇತ್ರದ ಬಿಜೆಪಿ ಅಧ್ಯಕ್ಷರಾಗಿದ್ದರು. ಇಂದು ಕುಲಗಾಂವ್​ನ ಬ್ರಜ್ಲೂ-ಜಾಗಿರ್​ ಎಂಬಲ್ಲಿ ಉಗ್ರರಿಂದ ಗುಂಡಿನ ದಾಳಿಗೆ ಒಳಗಾಗಿ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಆಗಸ್ಟ್​ ತಿಂಗಳಲ್ಲಿ ಉಗ್ರರ ಗುಂಡೇಟಿಗೆ ಬಲಿಯಾಗುತ್ತಿರುವ ಎರಡನೇ ಬಿಜೆಪಿ ಮುಖಂಡ ಇವರಾಗಿದ್ದಾರೆ. ಜಾವೇದ್​ ಅಹ್ಮದ್​ ದಾರ್ ಹತ್ಯೆಯನ್ನು, ಕಾಶ್ಮೀರದ ಬಿಜೆಪಿಯ ಮಾಧ್ಯಮ ವಿಭಾಗದ ಮುಖ್ಯಸ್ಥರ ಮನ್​ಜೂರ್​ ಅಹ್ಮದ್​ ಸೇರಿ ಹಲವು ನಾಯಕರು ತೀವ್ರವಾಗಿ ಖಂಡಿಸಿದ್ದಾರೆ.

ಆಗಸ್ಟ್​ 9ರಂದು ಬಿಜೆಪಿ ನಾಯಕ ಗುಲಾಮ್​ ರಸೂಲ್​ ದಾರ್​ ಮತ್ತು ಅವರ ಪತ್ನಿ ಜವಹಾರಾ ಬಾನೂ ಅವರನ್ನು ಮನೆಯಿಂದ ಎಳೆದುಕೊಂಡು ಬಂದು ಗುಂಡು ಹಾರಿಸಿದ್ದರು. ಈ ದುರ್ಘಟನೆ ಅನಂತ್​ನಾಗ್​ ಜಿಲ್ಲೆಯ ಲಾಲ್​ಚೌಕ್​ ಬಳಿ ನಡೆದಿತ್ತು. 65ವರ್ಷ ಗುಲಾಮ್​ ದಾರ್​, ಕುಲಗಾಂವ್​ ಜಿಲ್ಲೆಯ ಬಿಜೆಪಿ ಕಿಸಾನ್​ ಮೋರ್ಚಾ ಅಧ್ಯಕ್ಷರಾಗಿದ್ದರು.

ಇದನ್ನೂ ಓದಿ: Multibagger 2021: 1.20 ಲಕ್ಷ ರೂಪಾಯಿ ಮೊತ್ತವು 5 ವರ್ಷದಲ್ಲಿ 62 ಲಕ್ಷ ರೂಪಾಯಿ ಆದ ಮಲ್ಟಿಬ್ಯಾಗರ್ ಇದು

‘542 ಸದಸ್ಯರ ಮುಂದೆ ಸಚಿವರ ಪರಿಚಯ ಮಾಡಲು ಕಾಂಗ್ರೆಸ್ ಬಿಡಲಿಲ್ಲ; ದೇಶದ 135 ಕೋಟಿ ಜನರ ಮುಂದೆ ನಾವು ಹೋಗುತ್ತೇವೆ’

Published On - 6:06 pm, Tue, 17 August 21

ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ