AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Surendra Kewat : ಪಾಟ್ನಾದಲ್ಲಿ ಬಿಜೆಪಿ ನಾಯಕನ ಗುಂಡಿಕ್ಕಿ ಹತ್ಯೆ

ಉದ್ಯಮಿ ಗೋಪಾಲ್ ಖೇಮ್ಕಾ ಹತ್ಯೆ ನಡೆದು ಒಂದು ವಾರದ ಬಳಿಕ ಬಿಹಾರದ ಪಾಟ್ನಾದಲ್ಲಿ ಬಿಜೆಪಿ ನಾಯಕರೊಬ್ಬರನ್ನು ಗುಂಡಿಕ್ಕಿ ಹತ್ಯೆಮಾಡಲಾಗಿದೆ. ಮೃತರನ್ನು ಸುರೇಂದ್ರ ಕೆವಾತ್ ಎಂದು ಗುರುತಿಸಲಾಗಿದೆ. ಬಿಹ್ತಾ-ಸರ್ಮೇರಾ ರಾಜ್ಯ ಹೆದ್ದಾರಿಯಲ್ಲಿರುವ ಅವರ ಜಮೀನಿನ ಬಳಿ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಕೆವಾತ್ ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ.

Surendra Kewat : ಪಾಟ್ನಾದಲ್ಲಿ ಬಿಜೆಪಿ ನಾಯಕನ ಗುಂಡಿಕ್ಕಿ ಹತ್ಯೆ
ಗುಂಡಿನ ದಾಳಿ Image Credit source: iStock
ನಯನಾ ರಾಜೀವ್
|

Updated on: Jul 13, 2025 | 1:27 PM

Share

ಪಾಟ್ನಾ, ಜುಲೈ 13: ಉದ್ಯಮಿ ಗೋಪಾಲ್ ಖೇಮ್ಕಾ(Gopal Khemka) ಹತ್ಯೆ ನಡೆದು ಒಂದು ವಾರದ ಬಳಿಕ ಬಿಹಾರದ ಪಾಟ್ನಾದಲ್ಲಿ ಬಿಜೆಪಿ ನಾಯಕರೊಬ್ಬರನ್ನು ಗುಂಡಿಕ್ಕಿ ಹತ್ಯೆಮಾಡಲಾಗಿದೆ. ಮೃತರನ್ನು ಸುರೇಂದ್ರ ಕೆವಾತ್ ಎಂದು ಗುರುತಿಸಲಾಗಿದೆ. ಬಿಹ್ತಾ-ಸರ್ಮೇರಾ ರಾಜ್ಯ ಹೆದ್ದಾರಿಯಲ್ಲಿರುವ ಅವರ ಜಮೀನಿನ ಬಳಿ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಕೆವಾತ್ ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ.

ಪೀಪ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಶೇಖ್‌ಪುರ ಗ್ರಾಮದಲ್ಲಿ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು 52 ವರ್ಷದ ವ್ಯಕ್ತಿಯ ಮೇಲೆ ನಾಲ್ಕು ಬಾರಿ ಗುಂಡು ಹಾರಿಸಿದ್ದಾರೆ. ಊಟದ ಬಳಿಕ ಸುರೇಂದ್ರ ಅವರು ಜಮೀನಿನಲ್ಲಿ ನೀರಾವರಿಗೆ ಸಂಬಂಧಿಸಿದ ಕೆಲಸ ಮಾಡುತ್ತಿದ್ದರು. ನೀರಿನ ಪಂಪ್ ಅನ್ನು ಆಫ್ ಮಾಡಲು ಬಿಹ್ತಾ-ಸರ್ಮೇರಾ ರಾಜ್ಯ ಹೆದ್ದಾರಿ -78 ರಲ್ಲಿರುವ ತನ್ನ ಹೊಲದ ಬಳಿಯ ಕ್ಯಾಬಿನ್‌ಗೆ ಬೈಕ್‌ನಲ್ಲಿ ಹೋಗಿದ್ದರು. ಅವರು ಹಿಂತಿರುಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಗುಂಡು ಹಾರಿಸಲು ಪ್ರಾರಂಭಿಸಿದರು.

ದಾಳಿಕೋರರು ಕೆವಾತ್ ಮೇಲೆ ಹತ್ತಿರದಿಂದ ಗುಂಡು ಹಾರಿಸಿದ ನಂತರ ಸ್ಥಳದಿಂದ ಪರಾರಿಯಾಗಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪೊಲೀಸರು ಸುತ್ತಮುತ್ತಲಿನ ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡುತ್ತಿದ್ದಾರೆ.

ಮತ್ತಷ್ಟು ಓದಿ: ಗೋಪಾಲ್ ಖೇಮ್ಕಾ ಕೊಲೆ ಪ್ರಕರಣ: ಆರೋಪಿ ವಿಕಾಸ್ ಪೊಲೀಸ್ ಎನ್​ಕೌಂಟರ್​​ನಲ್ಲಿ ಹತ್ಯೆ

ಶಂಕಿತರನ್ನು ಗುರುತಿಸಲು ಅಧಿಕಾರಿಗಳು ತಾಂತ್ರಿಕ ಕಣ್ಗಾವಲು ಬಳಸುತ್ತಿದ್ದಾರೆ. ಸುರೇಂದ್ರ ಕೆವಾತ್ ಪಶುವೈದ್ಯರಾಗಿದ್ದರು. ಅವರು ತಮ್ಮ ಕುಟುಂಬದೊಂದಿಗೆ ಶೇಖ್‌ಪುರ ಗ್ರಾಮದಲ್ಲಿ ವಾಸಿಸುತ್ತಿದ್ದರು ಮತ್ತು ಪುನ್‌ಪುನ್ ಬ್ಲಾಕ್‌ನಲ್ಲಿ ಬಿಜೆಪಿ ಕಾರ್ಯಕರ್ತರಾಗಿದ್ದರು.

ಪಾಟ್ನಾದಲ್ಲಿ ಕೇವಲ ಒಂದು ವಾರದ ಅವಧಿಯಲ್ಲಿ ನಡೆದ ಎರಡನೇ ಆಘಾತಕಾರಿ ಹತ್ಯೆ ಇದಾಗಿದೆ. ಇದಕ್ಕೂ ಮೊದಲು, ಉದ್ಯಮಿ ಗೋಪಾಲ್ ಖೇಮ್ಕಾ ಅವರನ್ನು ಗಾಂಧಿ ಮೈದಾನದ ಬಳಿಯ ನಗರದ ಅವರ ಮನೆಯ ಹೊರಗೆ ಗುಂಡಿಕ್ಕಿ ಕೊಲ್ಲಲಾಗಿತ್ತು.

ಪಾಟ್ನಾದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವ ಬಗ್ಗೆ ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಭಾನುವಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಅವರ ಸಂಪುಟವನ್ನು ಪ್ರಶ್ನಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!