AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಗೆ ಬಂದು ಬಿಜೆಪಿ ನಾಯಕನನ್ನು ಬಂಧಿಸಿ ಕರೆದುಕೊಂಡು ಹೋದ ಪಂಜಾಬ್ ಪೊಲೀಸ್​; ದೆಹಲಿ ಪೊಲೀಸರಿಂದ ಕಿಡ್ನಾಪ್​ ಕೇಸ್​ ದಾಖಲು

ಪಂಜಾಬ್​​ನಲ್ಲಿ ತಮಗೆ ಸಿಕ್ಕ ಅಧಿಕಾರವನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಪ್ರತಿಪಕ್ಷಗಳನ್ನು ಹೆದರಿಸಲು ಬಳಕೆ ಮಾಡಿಕೊಳ್ಳುತ್ತಿರುವುದು ನಾಚಿಕೆಗೇಡು ಎಂದು ಪಂಜಾಬ್ ಪೊಲೀಸರು ಕಿಡಿಕಾರಿದ್ದಾರೆ.

ದೆಹಲಿಗೆ ಬಂದು ಬಿಜೆಪಿ ನಾಯಕನನ್ನು ಬಂಧಿಸಿ ಕರೆದುಕೊಂಡು ಹೋದ ಪಂಜಾಬ್ ಪೊಲೀಸ್​; ದೆಹಲಿ ಪೊಲೀಸರಿಂದ ಕಿಡ್ನಾಪ್​ ಕೇಸ್​ ದಾಖಲು
ಬಂಧಿತ ಬಿಜೆಪಿ ಮುಖಂಡ
TV9 Web
| Edited By: |

Updated on:May 06, 2022 | 1:02 PM

Share

ದೆಹಲಿ: ಇಲ್ಲಿನ ಬಿಜೆಪಿ ನಾಯಕ ತಜೀಂದರ್ ಪಾಲ್​ ಸಿಂಗ್​ ಬಗ್ಗಾ ಅವರನ್ನು ಪಂಜಾಬ್​ ಪೊಲೀಸರು ಇಂದು ಬಂಧಿಸಿದ್ದಾರೆ. ತಜೀಂದರ್ ಅವರ ದೆಹಲಿಯಲ್ಲಿರುವ ನಿವಾಸಕ್ಕೆ ಪಂಜಾಬ್​ನಿಂದ ಬಂದ 10-15 ಪೊಲೀಸರು ಅಲ್ಲಿಂದಲೇ ಅರೆಸ್ಟ್ ಮಾಡಿಕೊಂಡು ಕರೆದುಕೊಂಡು ಹೋಗಿದ್ದಾರೆ. ತಜೀಂದರ್​ ಪಾಲ್​ ಸಿಂಗ್​ ಅವರು ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ, ಈ ಮೂಲಕ ಧಾರ್ಮಿಕ ಗುಂಪುಗಳ ನಡುವೆ ದ್ವೇಷ ಹರಡಿದ್ದಾರೆ. ಅಷ್ಟೇ ಅಲ್ಲ, ಮಾರ್ಚ್​ 30ರಂದು ನಡೆದ ಪ್ರತಿಭಟನೆ ವೇಳೆ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​​ಗೆ ಬೆದರಿಕೆಯನ್ನೂ ಹಾಕಿದ್ದರು ಎಂದು ಆಪ್​ ನಾಯಕ ಸನ್ನಿ ಸಿಂಗ್​ ನೀಡಿದ ದೂರಿನ ಅನ್ವಯ ಪಂಜಾಬ್​ ಪೊಲೀಸರು ಬಂಧಿಸಿದ್ದಾರೆ. ಇನ್ನು ಬಗ್ಗಾರನ್ನು ಕರೆದುಕೊಂಡು ಹೋಗುತ್ತಿದ್ದ ಪಂಜಾಬ್​ ಪೊಲೀಸರನ್ನು ಮಾರ್ಗಮಧ್ಯದಲ್ಲಿ ಹರ್ಯಾಣ ಪೊಲೀಸರು ತಡೆದಿದ್ದಾರೆ. ಮತ್ತೊಂದೆಡೆ ಬಗ್ಗಾ ತಂದೆ ನೀಡಿದ ದೂರಿನ ಅನ್ವಯ ದೆಹಲಿ ಪೊಲೀಸರು ಕಿಡ್ನ್ಯಾಪ್​ ಕೇಸ್​​ ದಾಖಲು ಮಾಡಿದ್ದಾರೆ. 

ತಜೀಂದರ್ ಪಾಲ್​ ಸಿಂಗ್ ಬಗ್ಗಾರನ್ನು ಬಂಧಿಸಿದ್ದಕ್ಕೆ ಅವರ ತಂದೆ ಕೃಪಾಳ್​ ಸಿಂಗ್ ಬಗ್ಗಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಪಂಜಾಬ್​​ನ 10-15 ಪೊಲೀಸರು ಇಂದು ಮುಂಜಾನೆ 8.30ರ ಹೊತ್ತಿಗೆ  ನಮ್ಮ ಮನೆಗೆ ನುಗ್ಗಿದರು. ಅವರು ನನ್ನ ಮಗನನ್ನು ಕರೆದುಕೊಂಡು ಹೋಗುವುದನ್ನು ನಾನು ವಿಡಿಯೋ ಮಾಡಲು ಪ್ರಯತ್ನಿಸಿದ್ದಕ್ಕೆ ನನ್ನ ಮುಖದ ಮೇಲೆ ಹೊಡೆದಿದ್ದಾರೆ. ನನ್ನ ಮೊಬೈಲ್​​ ಕೂಡ ಕಸಿದುಕೊಂಡರು.  ನಂತರ ತೇಜಿಂದರ್​ರನನ್ನು ಹೊರಗೆ ಎಳೆದುಕೊಂಡು ಹೋದರು ಎಂದು ಆರೋಪಿಸಿದ್ದಾರೆ.

ಬಿಜೆಪಿ ಬಗ್ಗಾ ಬಂಧನವನ್ನು ಖಂಡಿಸಿದೆ. ಪಂಜಾಬ್​​ನಲ್ಲಿ ತಮಗೆ ಸಿಕ್ಕ ಅಧಿಕಾರವನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಪ್ರತಿಪಕ್ಷಗಳನ್ನು ಹೆದರಿಸಲು ಬಳಕೆ ಮಾಡಿಕೊಳ್ಳುತ್ತಿರುವುದು ನಾಚಿಕೆಗೇಡು. ತಜೀಂದರ್​ ಪಾಲ್ ಸಿಂಗ್​ ಬಗ್ಗಾರೊಂದಿಗೆ ದೆಹಲಿಯ ಪ್ರತಿಯೊಬ್ಬ ನಾಗರಿಕರೂ ಇದ್ದಾರೆ ಎಂದು ಬಿಜೆಪಿ ದೆಹಲಿ ವಕ್ತಾರ ಪ್ರವೀಣ್​ ಶಂಕರ್ ಕಪೂರ್ ತಿಳಿಸಿದ್ದಾರೆ.  ಹಾಗೇ ಬಿಜೆಪಿ ನಾಯಕ ಕಪಿಲ್​ ಮಿಶ್ರಾ, ತಜೀಂದರ್ ಬಗ್ಗಾರನ್ನು ಸುಮಾರು 50 ಜನ ಪೊಲೀಸರು ಸೇರಿ ಮನೆಯಿಂದ ಎಳೆದುಕೊಂಡು ಹೋಗಿದ್ದಾರೆ. ನಿಜವಾಗಿಯೂ ನಾಯಕನಾದವನು, ಪ್ರತಿಪಕ್ಷಗಳ ನಾಯಕರನ್ನು ಹೆದರಿಸಲು ಇಂಥ ಕೀಳು ಮಟ್ಟದ ತಂತ್ರ ಉಪಯೋಗಿಸುವುದಿಲ್ಲ ಎಂದಿದ್ದಾರೆ. ಬಿಜೆಪಿ ಐಟಿ ಸೆಲ್​ ಚೀಫ್​ ಅಮಿತ್ ಮಾಳವಿಯಾ ಕೂಡ ಈ ಬಂಧನ ಖಂಡಿಸಿ ಟ್ವೀಟ್ ಮಾಡಿದ್ದಾರೆ.

ಅರೆಸ್ಟ್ ಮಾಡಿದ್ದನ್ನು ಸಮರ್ಥಿಸಿಕೊಂಡ ಪೊಲೀಸರು

ಇದೆಲ್ಲದರ ಮಧ್ಯೆ ಬಗ್ಗಾರನ್ನು ಬಂಧಿಸಿದ ತಮ್ಮ ಕ್ರಮವನ್ನು ಪಂಜಾಬ್​ ಪೊಲೀಸರು ಸಮರ್ಥನೆ ಮಾಡಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗುವಂತೆ ಐದು ಬಾರಿ ಬಗ್ಗಾರಿಗೆ ನೋಟಿಸ್​ ನೀಡಿದ್ದೆವು. ಆದರೆ ಅವರು ಬರಲಿಲ್ಲ. ಹಾಗಾಗಿ ಅರೆಸ್ಟ್ ಮಾಡಬೇಕಾಯಿತು ಎಂದಿದ್ದಾರೆ.  ಬಗ್ಗಾರನ್ನು ಶೀಘ್ರವೇ ಪಂಜಾಬ್​ ಕೋರ್ಟ್​ಗೆ ಹಾಜರುಪಡಿಸಲಾಗುವುದು ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ಯೂನಿಫಾರ್ಮ್ ಹಾಕಿ ಕಳ್ಳರನ್ನು ಹಿಡಿಯುತ್ತಿದ್ದವರು ಈಗ ಸಮವಸ್ತ್ರ ತೆಗೆದು ಲಾಕಪ್​ನಲ್ಲಿದ್ದಾರೆ, ಭ್ರಷ್ಟರಿಗೆ ಇದೇ ಗತಿ: ಆರಗ ಜ್ಞಾನೇಂದ್ರ

Published On - 1:01 pm, Fri, 6 May 22

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ