AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big News: ಶಾಪಿಂಗ್​​ಗೆಂದು ಹೋಗಿದ್ದ ಬಿಜೆಪಿ ನಾಯಕನ ಮೇಲೆ ಗುಂಡು ಹಾರಿಸಿ ಹತ್ಯೆ

ಸುಖ್ಬೀರ್ ಖತಾನಾ ಹರಿಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ಆಪ್ತರಾಗಿದ್ದು, ಸೊಹ್ನಾದಿಂದ ಜಿಲ್ಲಾ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ತಯಾರಿ ನಡೆಸಿದ್ದರು.

Big News: ಶಾಪಿಂಗ್​​ಗೆಂದು ಹೋಗಿದ್ದ ಬಿಜೆಪಿ ನಾಯಕನ ಮೇಲೆ ಗುಂಡು ಹಾರಿಸಿ ಹತ್ಯೆ
ಬಿಜೆಪಿ ನಾಯಕ ಸುಖ್ಬೀರ್ ಖತಾನಾ Image Credit source: India Today
TV9 Web
| Updated By: ಸುಷ್ಮಾ ಚಕ್ರೆ|

Updated on: Sep 02, 2022 | 8:32 AM

Share

ಗುರುಗ್ರಾಮ: ಗುರುಗ್ರಾಮದ (Gurugram) ಬಟ್ಟೆ ಶೋರೂಮ್‌ನಲ್ಲಿ ಬಿಜೆಪಿ ನಾಯಕನನ್ನು ಐವರು ಅಪರಿಚಿತರು ಗುಂಡಿಕ್ಕಿ ಕೊಂದಿರುವ ಘಟನೆ ನಡೆದಿದೆ. ಇಲ್ಲಿನ ರಿಥೋಜ್ ಗ್ರಾಮದ ನಿವಾಸಿಯಾದ ಬಿಜೆಪಿ ನಾಯಕ ಸುಖ್ಬೀರ್ ಖತಾನಾ ಅಲಿಯಾಸ್ ಸುಖಿ ತನ್ನ ಸ್ನೇಹಿತನೊಂದಿಗೆ ಶೋರೂಮ್‌ಗೆ ಹೋಗಿದ್ದಾಗ ಸದರ್ ಬಜಾರ್ ಪ್ರದೇಶದಲ್ಲಿ ಅವರನ್ನು ಶೂಟ್ ಮಾಡಿ ಕೊಲ್ಲಲಾಗಿದೆ.

ಸೊಹ್ನಾ ಮಾರುಕಟ್ಟೆ ಸಮಿತಿಯ ಮಾಜಿ ಉಪಾಧ್ಯಕ್ಷರಾಗಿದ್ದ ಸುಖಬೀರ್ ಖತಾನಾ ಅವರಿಗೆ ಗುಂಡು ತಗುಲಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರವಾಗಿ ಗಾಯಗೊಂಡ ಖತಾನಾ ಅವರನ್ನು ಹತ್ತಿರದ ಆರ್ವಿ ಆಸ್ಪತ್ರೆಗೆ ಸಾಗಿಸಲಾಯಿತು. ಅವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಸುಖ್ಬೀರ್ ಖತಾನಾ ಹರಿಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ಆಪ್ತರಾಗಿದ್ದು, ಸೊಹ್ನಾದಿಂದ ಜಿಲ್ಲಾ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ತಯಾರಿ ನಡೆಸಿದ್ದರು. ಗುರುವಾರ ಮಧ್ಯಾಹ್ನ 3.20ರ ಸುಮಾರಿಗೆ ಸುಖ್ಬೀರ್ ಖತಾನಾ ತನ್ನ ಸ್ನೇಹಿತ ರಾಜೇಂದರ್ ಅವರೊಂದಿಗೆ ಕಿಯಾ ಕಾರಿನಲ್ಲಿ ಗುರುದ್ವಾರ ರಸ್ತೆಯಲ್ಲಿರುವ ರೇಮಂಡ್ ಶೋರೂಂಗೆ ಹೋದಾಗ ಈ ಘಟನೆ ನಡೆದಿದೆ. ಶೋರೂಮ್ ಬಳಿ ಕಾರು ನಿಲ್ಲಿಸಿ ಶಾಪಿಂಗ್ ಮಾಡಲು ಒಳಗೆ ಹೋದಾಗ ಅವರ ಮೇಲೆ ಗುಂಡು ಹಾರಿಸಲಾಗಿದೆ.

ಇದನ್ನೂ ಓದಿ: ರಜೆ ಮೇಲೆ ಬಂದಿದ್ದ ಯೋಧನನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಕೃತ್ಯ ನಡೆದ ಬಟ್ಟೆ ಶೋರೂಂನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಬಂದೂಕು ಹಿಡಿದಿದ್ದ ದಾಳಿಕೋರರ ದೃಶ್ಯ ಸೆರೆಯಾಗಿದೆ. ಐವರು ಬಂದೂಕುಧಾರಿಗಳಲ್ಲಿ ಇಬ್ಬರು ಕಪ್ಪು ಟೀ ಶರ್ಟ್, ಒಂದು ಬಿಳಿ ಚೆಕ್ ಶರ್ಟ್, ಮತ್ತೊಂದು ಕ್ಯಾಪ್ ಮತ್ತು ಒಂದು ಕೆಂಪು ಶರ್ಟ್ ಧರಿಸಿದ್ದರು. ಖತಾನಾ ಅವರನ್ನು ಗುಂಡಿಕ್ಕಿ ಹತ್ಯೆಗೈದ ನಂತರ ಅವರು ಶೋರೂಂನಿಂದ ಹೊರಟು ಹೋಗುವುದನ್ನು ವಿಡಿಯೋದಲ್ಲಿ ನೋಡಬಹುದು.

ಇಂದು ಮರಣೋತ್ತರ ಪರೀಕ್ಷೆ ನಡೆಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಖತಾನಾ ಅವರ ಫೇಸ್ ಬುಕ್ ಖಾತೆಯ ಪ್ರಕಾರ ಖತಾನಾ ಒಬ್ಬ ಆರ್ ಎಸ್ ಎಸ್ ಕಾರ್ಯಕರ್ತರಾಗಿದ್ದರು. ಕೊಲೆಯಾಗುವ 3 ಗಂಟೆಗಳ ಮೊದಲು ಅವರು ತನ್ನ ಪ್ರೊಫೈಲ್ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಡೇಟ್ ಮಾಡಿದ್ದರು.

ಇದನ್ನೂ ಓದಿ: Iraq: ಇರಾಕ್ ಪ್ರತಿಭಟನೆಯಲ್ಲಿ 23 ಪ್ರತಿಭಟನಾಕಾರರನ್ನು ಗುಂಡಿಕ್ಕಿ ಹತ್ಯೆ, 300ಕ್ಕೂ ಹೆಚ್ಚು ಮಂದಿಗೆ ಗಾಯ

ಆರೋಪಿಗಳ ಪತ್ತೆಗಾಗಿ ಅಪರಾಧ ವಿಭಾಗದ ತಂಡ ಸೇರಿದಂತೆ ವಿಶೇಷ ತಂಡಗಳನ್ನು ರಚಿಸಿದ್ದೇವೆ. ಹೆಚ್ಚಿನ ಆರೋಪಿಗಳನ್ನು ಗುರುತಿಸಲಾಗಿದ್ದು, ಆದಷ್ಟು ಬೇಗ ಅವರನ್ನು ಬಂಧಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?