AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಕುಡಿದ ಮತ್ತಿನಲ್ಲಿ ವಾಗ್ವಾದ, ಬಿಜೆಪಿ ನಾಯಕನ ಸಹೋದರನಿಗೆ ಗುಂಡಿಕ್ಕಿ ಹತ್ಯೆ

ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಬಿಜೆಪಿ ನಾಯಕನ ಸಹೋದರನಿಗೆ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಪೊಲೀಸರ ಪ್ರಕಾರ, ಘಟನೆ ನಡೆದ ಸಮಯದಲ್ಲಿ ಆರೋಪಿ ದೇವೇಂದ್ರ ಅಲಿಯಾಸ್ ಪ್ರಕಾಶ್ ಜೈಸ್ವಾಲ್ ಮದ್ಯಪಾನ ಮಾಡಿದ್ದ. ಪ್ರದೀಪ್ ಮೌರ್ಯ ಅವರ ಮೆಡಿಕಲ್ ಶಾಪ್ ಪಕ್ಕದಲ್ಲಿರುವ ಸಂತೋಷ್ ಮೌರ್ಯ ಅವರ ದಿನಸಿ ಅಂಗಡಿಯ ಬಳಿ ಆತ ನಿಂತು ಹೋಗಿ ಬರುವವರ ಬಳಿ ಎಲ್ಲಾ ಜಗಳ ಮಾಡುತ್ತಿದ್ದ. ಸಂತೋಷ್ ಮತ್ತು ಇತರರು ಅವನ ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿ ಆತನನ್ನು ಅಲ್ಲಿಂದ ಕಳುಹಿಸಲಾಯಿತು.

ಉತ್ತರ ಪ್ರದೇಶ: ಕುಡಿದ ಮತ್ತಿನಲ್ಲಿ ವಾಗ್ವಾದ, ಬಿಜೆಪಿ ನಾಯಕನ ಸಹೋದರನಿಗೆ ಗುಂಡಿಕ್ಕಿ ಹತ್ಯೆ
ಗುಂಡಿನ ದಾಳಿ
ನಯನಾ ರಾಜೀವ್
|

Updated on: Jul 06, 2025 | 8:15 AM

Share

ಚಂದೌಲಿ, ಜುಲೈ 06: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಬಿಜೆಪಿ ನಾಯಕನ ಸಹೋದರನಿಗೆ ಗುಂಡು ಹಾರಿಸಿ ಕೊಂದಿರುವ ಘಟನೆ ಉತ್ತರ ಪ್ರದೇಶದ ಚಂದೌಲಿಯಲ್ಲಿ ನಡೆದಿದೆ. ಸಂತೋಷ್ ಮೌರ್ಯ  ಮೃತರು. ಬಿಜೆಪಿಯ ಜಿಲ್ಲಾ ಉಪಾಧ್ಯಕ್ಷ ಪ್ರದೀಪ್ ಮೌರ್ಯ ಅವರ ಕಿರಿಯ ಸಹೋದರ ಎಂಬುದು ತಿಳಿದುಬಂದಿದ್ದು, ಶನಿವಾರ ಈ ಘಟನೆ ನಡೆದಿದೆ.

ಪೊಲೀಸರ ಪ್ರಕಾರ, ಘಟನೆ ನಡೆದ ಸಮಯದಲ್ಲಿ ಆರೋಪಿ ದೇವೇಂದ್ರ ಅಲಿಯಾಸ್ ಪ್ರಕಾಶ್ ಜೈಸ್ವಾಲ್ ಮದ್ಯಪಾನ ಮಾಡಿದ್ದ. ಪ್ರದೀಪ್ ಮೌರ್ಯ ಅವರ ಮೆಡಿಕಲ್ ಶಾಪ್ ಪಕ್ಕದಲ್ಲಿರುವ ಸಂತೋಷ್ ಮೌರ್ಯ ಅವರ ದಿನಸಿ ಅಂಗಡಿಯ ಬಳಿ ಆತ ನಿಂತು ಹೋಗಿ ಬರುವವರ ಬಳಿ ಎಲ್ಲಾ ಜಗಳ ಮಾಡುತ್ತಿದ್ದ. ಸಂತೋಷ್ ಮತ್ತು ಇತರರು ಅವನ ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿ ಆತನನ್ನು ಅಲ್ಲಿಂದ ಕಳುಹಿಸಲಾಯಿತು.

ಆದರೆ ಸ್ವಲ್ಪ ಸಮಯದ ಬಳಿಕ ದೇವೇಂದ್ರ ಡಬಲ್ ಬ್ಯಾರೇಜ್ ಗನ್​​ನೊಂದಿಗೆ ವಾಪಸ್ ಬಂದು ಗಲಾಟೆ ಮಾಡಲು ಶುರು ಮಾಡಿದ್ದ. ಸಂತೋಷ್ ಅಂಗಡಿಯಿಂದ ಹೊರಗೆ ಬಂದು ಸುಮ್ಮನಿರುವಂತೆ ಕೇಳಿದಾಗ ದೇವೇಂದ್ರ ಬಂದೂಕನ್ನು ಆತನ ಎದೆಗೆ ಇಟ್ಟು ಹತ್ತಿರದಿಂದಲೇ ಗುಂಡು ಹಾರಿಸಿದ್ದಾನೆ.

ಮತ್ತಷ್ಟು ಓದಿ: ಲೈವ್​ಸ್ಟ್ರೀಮ್ ಮಾಡುವಾಗಲೇ ಗುಂಡಿಕ್ಕಿ ಇನ್​ಫ್ಲುಯೆನ್ಸರ್ ಹತ್ಯೆ; ಶಾಕಿಂಗ್ ವಿಡಿಯೋ ವೈರಲ್

ಸಂತೋಷ್ ತಕ್ಷಣವೇ ಕುಸಿದುಬಿದ್ದಿದ್ದಾರೆ, ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದರು. ಘಟನೆಯ ನಂತರ, ಬಿಜೆಪಿ ಹಿರಿಯ ನಾಯಕರು ಮತ್ತು ಸ್ಥಳೀಯ ಶಾಸಕರು ಸ್ಥಳಕ್ಕೆ ಆಗಮಿಸಿದ್ದಾರೆ.

ಪೊಲೀಸರು ಕೂಡ ಕ್ಷಿಪ್ರವಾಗಿ ಕಾರ್ಯಾಚರಣೆ ನಡೆಸಿ ದೇವೇಂದ್ರ ಜೈಸ್ವಾಲ್ ಹಾಗೂ ಆತ ಅಪರಾಧಕ್ಕೆ ಬಳಸಿದ ಆಯುಧದೊಂದಿಗೆ ಬಂಧಿಸಿದ್ದಾರೆ. ಆತನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ  ದಿಗಂಬರ್ ಕುಶ್ವಾಹ ಅವರು ಎಫ್‌ಐಆರ್ ದಾಖಲಿಸಲಾಗಿದ್ದು, ಮುಂದಿನ ಕಾನೂನು ಕ್ರಮಗಳು ನಡೆಯುತ್ತಿವೆ ಎಂದು ದೃಢಪಡಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ