AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ನಾಯಕರು ಶ್ರೀರಾಮ ಮಂದಿರದ ಹೆಸರಲ್ಲಿ ಹಣ ಸಂಗ್ರಹಿಸಿ, ಮದ್ಯ ಕುಡಿಯುತ್ತಿದ್ದಾರೆ: ಕಾಂಗ್ರೆಸ್ ಶಾಸಕನಿಂದ ಆರೋಪ

ಮಧ್ಯಪ್ರದೇಶ ಸಚಿವ ವಿಶ್ವಾಸ್​ ಸಾರಂಗ್​ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್​ ಪಕ್ಷ ಯಾವತ್ತೂ ಶ್ರೀರಾಮನ ವಿರುದ್ಧವೇ ಮಾತನಾಡುತ್ತಿದೆ ಎಂದಿದ್ದಾರೆ.

ಬಿಜೆಪಿ ನಾಯಕರು ಶ್ರೀರಾಮ ಮಂದಿರದ ಹೆಸರಲ್ಲಿ ಹಣ ಸಂಗ್ರಹಿಸಿ, ಮದ್ಯ ಕುಡಿಯುತ್ತಿದ್ದಾರೆ: ಕಾಂಗ್ರೆಸ್ ಶಾಸಕನಿಂದ ಆರೋಪ
ಕಾಂತಿಲಾಲ್ ಭುರಿಯಾ
Lakshmi Hegde
| Edited By: |

Updated on: Feb 02, 2021 | 7:50 PM

Share

ಭೋಪಾಲ್​: ಬಿಜೆಪಿ ನಾಯಕರು ಅಯೋಧ್ಯೆ ಶ್ರೀರಾಮ ಮಂದಿರದ ಹೆಸರಲ್ಲಿ ದೇಣಿಗೆ ಸಂಗ್ರಹಿಸಿ, ಆ ಹಣದಲ್ಲಿ ಮದ್ಯ ಖರೀದಿ ಮಾಡಿ ಕುಡಿಯುತ್ತಿದ್ದಾರೆ ಎಂದು ಮಧ್ಯಪ್ರದೇಶದ ಜಬುವಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ಕಾಂತಿಲಾಲ್ ಭುರಿಯಾ ಆರೋಪಿಸಿದ್ದಾರೆ. ಈ ಮೂಲಕ ದೊಡ್ಡದಾದ ವಿವಾದವನ್ನು ಸೃಷ್ಟಿಸಿದ್ದಾರೆ.

ಬಿಜೆಪಿ ನಾಯಕರು ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ 2020ರಿಂದಲೂ ಕೋಟಿ ಕೋಟಿ ರೂಪಾಯಿ ಸಂಗ್ರಹ ಮಾಡಿದ್ದಾರೆ. ಆ ಹಣವೆಲ್ಲ ಎಲ್ಲಿ ಹೋಯಿತು? ಈ ನಾಯಕರು ಬೇರೇನೂ ಮಾಡುತ್ತಿಲ್ಲ. ಬೆಳಗ್ಗೆಯೆಲ್ಲ ಹಣ ಸಂಗ್ರಹ ಮಾಡಿ, ಅಂದೇ ರಾತ್ರಿ ಮದ್ಯ ಸೇವನೆ ಮಾಡುತ್ತಿದ್ದಾರೆ. ಈ ಮೂಲಕ ಹಣವನ್ನು ಹಾಳು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ರಾಷ್ಟ್ರಾದ್ಯಂತ ಸುತ್ತುವರಿದು ಶ್ರೀರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ಮಾಡುವ ಜವಾಬ್ದಾರಿಯನ್ನು ಆರ್​ಎಸ್​ಎಸ್​, ವಿಶ್ವ ಹಿಂದೂ ಪರಿಷತ್​ ಸೇರಿ ಹಲವು ವಿಶ್ವಾಸಾರ್ಹ ಸಂಘಟನೆಗಳಿಗೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​ ವಹಿಸಿದೆ. ಇದೀಗ ಇವರ ಕೆಲಸದ ಬಗ್ಗೆ ಕಾಂಗ್ರೆಸ್ ಎಂಎಲ್ಎ ಅನುಮಾನ ವ್ಯಕ್ತಪಡಿಸಿದ್ದಾರೆ. ಎಲ್ಲವನ್ನೂ ಮದ್ಯಕ್ಕಾಗಿಯೇ ಖಾಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ನು ಭುರಿಯಾ ಹೇಳಿಕೆಗೆ, ಮಧ್ಯಪ್ರದೇಶ ಸಚಿವ ವಿಶ್ವಾಸ್​ ಸಾರಂಗ್​ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್​ ಪಕ್ಷ ಯಾವತ್ತೂ ಶ್ರೀರಾಮನ ವಿರುದ್ಧವೇ ಮಾತನಾಡುತ್ತಿದೆ ಎಂದಿದ್ದಾರೆ. ಅಂದು ಸಂಗ್ರಹ ಮಾಡಿದ ಹಣವೆಲ್ಲ ಅಂದೇ ಶ್ರೀರಾಮ ಮಂದಿರದ ಬ್ಯಾಂಕ್​ ಅಕೌಂಟ್​ಗೆ ಹೋಗುತ್ತಿದೆ ಎಂದು ಮಧ್ಯಂತರ ಸ್ಪೀಕರ್​ ರಾಮೇಶ್ವರ್​ ಶರ್ಮಾ ಸ್ಪಷ್ಟನೆ ನೀಡಿದ್ದಾರೆ.

ACB Raid ಟಿಪಿಒ ಜಯರಾಜ್ ಮನೆಯಲ್ಲಿ ಭಾರೀ ಆಸ್ತಿ ಪತ್ತೆ, ಕೇರಳದಲ್ಲಿರುವ ಪತ್ನಿಯ ಕ್ವಾರ್ಟರ್ಸ್‌ ಮೇಲೂ ದಾಳಿ

Follow Us
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು
ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ
ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ
ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ
ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ