ಬಿಜೆಪಿ ಮಾಸ್ಟರ್​​ ಪ್ಲಾನ್: ಆಂಧ್ರದ ಪುರಂದೇಶ್ವರಿಗೆ ಲೋಕಸಭೆ ಸ್ಪೀಕರ್‌ ಹುದ್ದೆ? ಟಿಡಿಪಿಗೆ ತೃಪ್ತಿಯಾಗುವುದು ಖಂಡಿತ

ಬಿಜೆಪಿಗೆ ದೊಡ್ಡ ತಲೆನೋವಾಗಿದ್ದ , ಲೋಕಸಭೆ ಸ್ವೀಕರ್​​ ಹುದ್ದೆ, ಇದೀಗ ಬಿಜೆಪಿ ಕೈಯಲ್ಲಿಯೇ ಉಳಿಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇದಕ್ಕೆ ಬಿಜೆಪಿ ಮಾಸ್ಟರ್ ಪ್ಲಾನ್​​ ಮಾಡಿದೆ. ಇದರಿಂದ ಸ್ವೀಕರ್​​ ಹುದ್ದೆಗೆ ಬೇಡಿಕೆ ಇಟ್ಟಿದ್ದ ಟಿಡಿಪಿಗೆ ತೃಪ್ತಿಯಾಗುವುದು ಖಂಡಿತ, ಅಷ್ಟಕ್ಕೂ ಬಿಜೆಪಿ ಮಾಡಿದ ಪ್ಲಾನ್​​ ಏನು? ಇಲ್ಲಿದೆ ನೋಡಿ.

ಬಿಜೆಪಿ ಮಾಸ್ಟರ್​​ ಪ್ಲಾನ್: ಆಂಧ್ರದ ಪುರಂದೇಶ್ವರಿಗೆ ಲೋಕಸಭೆ ಸ್ಪೀಕರ್‌ ಹುದ್ದೆ? ಟಿಡಿಪಿಗೆ ತೃಪ್ತಿಯಾಗುವುದು ಖಂಡಿತ
ಪುರಂದರೇಶ್ವರಿ
Follow us
| Updated By: ನಯನಾ ರಾಜೀವ್

Updated on: Jun 11, 2024 | 10:17 AM

ನರೇಂದ್ರ ಮೋದಿ(Narendra Modi) ನೇತೃತ್ವದಲ್ಲಿ ಎನ್​​​ಡಿಎ(NDA) ಮೈತ್ರಿಕೂಟಗಳ ಬೆಂಬಲದ ಮೂಲಕ ಸರ್ಕಾರ ರಚನೆ ಮಾಡಲಾಗಿದೆ. ಜತೆಗೆ ಸಚಿವ ಸಂಪುಟ ರಚನೆಯಾಗಿ, ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಆದರೆ ಇದಕ್ಕೂ ಮುನ್ನ ಮೋದಿ ಸಂಪುಟದಲ್ಲಿ ಎನ್​​ಡಿಎ ಮೈತ್ರಿಕೂಟ ನಾಯಕರುಗಳಿಗೆ ಪ್ರಮುಖ ಸ್ಥಾನ ನೀಡುವ ಬಗ್ಗೆ ಚರ್ಚೆಗಳು ನಡೆದಿತ್ತು. ಅದರಲ್ಲಿ ಪ್ರಮುಖವಾಗಿ ಟಿಡಿಪಿ ಹಾಗೂ ಜೆಡಿಯು, ಇದೀಗ ಸಂಪುಟದಲ್ಲಿ ಎರಡು ಪಕ್ಷಕ್ಕೆ ತಲಾ 2-2 ಸ್ಥಾನಗಳನ್ನು ನೀಡಲಾಗಿದೆ. ಟಿಡಿಪಿ ಮಾತ್ರ ಸಚಿವ ಸ್ಥಾನದ ಜತೆಗೆ ಸ್ವೀಕರ್​​​ ಸ್ಥಾನವು ನಮ್ಮ ರಾಜ್ಯಕ್ಕೆ ಬೇಕು ಎಂಬ ಬೇಡಿಕೆಯನ್ನು ಇಟ್ಟಿತ್ತು. ಆದರೆ ಇದೀಗ ಬಿಜೆಪಿ ಮಾಸ್ಟರ್​​​ ಪ್ಲಾನ್​​​​ ಮಾಡಿದೆ. ಒಂದೇ ಕಲ್ಲಿನಲ್ಲಿ ಎರಡು ಹಕ್ಕಿಯನ್ನು ಹೊಡೆಯುವ ತಂತ್ರಗಾರಿಕೆಯನ್ನು ಮೋದಿ-ಶಾ ಮಾಡಿದ್ದಾರೆ.

ಒಂದು ಕಡೆ ಟಿಡಿಪಿ ಜತೆಗಿನ ಮೈತ್ರಿ, ಇನ್ನೊಂದು ಕಡೆ ಸ್ವೀಕರ್​​​ ಸ್ಥಾನ ಎರಡನ್ನು ಉಳಿಸಿಕೊಳ್ಳುವ ನೆಪದಲ್ಲಿ ಬಿಜೆಪಿ ಇದೀಗ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಿದೆ. ಬಿಜೆಪಿ ಸ್ವೀಕರ್​​​ ಸ್ಥಾನವನ್ನು ತನ್ನಲ್ಲಿ ಉಳಿಸಿಕೊಳ್ಳಲು ಕೌಟುಂಬಿಕ ಅಸ್ತ್ರವನ್ನು ಪ್ರಯೋಗಿಸಿದೆ. ಹೌದು ಲೋಕಸಭೆ ಸ್ವೀಕರ್​​​ ಆಗಿ ಆಂಧ್ರಪ್ರದೇಶದ ಬಿಜೆಪಿಯ ರಾಜ್ಯಾಧ್ಯಕ್ಷೆ ಡಿ.ಪುರಂದೇಶ್ವರಿಗೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಡಿ.ಪುರಂದೇಶ್ವರಿ ಹಾಲಿ ರಾಜಮಂಡಿ ಕ್ಷೇತ್ರದ ಸಂಸದೆ ಮತ್ತು ಆಂಧ್ರಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷೆ ಆಗಿದ್ದು, ಇವರನ್ನು ಲೋಕಸಭೆ ಸ್ವೀಕರ್​​ಮಾಡುವುದು ಬಿಜೆಪಿಗೆ ಈಗ ಅನಿವಾರ್ಯ ಆಗಿದೆ. ಈ ಮೂಲಕ ಟಿಡಿಪಿಯನ್ನು ಓಲೈಕೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿದೆ. ಹಾಗೂ ಟಿಡಿಪಿಯ ಅಸಮಾಧಾನಗೊಳ್ಳದಂತೆ ನೋಡಿಕೊಳ್ಳಲಿದೆ ಎಂದು ಹೇಳಲಾಗಿದೆ.

ಇಷ್ಟಕ್ಕೂ ಬಿಜೆಪಿ ಒಂದು ವೇಳೆ ಡಿ.ಪುರಂದೇಶ್ವರಿ ಅವರಿಗೆ ಲೋಕಸಭೆ ಸ್ವೀಕರ್​​ ಸ್ಥಾನ ನೀಡಿದರೆ ಟಿಡಿಪಿ ಯಾಕೆ? ಸಮಾಧಾನಗೊಳ್ಳುತ್ತದೆ ಎಂಬ ಪ್ರಶ್ನೆ ಮೂಡುವುದು ಖಂಡಿತ, ಅದಕ್ಕೆ ಇಲ್ಲಿದೆ ಉತ್ತರ, ಸ್ವೀಕರ್​​​ ಹುದ್ದೆಯನ್ನು ತನ್ನಲ್ಲಿ ಉಳಿಸಿಕೊಳ್ಳಲು ಬಿಜೆಪಿ ಕೌಟುಂಬಿಕ ಅಸ್ತ್ರವನ್ನು ಉಪಯೋಗಿಸಿದೆ ಎಂದು ಹೇಳಲಾಗಿದೆ, ಹೌದು ಪುರಂದೇಶ್ವರಿ ಟಿಡಿಪಿ ಸಂಸ್ಥಾಪಕ ಎನ್‌.ಟಿ.ರಾಮರಾವ್‌ ಅವರ ಪುತ್ರಿ. ಹಾಗೂ ಪುರಂದೇಶ್ವರಿ ಅವರ ಸೋದರಿಯನ್ನೇ ಚಂದ್ರಬಾಬು ನಾಯ್ಡು ಮದುವೆಯಾಗಿರುವುದು. ಈ ಕಾರಣಕ್ಕೆ ಒಂದು ವೇಳೆ ಪುರಂದೇಶ್ವರಿ ಅವರನ್ನು ಲೋಕಸಭೆ ಸ್ವೀಕರ್​​ ಆಗಿ ಬಿಜೆಪಿ ಆಯ್ಕೆ ಮಾಡಿದರೆ, ಟಿಡಿಪಿ ಇದಕ್ಕೆ ವಿರೋಧಿಸುವುದಿಲ್ಲ ಎಂದು ಹೇಳಲಾಗಿದೆ. ಆಗಾ ಬಿಜೆಪಿ ದಾರಿ ಸುಲಭ, ಸ್ವೀಕರ್​​​ ಸ್ಥಾನವು ತನ್ನಲ್ಲಿಯೇ ಉಳಿತ್ತದೆ, ಹಾಗೂ ಟಿಡಿಪಿ ಇದಕ್ಕೆ ವಿರೋಧಿಸುವುದಿಲ್ಲ.

ಆಂಧ್ರ ಪ್ರದೇಶದ ಬಿಜೆಪಿ ರಾಜ್ಯಾಧ್ಯಕ್ಷೆ ಪುರಂದೇಶ್ವರಿ ಈ ಬಾರಿಯ ಆಂಧ್ರ ವಿಧಾನಸಭೆ ಹಾಗೂ ಲೋಕಸಭೆಯಲ್ಲಿ ಟಿಡಿಪಿ ಹಾಗೂ ಜನಸೇನಾದ ಜತೆಗೆ ಯಶಸ್ವಿಯಾಗಿ ಮೈತ್ರಿ ಮಾಡಿಕೊಳ್ಳುವುದರ ಜತೆಗೆ, ಬಿಜೆಪಿಗೆ ವಿಧಾನಸಭೆಯಲ್ಲಿ 10 ಸ್ಥಾನದಲ್ಲಿ 8 ಸ್ಥಾನಗಳಲ್ಲಿ ಗೆಲುವು, ಹಾಗೂ ಲೋಕಸಭೆಯಲ್ಲಿ 6 ಸ್ಥಾನಗಳಲ್ಲಿ 3 ಸ್ಥಾನ ಪಡೆಯುವಲ್ಲಿ ಇವರು ದೊಡ್ಡ ಪಾತ್ರವಹಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು