AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಇಂತಹ ದಾಳಿಗಳಿಗೆ ಜಗ್ಗುವುದಿಲ್ಲ: ಜೆ.ಪಿ.ನಡ್ಡಾ ವಾಹನದ ಮೇಲೆ ನಡೆದ ದಾಳಿ ಖಂಡಿಸಿದ ಅಮಿತ್ ಶಾ

ಇಂತಹ ದಾಳಿಗಳಿಗೆ ಬಿಜೆಪಿ ಜಗ್ಗುವುದಿಲ್ಲ. ನಾವು ನಮ್ಮ ಪಕ್ಷ ಸಂಘಟನೆಗಾಗಿ ಇನ್ನಷ್ಟು ಶ್ರಮಿಸುತ್ತೇವೆ ಎಂದು ಅಮಿತ್ ಶಾ ಟಿಎಂಸಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಇಂತಹ ದಾಳಿಗಳಿಗೆ ಜಗ್ಗುವುದಿಲ್ಲ: ಜೆ.ಪಿ.ನಡ್ಡಾ ವಾಹನದ ಮೇಲೆ ನಡೆದ ದಾಳಿ ಖಂಡಿಸಿದ ಅಮಿತ್ ಶಾ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಮಿತ್ ಶಾ
TV9 Web
| Edited By: |

Updated on:Apr 06, 2022 | 11:25 PM

Share

ಕೋಲ್ಕತ್ತಾ: ಪಶ್ಚಿಮ ಬಂಗಾಳ ಭೇಟಿಯ ವೇಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ವಾಹನದ ಮೇಲೆ ನಡೆದ ದಾಳಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಖಂಡಿಸಿದ್ದಾರೆ. ಇಂತಹ ದಾಳಿಗಳಿಗೆ ಬಿಜೆಪಿ ಜಗ್ಗುವುದಿಲ್ಲ. ನಾವು ನಮ್ಮ ಪಕ್ಷ ಸಂಘಟನೆಗಾಗಿ ಇನ್ನಷ್ಟು ಶ್ರಮಿಸುತ್ತೇವೆ ಎಂದು ಅಮಿತ್ ಶಾ ಟಿಎಂಸಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಎರಡು ದಿನಗಳ ಪಶ್ಚಿಮ ಬಂಗಾಳ ಪ್ರವಾಸದಲ್ಲಿರುವ ಅಮಿತ್ ಶಾ, ಇಂದು (ಭಾನುವಾರ) ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಹಿಂಸಾಚಾರವು ಅತಿಯಾಗಿದೆ. ಇದುವರೆಗೆ ಒಟ್ಟು 300ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರನ್ನು ಪಶ್ಚಿಮ ಬಂಗಾಳದಲ್ಲಿ ಕೊಲ್ಲಲಾಗಿದೆ. ಆ ಬಗ್ಗೆ ಯಾವುದೇ ತನಿಖೆ ಪೂರ್ಣಗೊಂಡಿಲ್ಲ ಎಂದು ಆರೋಪಿಸಿದ್ದಾರೆ. ಭಾರತದ ಒಕ್ಕೂಟಕ್ಕೆ ಧಕ್ಕೆ ಉಂಟಾಗುವಂಥ ಯಾವುದೇ ಕೆಲಸವನ್ನು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮಾಡಿಲ್ಲ ಎಂದು ಹೇಳಿದರು.

ಇದಕ್ಕೂ ಮೊದಲು ಬೋಲ್​ಪುರ್​ನಲ್ಲಿ ರೋಡ್ ಶೋ ನಡೆಸಿದ ಅಮಿತ್ ಶಾ, ಈ ರೋಡ್ ಶೋ, ಪಶ್ಚಿಮ ಬಂಗಾಳದ ಜನರಿಗೆ ಮಮತಾ ದೀದಿ ಮೇಲಿರುವ ಸಿಟ್ಟನ್ನು ತೋರಿಸುತ್ತಿದೆ. ಇಷ್ಟು ಸಂಖ್ಯೆಯ ಜನರು ಸೇರಿದ ರೋಡ್ ಶೋ, ನಾನು ಇದುವರೆಗೂ ನೋಡಿಲ್ಲ. ಬಂಗಾಳದ ಜನರು ನರೇಂದ್ರ ಮೋದಿ ಮೇಲಿಟ್ಟಿರುವ ಪ್ರೀತಿ ಮತ್ತು ನಂಬಿಕೆ ಈ ರೋಡ್ ಶೋ ಮೂಲಕ ಪ್ರತಿಫಲಿಸಿದೆ. ಬಂಗಾಳದ ಜನರಿಗೆ ಬದಲಾವಣೆ ಬೇಕಾಗಿದೆ ಎಂದು ಹೇಳಿದ್ದಾರೆ. ನರೇಂದ್ರ ಮೋದಿಗೆ ಒಂದು ಅವಕಾಶ ನೀಡಿ, ನಾವು ಬಂಗಾಳವನ್ನು ಬಂಗಾರದ ಬಂಗಾಳವನ್ನಾಗಿಸುತ್ತೇವೆ ಎಂದು ಜನರನ್ನು ಕೇಳಿಕೊಂಡಿದ್ದಾರೆ.

ಇಂದು ಎರಡನೇ ದಿನದ ಪ್ರವಾಸ ಕೈಗೊಂಡಿದ್ದ ಅಮಿತ್ ಶಾ, ಬೆಳಗ್ಗೆ ಶಾಂತಿನಿಕೇತನ, ರವೀಂದ್ರ ಭವನ, ವಿಶ್ವ ಭಾರತಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ್ದರು. ಮಧ್ಯಾಹ್ನ ಜಾನಪದ ಹಾಡುಗಾರರೊಬ್ಬರ ಮನೆಯಲ್ಲಿ ಭೊಜನ ಸ್ವೀಕರಿಸಿದ್ದರು. ಬಿಜೆಪಿ ನಾಯಕರಾದ ಮುಕುಲ್ ರಾಯ್, ದಿಲೀಪ್ ಘೋಶ್ ಹಾಗೂ ಇತರರು ಅಮಿತ್ ಶಾ ಜೊತೆಗಿದ್ದರು.

ಟಿಎಂಸಿ ಮುಳುಗುತ್ತಿರುವ ಹಡಗು, ಮಮತಾ ಬ್ಯಾನರ್ಜಿ ಯುಗ ಶೀಘ್ರವೇ ಅಂತ್ಯ: ಅಮಿತ್ ಶಾ

Published On - 8:11 pm, Sun, 20 December 20

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ