AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಕುಡಿದ ಮತ್ತಿನಲ್ಲಿ ವಾಗ್ವಾದ, ಬಿಜೆಪಿ ನಾಯಕನ ಸಹೋದರನಿಗೆ ಗುಂಡಿಕ್ಕಿ ಹತ್ಯೆ

ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಬಿಜೆಪಿ ನಾಯಕನ ಸಹೋದರನಿಗೆ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಪೊಲೀಸರ ಪ್ರಕಾರ, ಘಟನೆ ನಡೆದ ಸಮಯದಲ್ಲಿ ಆರೋಪಿ ದೇವೇಂದ್ರ ಅಲಿಯಾಸ್ ಪ್ರಕಾಶ್ ಜೈಸ್ವಾಲ್ ಮದ್ಯಪಾನ ಮಾಡಿದ್ದ. ಪ್ರದೀಪ್ ಮೌರ್ಯ ಅವರ ಮೆಡಿಕಲ್ ಶಾಪ್ ಪಕ್ಕದಲ್ಲಿರುವ ಸಂತೋಷ್ ಮೌರ್ಯ ಅವರ ದಿನಸಿ ಅಂಗಡಿಯ ಬಳಿ ಆತ ನಿಂತು ಹೋಗಿ ಬರುವವರ ಬಳಿ ಎಲ್ಲಾ ಜಗಳ ಮಾಡುತ್ತಿದ್ದ. ಸಂತೋಷ್ ಮತ್ತು ಇತರರು ಅವನ ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿ ಆತನನ್ನು ಅಲ್ಲಿಂದ ಕಳುಹಿಸಲಾಯಿತು.

ಉತ್ತರ ಪ್ರದೇಶ: ಕುಡಿದ ಮತ್ತಿನಲ್ಲಿ ವಾಗ್ವಾದ, ಬಿಜೆಪಿ ನಾಯಕನ ಸಹೋದರನಿಗೆ ಗುಂಡಿಕ್ಕಿ ಹತ್ಯೆ
ಗುಂಡಿನ ದಾಳಿ
ನಯನಾ ರಾಜೀವ್
|

Updated on: Jul 06, 2025 | 8:15 AM

Share

ಚಂದೌಲಿ, ಜುಲೈ 06: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಬಿಜೆಪಿ ನಾಯಕನ ಸಹೋದರನಿಗೆ ಗುಂಡು ಹಾರಿಸಿ ಕೊಂದಿರುವ ಘಟನೆ ಉತ್ತರ ಪ್ರದೇಶದ ಚಂದೌಲಿಯಲ್ಲಿ ನಡೆದಿದೆ. ಸಂತೋಷ್ ಮೌರ್ಯ  ಮೃತರು. ಬಿಜೆಪಿಯ ಜಿಲ್ಲಾ ಉಪಾಧ್ಯಕ್ಷ ಪ್ರದೀಪ್ ಮೌರ್ಯ ಅವರ ಕಿರಿಯ ಸಹೋದರ ಎಂಬುದು ತಿಳಿದುಬಂದಿದ್ದು, ಶನಿವಾರ ಈ ಘಟನೆ ನಡೆದಿದೆ.

ಪೊಲೀಸರ ಪ್ರಕಾರ, ಘಟನೆ ನಡೆದ ಸಮಯದಲ್ಲಿ ಆರೋಪಿ ದೇವೇಂದ್ರ ಅಲಿಯಾಸ್ ಪ್ರಕಾಶ್ ಜೈಸ್ವಾಲ್ ಮದ್ಯಪಾನ ಮಾಡಿದ್ದ. ಪ್ರದೀಪ್ ಮೌರ್ಯ ಅವರ ಮೆಡಿಕಲ್ ಶಾಪ್ ಪಕ್ಕದಲ್ಲಿರುವ ಸಂತೋಷ್ ಮೌರ್ಯ ಅವರ ದಿನಸಿ ಅಂಗಡಿಯ ಬಳಿ ಆತ ನಿಂತು ಹೋಗಿ ಬರುವವರ ಬಳಿ ಎಲ್ಲಾ ಜಗಳ ಮಾಡುತ್ತಿದ್ದ. ಸಂತೋಷ್ ಮತ್ತು ಇತರರು ಅವನ ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿ ಆತನನ್ನು ಅಲ್ಲಿಂದ ಕಳುಹಿಸಲಾಯಿತು.

ಆದರೆ ಸ್ವಲ್ಪ ಸಮಯದ ಬಳಿಕ ದೇವೇಂದ್ರ ಡಬಲ್ ಬ್ಯಾರೇಜ್ ಗನ್​​ನೊಂದಿಗೆ ವಾಪಸ್ ಬಂದು ಗಲಾಟೆ ಮಾಡಲು ಶುರು ಮಾಡಿದ್ದ. ಸಂತೋಷ್ ಅಂಗಡಿಯಿಂದ ಹೊರಗೆ ಬಂದು ಸುಮ್ಮನಿರುವಂತೆ ಕೇಳಿದಾಗ ದೇವೇಂದ್ರ ಬಂದೂಕನ್ನು ಆತನ ಎದೆಗೆ ಇಟ್ಟು ಹತ್ತಿರದಿಂದಲೇ ಗುಂಡು ಹಾರಿಸಿದ್ದಾನೆ.

ಮತ್ತಷ್ಟು ಓದಿ: ಲೈವ್​ಸ್ಟ್ರೀಮ್ ಮಾಡುವಾಗಲೇ ಗುಂಡಿಕ್ಕಿ ಇನ್​ಫ್ಲುಯೆನ್ಸರ್ ಹತ್ಯೆ; ಶಾಕಿಂಗ್ ವಿಡಿಯೋ ವೈರಲ್

ಸಂತೋಷ್ ತಕ್ಷಣವೇ ಕುಸಿದುಬಿದ್ದಿದ್ದಾರೆ, ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದರು. ಘಟನೆಯ ನಂತರ, ಬಿಜೆಪಿ ಹಿರಿಯ ನಾಯಕರು ಮತ್ತು ಸ್ಥಳೀಯ ಶಾಸಕರು ಸ್ಥಳಕ್ಕೆ ಆಗಮಿಸಿದ್ದಾರೆ.

ಪೊಲೀಸರು ಕೂಡ ಕ್ಷಿಪ್ರವಾಗಿ ಕಾರ್ಯಾಚರಣೆ ನಡೆಸಿ ದೇವೇಂದ್ರ ಜೈಸ್ವಾಲ್ ಹಾಗೂ ಆತ ಅಪರಾಧಕ್ಕೆ ಬಳಸಿದ ಆಯುಧದೊಂದಿಗೆ ಬಂಧಿಸಿದ್ದಾರೆ. ಆತನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ  ದಿಗಂಬರ್ ಕುಶ್ವಾಹ ಅವರು ಎಫ್‌ಐಆರ್ ದಾಖಲಿಸಲಾಗಿದ್ದು, ಮುಂದಿನ ಕಾನೂನು ಕ್ರಮಗಳು ನಡೆಯುತ್ತಿವೆ ಎಂದು ದೃಢಪಡಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ