AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ ಪ್ರಣಾಳಿಕೆ ವಿರುದ್ಧ ಪೋಸ್ಟ್​, ಗೋವಾದಲ್ಲಿ ಭಿಕುಮಾತ್ರೆಯನ್ನು ಬಂಧಿಸಿದ ಬೆಂಗಳೂರಿನ ಸೈಬರ್​ ಕ್ರೈಂ ಪೊಲೀಸರು

ಕಾಂಗ್ರೆಸ್​ ಪ್ರಣಾಳಿಕೆ ವಿರುದ್ಧ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಭಿಕುಮಾತ್ರೆ ಎಂಬುವವರನ್ನು ಬೆಂಗಳೂರಿನ ಸೈಬರ್​ಕ್ರೈಂ ಪೊಲೀಸರು ಗೋವಾದಲ್ಲಿ ಭಿಕುಮಾತ್ರೆ ಎಂಬುವವರನ್ನು ಬಂಧಿಸಿದ್ದಾರೆ. ಇದೀಗ ಬಿಜೆಪಿ ನಾಯಕರು ಕಾಂಗ್ರೆಸ್​ ನಡೆಯ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿ ಭಿಕುಮಾತ್ರೆ ಪರವಾಗಿ ನಿಂತಿದ್ದಾರೆ.

ಕಾಂಗ್ರೆಸ್​ ಪ್ರಣಾಳಿಕೆ ವಿರುದ್ಧ ಪೋಸ್ಟ್​, ಗೋವಾದಲ್ಲಿ ಭಿಕುಮಾತ್ರೆಯನ್ನು ಬಂಧಿಸಿದ ಬೆಂಗಳೂರಿನ ಸೈಬರ್​ ಕ್ರೈಂ ಪೊಲೀಸರು
ಭಿಕುಮಾತ್ರೆ
ನಯನಾ ರಾಜೀವ್
|

Updated on:May 19, 2024 | 10:08 AM

Share

ಕಾಂಗ್ರೆಸ್ ಪ್ರಣಾಳಿಕೆ(Congress Manifesto) ವಿರುದ್ಧ ಸುಳ್ಳು ಹೇಳಿಕೆ ನೀಡಿದ ಆರೋಪದ ಮೇಲೆ ಗೋವಾದಲ್ಲಿ ಭಿಕುಮಾತ್ರೆ ಎಂಬ ವ್ಯಕ್ತಿಯೊಬ್ಬನನ್ನು ಬಂಧಿಸಿದ ಕೆಲವೇ ಗಂಟೆಗಳ ನಂತರ, ಬಿಜೆಪಿ ನಾಯಕರು ಕರ್ನಾಟಕ ಸರ್ಕಾರದ ವಿರುದ್ಧ ವಾಗ್ದಾಳಿ ಆರಂಭಿಸಿದ್ದಾರೆ. ಟ್ವೀಟ್ ಮಾಡಿದ ಆರೋಪದ ಮೇಲೆ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸರು ಗೋವಾ ಮೂಲದ ವ್ಯಕ್ತಿಯನ್ನು ಶನಿವಾರ ಬಂಧಿಸಿದ್ದಾರೆ .

ಎರಡು ಸಮುದಾಯಗಳ ನಡುವೆ ದ್ವೇಷ ಹುಟ್ಟುಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಯನ್ನು ತಿರುಚಿ ಪೋಸ್ಟ್​ ಮಾಡಲಾಗಿದೆ ಎನ್ನುವ ಆರೋಪ ಮಾಡಲಾಗಿದೆ.

ಭಿಕುಮಾತ್ರೆ ಖಾತೆಯ ಅಡಿಯಲ್ಲಿ, ಏಪ್ರಿಲ್ 22 ರಂದು ಟ್ವೀಟ್ ಮಾಡಿದ್ದರು. ಕಾಂಗ್ರೆಸ್​ ಮ್ಯಾನಿಫೆಸ್ಟೋದಲ್ಲಿ ಮುಸ್ಲಿಂ​ ಎಂಬುದನ್ನು ನಿರ್ದಿಷ್ಟವಾಗಿ ಉಲ್ಲೇಖಿಸಿಲ್ಲ, ಇದು ಎಸ್​ಸಿಇ/ಎಸ್​ಟಿಗಳನ್ನೂ ಒಳಗೊಂಡಿದೆ ಎಂದು ವಾದಿಸುತ್ತಿರುವವರ ಮುಖಕ್ಕೆ ಇದನ್ನು ಎಸೆಯಿರಿ ಎಂದು ವಿಡಿಯೋವೊಂದನ್ನು ಹಂಚಿಕೊಂಡಿದ್ದರು,  ಕಾಂಗ್ರೆಸ್​ ಹಿಂದೂಗಳ ಸಂಪತ್ತನ್ನು ಕಸಿದುಕೊಳ್ಳಲು ಬಯಸುತ್ತಿದೆ ಎಂದು ಟ್ವೀಟ್​ ಮಾಡಿ ಆಗಲೇ ಡಿಲೀಟ್​ ಕೂಡ ಮಾಡಿದ್ದರು.

ಬೆಂಗಳೂರಿನ ನಿವಾಸಿ ಮತ್ತು ಕಾಂಗ್ರೆಸ್ ಕಾರ್ಯಕರ್ತ ಜೆ ಸರವಣನ್ ಅವರು ಏಪ್ರಿಲ್ 29 ರಂದು ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಿದ್ದರು. ಸೈಬರ್ ಕ್ರೈಂ ಪೊಲೀಸರು ಎಕ್ಸ್ ಬಳಕೆದಾರರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 (ಎ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ 66 (ಸಿ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮತ್ತಷ್ಟು ಓದಿ: ಧರ್ಮಾಧಾರಿತ ಮತಯಾಚನೆ; ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕೇಸ್‌ ಬುಕ್

ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನನ್ನ ತಂದೆಯನ್ನು ಬೆಂಗಳೂರು ಪೊಲೀಸರು ಇದ್ದಕ್ಕಿದ್ದಂತೆ ಬಂಧಿಸಿ ಕರೆದೊಯ್ದಿದ್ದಾರೆ, ಅವರನ್ನು ಬಿಡುಗಡೆ ಮಾಡಿ ಎಂದು ಮಗ ನಾಗೇಶ್​ ನಾಯ್ಕ್​ ಟ್ವೀಟ್​ ಮಾಡಿದ್ದಾರೆ.

ಈ ಸುದ್ದಿ ಹೊರಬಿದ್ದ ಬೆನ್ನಲ್ಲೇ ಬಿಜೆಪಿ ಕರ್ನಾಟಕ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಬಿಜೆಪಿ ರಾಷ್ಟ್ರೀಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಎಕ್ಸ್‌ನಲ್ಲಿ, ಕರ್ನಾಟಕ ಪೊಲೀಸರು ಗೋವಾದಲ್ಲಿ ಭಿಕುಮಾತ್ರೆಯನ್ನು ಬಂಧಿಸಿದ್ದಾರೆ. ನಾವು ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದೇವೆ ಮತ್ತು ಅವರು ಎಲ್ಲಾ ಕಾನೂನು ಬೆಂಬಲವನ್ನು ನೀಡುತ್ತೇವೆ, ಕಾಂಗ್ರೆಸ್ ಅರಾಜಕತೆಯನ್ನು ಹೊರಹಾಕಿದೆ ಎಂದು ಬರೆದಿದ್ದಾರೆ.

ತೇಜಸ್ವಿ ಟ್ವೀಟ್​

ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಪೋಸ್ಟ್​ ಮಾಡಿ ಕರ್ನಾಟಕ ಕಾಂಗ್ರೆಸ್ ಸರ್ಕಾರದಿಂದ ಅಧಿಕಾರ ದುರ್ಬಳಕೆಯಾಗಿದೆ. ನಾವು ನ್ಯಾಯಾಲಯದ ಒಳಗೆ ಮತ್ತು ಹೊರಗೆ ಹೋರಾಡಲು ಸಿದ್ಧರಿದ್ದೇವೆ ಎಂದು ಬರೆದಿದ್ದಾರೆ.

ಸ್ಮೃತಿ ಇರಾನಿ ಟ್ವೀಟ್​

ತೇಜಸ್ವಿ ಸೂರ್ಯ ಬಳಿ ಮಾತನಾಡಿದ್ದೇವೆ, ನಿಮಗೆ ಎಲ್ಲಾ ಕಾನೂನು ಬೆಂಬಲವನ್ನು ನೀಡುವ ಭರವಸೆ ನೀಡುತ್ತೇವೆ ಎಂದು ಸ್ಮೃತಿ ಇರಾನಿ ಟ್ವೀಟ್​ ಮಾಡಿದ್ದಾರೆ. ಈ ವಿಚಾರವಾಗಿ ಭಿಕುಮಾತ್ರೆ ಪ್ರತಿಕ್ರಿಯೆ ನೀಡಿದ್ದು, ಸತ್ಯ ಹೇಳಿದ್ದಕ್ಕಾಗಿ ಕಾಂಗ್ರೆಸ್​ಗೆ ಕೋಪ ಬಂದಿದೆ, ಸತ್ಯಕ್ಕಾಗಿ ಹೋರಾಡಲು ನಾನು ಸಿದ್ಧನಿದ್ದೇನೆ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:04 am, Sun, 19 May 24

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?