AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2ನೇ ಬಾರಿಗೆ ಮುಖ್ಯಮಂತ್ರಿ: ಪ್ರಮಾಣ ವಚನಕ್ಕೆ ಖಟ್ಟರ್ ಸಿದ್ಧತೆ

ಚಂಡೀಗಢ: ಮನೋಹರ ಲಾಲ್ ಖಟ್ಟರ್ ಅವರು ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಮರುಆಯ್ಕೆಯಾಗಿದ್ದು, ಹರಿಯಾಣ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲು ಸಿದ್ಧತೆ ನಡೆಸಿದ್ದಾರೆ. ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿರುವ ಖಟ್ಟರ್​ಗೆ ದುಷ್ಯಂತ್ ಚೌಟಾಲ ಸಾಥ್ ನೀಡಿದ್ದಾರೆ. ನಾಳೆ ಮಧ್ಯಾಹ್ನ 1.15ಕ್ಕೆ ಸಿಎಂ ಆಗಿ ಖಟ್ಟರ್​ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಿಜೆಪಿ ಕಳೆದ ಬಾರಿಗಿಂತ 7 ಸೀಟು ಕಡಿಮೆ ಗಳಿಸಿದ್ದು, ಸರಳ ಬಹುಮತಕ್ಕಿಂತ 6 ಸೀಟು ಕಡಿಮೆಯಾಗಿದೆ. ಈ ಮಧ್ಯೆ, ಜನನನಾಯಕ್ ಜನತಾ ಪಾರ್ಟಿ 10 ಸ್ಥಾನ […]

2ನೇ ಬಾರಿಗೆ ಮುಖ್ಯಮಂತ್ರಿ: ಪ್ರಮಾಣ ವಚನಕ್ಕೆ ಖಟ್ಟರ್ ಸಿದ್ಧತೆ
ಸಾಧು ಶ್ರೀನಾಥ್​
|

Updated on:Oct 26, 2019 | 4:50 PM

Share

ಚಂಡೀಗಢ: ಮನೋಹರ ಲಾಲ್ ಖಟ್ಟರ್ ಅವರು ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಮರುಆಯ್ಕೆಯಾಗಿದ್ದು, ಹರಿಯಾಣ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲು ಸಿದ್ಧತೆ ನಡೆಸಿದ್ದಾರೆ. ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿರುವ ಖಟ್ಟರ್​ಗೆ ದುಷ್ಯಂತ್ ಚೌಟಾಲ ಸಾಥ್ ನೀಡಿದ್ದಾರೆ.

ನಾಳೆ ಮಧ್ಯಾಹ್ನ 1.15ಕ್ಕೆ ಸಿಎಂ ಆಗಿ ಖಟ್ಟರ್​ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಿಜೆಪಿ ಕಳೆದ ಬಾರಿಗಿಂತ 7 ಸೀಟು ಕಡಿಮೆ ಗಳಿಸಿದ್ದು, ಸರಳ ಬಹುಮತಕ್ಕಿಂತ 6 ಸೀಟು ಕಡಿಮೆಯಾಗಿದೆ. ಈ ಮಧ್ಯೆ, ಜನನನಾಯಕ್ ಜನತಾ ಪಾರ್ಟಿ 10 ಸ್ಥಾನ ಗಳಿಸಿದ್ದು, ಬಿಜೆಪಿಗೆ ಬೆಂಬಲ ಘೋಷಿಸಿದೆ. ದುಷ್ಯಂತ್ ಚೌಟಾಲ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಹರಿಯಾಣದಲ್ಲಿ ಸ್ಥಿರತೆಯನ್ನು ಗಟ್ಟಿಗೊಳಿಸಲು ಬಿಜೆಪಿಗೆ ಬೆಂಬಲ ಘೋಷಿಸಿರುವುದಾಗಿ ದುಷ್ಯಂತ್ ಚೌಟಾಲ ತಿಳಿಸಿದ್ದಾರೆ. ದುಷ್ಯಂತ್, ದಿವಂಗತ ಮಾಜಿ ಪ್ರಧಾನಿ ಚೌಧರಿ ದೇವಿಲಾಲ್ ಅವರ ಮರಿಮೊಮ್ಮಗ.

ಹರಿಯಾಣ ಒಟ್ಟು 90 ಸ್ಥಾನ ಮ್ಯಾಜಿಕ್​ ನಂಬರ್ 46 ಬಿಜೆಪಿ 40 + ಜೆಜೆಪಿ 10 ಕಾಂಗ್ರೆಸ್ 41 ಇತರೆ 19

Published On - 4:40 pm, Sat, 26 October 19

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ