AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಇಂತಹ ದಾಳಿಗಳಿಗೆ ಜಗ್ಗುವುದಿಲ್ಲ: ಜೆ.ಪಿ.ನಡ್ಡಾ ವಾಹನದ ಮೇಲೆ ನಡೆದ ದಾಳಿ ಖಂಡಿಸಿದ ಅಮಿತ್ ಶಾ

ಇಂತಹ ದಾಳಿಗಳಿಗೆ ಬಿಜೆಪಿ ಜಗ್ಗುವುದಿಲ್ಲ. ನಾವು ನಮ್ಮ ಪಕ್ಷ ಸಂಘಟನೆಗಾಗಿ ಇನ್ನಷ್ಟು ಶ್ರಮಿಸುತ್ತೇವೆ ಎಂದು ಅಮಿತ್ ಶಾ ಟಿಎಂಸಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಇಂತಹ ದಾಳಿಗಳಿಗೆ ಜಗ್ಗುವುದಿಲ್ಲ: ಜೆ.ಪಿ.ನಡ್ಡಾ ವಾಹನದ ಮೇಲೆ ನಡೆದ ದಾಳಿ ಖಂಡಿಸಿದ ಅಮಿತ್ ಶಾ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಮಿತ್ ಶಾ
TV9 Web
| Edited By: |

Updated on:Apr 06, 2022 | 11:25 PM

Share

ಕೋಲ್ಕತ್ತಾ: ಪಶ್ಚಿಮ ಬಂಗಾಳ ಭೇಟಿಯ ವೇಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ವಾಹನದ ಮೇಲೆ ನಡೆದ ದಾಳಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಖಂಡಿಸಿದ್ದಾರೆ. ಇಂತಹ ದಾಳಿಗಳಿಗೆ ಬಿಜೆಪಿ ಜಗ್ಗುವುದಿಲ್ಲ. ನಾವು ನಮ್ಮ ಪಕ್ಷ ಸಂಘಟನೆಗಾಗಿ ಇನ್ನಷ್ಟು ಶ್ರಮಿಸುತ್ತೇವೆ ಎಂದು ಅಮಿತ್ ಶಾ ಟಿಎಂಸಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಎರಡು ದಿನಗಳ ಪಶ್ಚಿಮ ಬಂಗಾಳ ಪ್ರವಾಸದಲ್ಲಿರುವ ಅಮಿತ್ ಶಾ, ಇಂದು (ಭಾನುವಾರ) ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಹಿಂಸಾಚಾರವು ಅತಿಯಾಗಿದೆ. ಇದುವರೆಗೆ ಒಟ್ಟು 300ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರನ್ನು ಪಶ್ಚಿಮ ಬಂಗಾಳದಲ್ಲಿ ಕೊಲ್ಲಲಾಗಿದೆ. ಆ ಬಗ್ಗೆ ಯಾವುದೇ ತನಿಖೆ ಪೂರ್ಣಗೊಂಡಿಲ್ಲ ಎಂದು ಆರೋಪಿಸಿದ್ದಾರೆ. ಭಾರತದ ಒಕ್ಕೂಟಕ್ಕೆ ಧಕ್ಕೆ ಉಂಟಾಗುವಂಥ ಯಾವುದೇ ಕೆಲಸವನ್ನು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮಾಡಿಲ್ಲ ಎಂದು ಹೇಳಿದರು.

ಇದಕ್ಕೂ ಮೊದಲು ಬೋಲ್​ಪುರ್​ನಲ್ಲಿ ರೋಡ್ ಶೋ ನಡೆಸಿದ ಅಮಿತ್ ಶಾ, ಈ ರೋಡ್ ಶೋ, ಪಶ್ಚಿಮ ಬಂಗಾಳದ ಜನರಿಗೆ ಮಮತಾ ದೀದಿ ಮೇಲಿರುವ ಸಿಟ್ಟನ್ನು ತೋರಿಸುತ್ತಿದೆ. ಇಷ್ಟು ಸಂಖ್ಯೆಯ ಜನರು ಸೇರಿದ ರೋಡ್ ಶೋ, ನಾನು ಇದುವರೆಗೂ ನೋಡಿಲ್ಲ. ಬಂಗಾಳದ ಜನರು ನರೇಂದ್ರ ಮೋದಿ ಮೇಲಿಟ್ಟಿರುವ ಪ್ರೀತಿ ಮತ್ತು ನಂಬಿಕೆ ಈ ರೋಡ್ ಶೋ ಮೂಲಕ ಪ್ರತಿಫಲಿಸಿದೆ. ಬಂಗಾಳದ ಜನರಿಗೆ ಬದಲಾವಣೆ ಬೇಕಾಗಿದೆ ಎಂದು ಹೇಳಿದ್ದಾರೆ. ನರೇಂದ್ರ ಮೋದಿಗೆ ಒಂದು ಅವಕಾಶ ನೀಡಿ, ನಾವು ಬಂಗಾಳವನ್ನು ಬಂಗಾರದ ಬಂಗಾಳವನ್ನಾಗಿಸುತ್ತೇವೆ ಎಂದು ಜನರನ್ನು ಕೇಳಿಕೊಂಡಿದ್ದಾರೆ.

ಇಂದು ಎರಡನೇ ದಿನದ ಪ್ರವಾಸ ಕೈಗೊಂಡಿದ್ದ ಅಮಿತ್ ಶಾ, ಬೆಳಗ್ಗೆ ಶಾಂತಿನಿಕೇತನ, ರವೀಂದ್ರ ಭವನ, ವಿಶ್ವ ಭಾರತಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ್ದರು. ಮಧ್ಯಾಹ್ನ ಜಾನಪದ ಹಾಡುಗಾರರೊಬ್ಬರ ಮನೆಯಲ್ಲಿ ಭೊಜನ ಸ್ವೀಕರಿಸಿದ್ದರು. ಬಿಜೆಪಿ ನಾಯಕರಾದ ಮುಕುಲ್ ರಾಯ್, ದಿಲೀಪ್ ಘೋಶ್ ಹಾಗೂ ಇತರರು ಅಮಿತ್ ಶಾ ಜೊತೆಗಿದ್ದರು.

ಟಿಎಂಸಿ ಮುಳುಗುತ್ತಿರುವ ಹಡಗು, ಮಮತಾ ಬ್ಯಾನರ್ಜಿ ಯುಗ ಶೀಘ್ರವೇ ಅಂತ್ಯ: ಅಮಿತ್ ಶಾ

Published On - 8:11 pm, Sun, 20 December 20

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್