AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸೀದಿ ಮೇಲೆ ರಾಷ್ಟ್ರಧ್ವಜ ಹಾರಿಸಿದ ಬಿಜೆಪಿ ಮುಖಂಡನಿಗೆ ಬೆದರಿಕೆ; ವಿರೋಧಿಸುವವರು ದೇಶ ಬಿಡಲಿ ಎಂದ ಶಿಯಾ ವಕ್ಫ್​ ಮಾಜಿ ಮುಖ್ಯಸ್ಥ

ಅಶ್ಫಕ್​ ಆಗ್ರಾದ ಜಾಮಾ ಮಸೀದಿ ಮೇಲೆ ರಾಷ್ಟ್ರಧ್ವಜ ಹಾರಿಸಿದ್ದರು. ಹಾಗೇ ನಂತರ ರಾಷ್ಟ್ರಗೀತೆಯನ್ನೂ ಹಾಡಿದ್ದರು. ಆದರೆ ಇದನ್ನು ಮಸೀದಿ ಮೇಲೆ ಮಾಡಬಾರದಿತ್ತು ಎಂಬುದು ಸ್ಥಳೀಯರ ವಾದ.

ಮಸೀದಿ ಮೇಲೆ ರಾಷ್ಟ್ರಧ್ವಜ ಹಾರಿಸಿದ ಬಿಜೆಪಿ ಮುಖಂಡನಿಗೆ ಬೆದರಿಕೆ; ವಿರೋಧಿಸುವವರು ದೇಶ ಬಿಡಲಿ ಎಂದ ಶಿಯಾ ವಕ್ಫ್​ ಮಾಜಿ ಮುಖ್ಯಸ್ಥ
ಆಗ್ರಾದಲ್ಲಿ ಮಸೀದಿ ಮೇಲೆ ರಾಷ್ಟ್ರಧ್ವಜಾರೋಹಣ
TV9 Web
| Edited By: |

Updated on: Aug 16, 2021 | 5:20 PM

Share

ಆಗ್ರಾ: ಇಲ್ಲಿನ ಮಸೀದಿಯೊಂದರ ಮೇಲೆ ರಾಷ್ಟ್ರಧ್ವಜ ಹಾರಿಸಿ, ರಾಷ್ಟ್ರಗೀತೆ ಹಾಡಿದ ಬಿಜೆಪಿ ಮುಖಂಡನೊಬ್ಬರಿಗೆ ಈಗ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಘಟನೆಯಿಂದ ಅಲ್ಲಿ ವಿವಾದ ಸೃಷ್ಟಿಯಾಗಿದ್ದು, ಕಾಂಗ್ರೆಸ್​ನ ಇಬ್ಬರು ನಾಯಕರು ಬೆದರಿಕೆ ಒಡ್ಡಿದ್ದಾರೆ. ಉತ್ತರ ಪ್ರದೇಶ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಅಶ್ಫಕ್​ ಸೈಫಿ ಸ್ವಾತಂತ್ರ್ಯ ದಿನಾಚರಣೆಯಂದು ಮಸೀದಿಯ ಮೇಲೆ ರಾಷ್ಟ್ರಧ್ವಜ ಹಾರಿಸಿದ್ದರು. ಇದರಿಂದ ಸ್ಥಳೀಯರು ಆಕ್ರೋಶಗೊಂಡಿದ್ದಾರೆ. ಹೀಗೆ ಮಸೀದಿ ಮೇಲೆ ತ್ರಿವರ್ಣ ಧ್ವಜ ಹಾರಿಸಿದ್ದರಿಂದ, ದೇವರು ಕೋಪಗೊಳ್ಳುತ್ತಾನೆ ಎಂದು ಹೇಳುತ್ತಿದ್ದಾರೆ. ಅದರಲ್ಲೂ ಕಾಂಗ್ರೆಸ್​ನ ಸ್ಥಳೀಯ ಮುಖಂಡರಾದ ಹಾಜಿ ಜಮಿಲುದ್ದೀನ್​ ಮತ್ತು ಸಹರ್​ ಮುಫ್ತಿ ಎಂಬುವರು ಅಶ್ಫಕ್​​ಗೆ ಬೆದರಿಕೆಯನ್ನೂ ಹಾಕಿದ್ದಾರೆ.

ಅಶ್ಫಕ್​ ಆಗ್ರಾದ ಜಾಮಾ ಮಸೀದಿ ಮೇಲೆ ರಾಷ್ಟ್ರಧ್ವಜ ಹಾರಿಸಿದ್ದರು. ಹಾಗೇ ನಂತರ ರಾಷ್ಟ್ರಗೀತೆಯನ್ನೂ ಹಾಡಿದ್ದರು. ಆದರೆ ಇದನ್ನು ಮಸೀದಿ ಮೇಲೆ ಮಾಡಬಾರದಿತ್ತು. ನಿಷೇಧವಿದ್ದರೂ ರಾಷ್ಟ್ರಧ್ವಜ ಹಾರಿಸಿದ್ದು ದೇವರ ಕೋಪಕ್ಕೆ ಕಾರಣವಾಗುತ್ತದೆ ಎಂದು ಸ್ಥಳೀಯರೆಲ್ಲ ಹೇಳುತ್ತಿದ್ದಾರೆ. ಈ ಬಗ್ಗೆ ಮಾತನಾಡಿದ ಕಾಂಗ್ರೆಸ್​ ಮುಖಂಡ ಜಮಿಲುದ್ದೀನ್​, ಅಶ್ಫಕ್​ ನಡೆ ಖಂಡನೀಯ. ಅದರಲ್ಲೂ ನಮ್ಮ ಧಾರ್ಮಿಕ ಸ್ಥಳವನ್ನೂ ರಾಜಕೀಯಗೊಳಿಸಲು ಅವರು ಪ್ರಯತ್ನಿಸಿದರೆ ಖಂಡಿತ ಉತ್ತರ ಪ್ರದೇಶದ ಇಡೀ ಮುಸ್ಲಿಂ ಸಮುದಾಯ ಅಶ್ಫಕ್​ ಸೈಫಿ ವಿರುದ್ಧ ತಿರುಗಿಬೀಳಲಿದೆ ಎಂದು ಹೇಳಿದರು.

ಈ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ ಉತ್ತರಪ್ರದೇಶ ಶಿಯಾ ಸೆಂಟ್ರಲ್​ ವಕ್ಫ್​ ಬೋರ್ಡ್​​ನ ಮಾಜಿ ಮುಖ್ಯಸ್ಥ ವಾಸೀಮ್​ ರಿಝ್ವಿ, ನಮ್ಮ ದೇಶದ ತ್ರಿವರ್ಣ ಧ್ವಜಕ್ಕೆ ಅದರ ನೆಲದಲ್ಲೇ ಹಾರಾಡಲು ಅವಕಾಶ ಕೊಡದ ಮೂಲಭೂತವಾದಿಗಳು ಮತ್ತು ಧರ್ಮಗುರುಗಳು ಈ ದೇಶವನ್ನು ಬಿಟ್ಟು ಹೊರಡುವುದು ಒಳಿತು ಎಂದಿದ್ದಾರೆ. ಹೋಗುವಾಗ ಅವರ ಮಸೀದಿಯನ್ನೂ ತೆಗೆದುಕೊಂಡು ಹೋಗಲಿ ಎಂದೂ ತಿರುಗೇಟು ನೀಡಿದ್ದಾರೆ.

ಭಾರತಕ್ಕೆ ಸ್ವಾತಂತ್ರ್ಯ ಬಂದು 75ವರ್ಷಗಳಾದ ಹಿನ್ನೆಲೆಯಲ್ಲಿ ಈ ಬಾರಿ ಆಜಾದಿ ಕಾ ಅಮೃತ ಮಹೋತ್ಸವ್​ ಆಚರಣೆ ಮಾಡಲಾಗುತ್ತಿದೆ. ತನ್ನಿಮಿತ್ತ ದೇಶಾದ್ಯಂತ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಬಾರಿ ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಭಾರತದ 100ನೇ ಸ್ವಾತಂತ್ರ್ಯ ದಿನಾಚರಣೆ ಹೊತ್ತಿಗೆ ಆತ್ಮ ನಿರ್ಭರ ಭಾರತ ನಿರ್ಮಾಣವಾಗಿರಬೇಕು ಎಂದಿದ್ದಾರೆ.

ಇದನ್ನೂ ಓದಿ: ಸೈಫ್​ ಅಲಿ ಖಾನ್​ಗೆ 51ನೇ ಬರ್ತ್​ಡೇ; 6 ತಿಂಗಳ ಮಗನ ಫೋಟೋ ವೈರಲ್​

On This Day: 123 ವರ್ಷಗಳಲ್ಲಿ ಮೊದಲ ಬಾರಿಗೆ ವಿಶಿಷ್ಟ ರೀತಿಯಲ್ಲಿ ಕ್ರಿಕೆಟ್ ಆಡಲಾಯಿತು..!

Follow Us
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು