AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಗೆ ಮೊದಲ ಮಹಿಳಾ ಅಧ್ಯಕ್ಷರ ಆಯ್ಕೆ ಸಾಧ್ಯತೆ; ಸಂಭಾವ್ಯ ಪಟ್ಟಿಯಲ್ಲಿದೆ ಈ 3 ಹೆಸರು

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷೆಯಾಗಿ ಯಾರು ಆಯ್ಕೆಯಾಗುತ್ತಾರೆ ಎಂಬುದು ಇನ್ನೂ ಸಸ್ಪೆನ್ಸ್ ಆಗಿಯೇ ಉಳಿದಿದ್ದರೂ, ಬಿಜೆಪಿಗೆ ಮೊದಲ ಮಹಿಳಾ ಅಧ್ಯಕ್ಷೆ ಆಯ್ಕೆಯಾಗಬಹುದು ಎಂದು ವಿವಿಧ ವರದಿಗಳು ಹೇಳಿವೆ. ಬಿಜೆಪಿ ರಾಷ್ಟ್ರಾಧ್ಯಕ್ಷರ ಹುದ್ದೆಯನ್ನು ಯಾರು ಅಲಂಕರಿಸುತ್ತಾರೆ ಎಂಬ ಕುತೂಹಲಕ್ಕೆ ಇನ್ನೂ ತೆರೆ ಬಿದ್ದಿಲ್ಲ. ಬಿಜೆಪಿ ತನ್ನ ಮುಂದಿನ ರಾಷ್ಟ್ರೀಯ ಅಧ್ಯಕ್ಷೆಯಾಗಿ ಮಹಿಳೆಯನ್ನು ನೇಮಿಸುವ ಸಾಧ್ಯತೆಯಿದೆ. ಬಿಜೆಪಿ ನಾಯಕರಾದ ನಿರ್ಮಲಾ ಸೀತಾರಾಮನ್, ಡಿ. ಪುರಂದೇಶ್ವರಿ ಮತ್ತು ವನತಿ ಶ್ರೀನಿವಾಸನ್ ಅವರಂತಹ ನಾಯಕರು ಈ ರೇಸ್​​ನಲ್ಲಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷರ ಆಯ್ಕೆಯಲ್ಲಿ ಆರ್‌ಎಸ್‌ಎಸ್ ಪಾತ್ರವೂ ಇರುತ್ತದೆ.

ಬಿಜೆಪಿಗೆ ಮೊದಲ ಮಹಿಳಾ ಅಧ್ಯಕ್ಷರ ಆಯ್ಕೆ ಸಾಧ್ಯತೆ; ಸಂಭಾವ್ಯ ಪಟ್ಟಿಯಲ್ಲಿದೆ ಈ 3 ಹೆಸರು
Nirmala Sitharaman, D Purandeswari, And Vanathi Srinivasan
ಸುಷ್ಮಾ ಚಕ್ರೆ
|

Updated on: Jul 04, 2025 | 8:14 PM

Share

ನವದೆಹಲಿ, ಜುಲೈ 4: ಬಿಜೆಪಿಯ ಹೊಸ ಮುಖ್ಯಸ್ಥರ ಆಯ್ಕೆಯ ಬಿಕ್ಕಟ್ಟಿನ ನಡುವೆ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಮುಂದಿನ ರಾಷ್ಟ್ರೀಯ ಅಧ್ಯಕ್ಷೆಯಾಗಿ ಮಹಿಳೆಯನ್ನು ನೇಮಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಭಾರತೀಯ ಜನತಾ ಪಕ್ಷ (BJP) ಪ್ರಮುಖ ಸಾಂಸ್ಥಿಕ ಪುನರ್ರಚನೆಗೆ ಒಳಗಾಗುತ್ತಿದೆ. 6 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸ್ಥಳೀಯ ಘಟಕಗಳಿಗೆ ಪಕ್ಷದ ಮುಖ್ಯಸ್ಥರನ್ನು ನೇಮಿಸಿದ ನಂತರ, ಬಿಜೆಪಿ ಈಗ ತನ್ನ ರಾಷ್ಟ್ರೀಯ ಅಧ್ಯಕ್ಷರನ್ನು ನೇಮಿಸುವತ್ತ ಗಮನ ಹರಿಸುತ್ತಿದೆ. ಜೆ.ಪಿ ನಡ್ಡಾ (JP Nadda) 2020ರಿಂದ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಅವರ ಅವಧಿ 2023ರಲ್ಲಿ ಕೊನೆಗೊಂಡಿತು. ಆದರೆ ಲೋಕಸಭಾ ಚುನಾವಣೆಯ ಮೂಲಕ ಪಕ್ಷವನ್ನು ಮುನ್ನಡೆಸಲು ಬಿಜೆಪಿ ಆ ಅಧಿಕಾರಾವಧಿಯನ್ನು 2024ರವರೆಗೆ ವಿಸ್ತರಿಸಿತು.

ಮುಂದೆ ಬಿಜೆಪಿ ರಾಷ್ಟ್ರಾಧ್ಯಕ್ಷ ಹುದ್ದೆಯನ್ನು ಯಾರು ಅಲಂಕರಿಸುತ್ತಾರೆ ಎಂಬುದರ ಕುರಿತು ಕುತೂಹಲ ಹಾಗೇ ಉಳಿದಿದ್ದರೂ, ಬಿಜೆಪಿ ತನ್ನ ಮೊದಲ ಮಹಿಳಾ ಅಧ್ಯಕ್ಷರನ್ನು ಪಡೆಯಬಹುದು ಎಂದು ಮೂಲಗಳು ತಿಳಿಸಿವೆ. ಪಕ್ಷದ ಹಿರಿಯ ನಾಯಕರು ಬಿಜೆಪಿಗೆ ಮಹಿಳಾ ಅಧ್ಯಕ್ಷರನ್ನು ನೇಮಕ ಮಾಡುವ ಬಗ್ಗೆ ಚರ್ಚೆಗಳನ್ನು ನಡೆಸುತ್ತಿದ್ದಾರೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಡಿ. ಪುರಂದೇಶ್ವರಿ ಮತ್ತು ವನತಿ ಶ್ರೀನಿವಾಸನ್ ಅವರಂತಹ ಮಹಿಳಾ ನಾಯಕರು ಈ ರೇಸ್​​ನಲ್ಲಿರುವ ಪ್ರಮುಖ ಸ್ಪರ್ಧಿಗಳಾಗಿದ್ದಾರೆ.

ಇದನ್ನೂ ಓದಿ: ಸಂವಿಧಾನದ ಮೂಲ ಆಶಯ ತಿರುಚಲು ಮುಂದಾಗಿದ್ದ ಇಂದಿರಾ ಗಾಂಧಿ: ಸಾಕ್ಷಿ ಸಮೇತ ತಿರುಗೇಟು ಕೊಟ್ಟ ಬಿಜೆಪಿ

ಮಹಿಳಾ ನಾಯಕತ್ವದ ಸಾಂಕೇತಿಕ ಮತ್ತು ಕಾರ್ಯತಂತ್ರದ ಅನುಕೂಲಗಳನ್ನು ಗುರುತಿಸಿ, ಬಿಜೆಪಿಯ ಉನ್ನತ ಹುದ್ದೆಗೆ ಮಹಿಳೆಯನ್ನು ನೇಮಿಸುವ ಕಲ್ಪನೆಯನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಅನುಮೋದಿಸಿದೆ ಎಂದು ಮೂಲಗಳು ಬಹಿರಂಗಪಡಿಸುತ್ತವೆ. ಮಹಾರಾಷ್ಟ್ರ, ಹರಿಯಾಣ ಮತ್ತು ದೆಹಲಿಯಂತಹ ರಾಜ್ಯಗಳಲ್ಲಿ ಬಿಜೆಪಿ ವಿಜಯಗಳನ್ನು ಖಚಿತಪಡಿಸಿಕೊಳ್ಳಲು ಮಹಿಳಾ ಮತದಾರರು ಪ್ರಮುಖ ಪಾತ್ರ ವಹಿಸಿದ್ದಾರೆ. ಹೀಗಾಗಿ, ಈ ಬಾರಿ ಬಿಜೆಪಿಯ ಇತಿಹಾಸದಲ್ಲಿ ಮೊದಲ ಬಾರಿಗೆ ಮಹಿಳೆಯನ್ನು ರಾಷ್ಟ್ರೀಯ ಅಧ್ಯಕ್ಷೆಯಾಗಿ ನೇಮಿಸುವ ಸಾಧ್ಯತೆಯಿದೆ.

ನಿರ್ಮಲಾ ಸೀತಾರಾಮನ್:

ಬಿಜೆಪಿ ರಾಷ್ಟ್ರಾಧ್ಯಕ್ಷ ಹುದ್ದೆಯ ರೇಸ್​​ನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೂಡ ಇದ್ದಾರೆ. ಅವರು ಇತ್ತೀಚೆಗೆ ಪಕ್ಷದ ಪ್ರಧಾನ ಕಚೇರಿಯಲ್ಲಿ ಪ್ರಸ್ತುತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷೆ ಜೆ.ಪಿ. ನಡ್ಡಾ ಮತ್ತು ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು. ಅವರ ಹೆಸರನ್ನು ಪ್ರಬಲ ಸ್ಪರ್ಧಿಯಾಗಿ ನೋಡಲಾಗುತ್ತಿದೆ. ಅವರ ವ್ಯಾಪಕ ಅನುಭವ ಮತ್ತು ನಾಯಕತ್ವದ ಸಾಮರ್ಥ್ಯದಿಂದಾಗಿ ಅವರೇ ಬಿಜೆಪಿ ಮುಖ್ಯಸ್ಥರಾಗುವ ಸಾಧ್ಯತೆ ಹೆಚ್ಚಾಗಿದೆ. ಅವರೇನಾದರೂ ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ನೇಮಕಗೊಂಡರೆ, ನಿರ್ಮಲಾ ಸೀತಾರಾಮನ್ ಅವರ ಉನ್ನತಿಯು ದಕ್ಷಿಣ ಭಾರತದಲ್ಲಿ ಬಿಜೆಪಿ ತನ್ನ ಹೆಜ್ಜೆಗುರುತನ್ನು ವಿಸ್ತರಿಸಲು ಸಹಾಯ ಮಾಡುತ್ತದೆ. ಸರ್ಕಾರದಲ್ಲಿ ಹಿರಿಯ ನಾಯಕಿಯಾಗಿರುವ ನಿರ್ಮಲಾ ಸೀತಾರಾಮನ್ ಈ ಹಿಂದೆ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ ಮತ್ತು ಪಕ್ಷದ ಸಂಘಟನೆಯಲ್ಲಿ ಆಳವಾದ ಬೇರುಗಳನ್ನು ಹೊಂದಿದ್ದಾರೆ.

ಡಿ. ಪುರಂದೇಶ್ವರಿ:

ಬಿಜೆಪಿ ರಾಷ್ಟ್ರಾಧ್ಯಕ್ಷರ ಸಂಭಾವ್ಯ ಪಟ್ಟಿಯಲ್ಲಿರುವ ಮತ್ತೊಂದು ಪ್ರಮುಖ ಹೆಸರು ಬಿಜೆಪಿಯ ಆಂಧ್ರಪ್ರದೇಶ ರಾಜ್ಯಾಧ್ಯಕ್ಷೆ ಡಿ. ಪುರಂದೇಶ್ವರಿ. ಬಹುಭಾಷಾ ನಾಯಕಿ ಪುರಂದೇಶ್ವರಿ ರಾಜಕೀಯ ವಲಯಗಳಲ್ಲಿ ವಿಶಿಷ್ಟ ವೃತ್ತಿಜೀವನವನ್ನು ಹೊಂದಿದ್ದಾರೆ. ಪುರಂದೇಶ್ವರಿ ಅವರನ್ನು ವಿವಿಧ ದೇಶಗಳಿಗೆ ಬಹುಪಕ್ಷಗಳ ನಿಯೋಗವಾದ “ಆಪರೇಷನ್ ಸಿಂಧೂರ್” ನಿಯೋಗಕ್ಕೆ ಆಯ್ಕೆ ಮಾಡಲಾಗಿತ್ತು. ಅವರು ಯುನೈಟೆಡ್ ಕಿಂಗ್‌ಡಮ್, ಫ್ರಾನ್ಸ್, ಜರ್ಮನಿ, ಯುರೋಪಿಯನ್ ಒಕ್ಕೂಟ, ಇಟಲಿ ಮತ್ತು ಡೆನ್ಮಾರ್ಕ್‌ನಲ್ಲಿ ದೇಶದ ಭಯೋತ್ಪಾದನಾ ವಿರೋಧಿ ನಿಲುವನ್ನು ಪ್ರತಿನಿಧಿಸುವ ಸರ್ಕಾರದ ಆಪರೇಷನ್ ಸಿಂಧೂರ್ ನಿಯೋಗದ ಭಾಗವಾಗಿದ್ದರು.

ವನತಿ ಶ್ರೀನಿವಾಸನ್:

ವನತಿ ಶ್ರೀನಿವಾಸನ್ ಅವರನ್ನು ಸಹ ಈ ಹುದ್ದೆಗೆ ಪರಿಗಣಿಸಲಾಗುತ್ತಿದೆ. ತಮಿಳುನಾಡಿನ ವಕೀಲೆ, ರಾಜಕಾರಣಿಯಾಗಿರುವ ಅವರು ಪ್ರಸ್ತುತ ರಾಜ್ಯ ವಿಧಾನಸಭೆಯಲ್ಲಿ ಕೊಯಮತ್ತೂರು ದಕ್ಷಿಣವನ್ನು ಪ್ರತಿನಿಧಿಸುತ್ತಿದ್ದಾರೆ. 1993ರಲ್ಲಿ ಬಿಜೆಪಿಗೆ ಸೇರಿದ ನಂತರ ವನತಿ ಅವರು ರಾಜ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ಮತ್ತು ತಮಿಳುನಾಡಿನ ಉಪಾಧ್ಯಕ್ಷೆ ಸೇರಿದಂತೆ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ. 2020ರಲ್ಲಿ ಪಕ್ಷವು ಅವರನ್ನು ಬಿಜೆಪಿ ಮಹಿಳಾ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಿಸಿತು. 2022ರಲ್ಲಿ ಅವರು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯ ಸದಸ್ಯರಾದರು. ವಿಶೇಷವಾಗಿ ಆ ಸ್ಥಾನದಲ್ಲಿದ್ದ ಮೊದಲ ತಮಿಳು ಮಹಿಳೆ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.

ಇದನ್ನೂ ಓದಿ: ಭಾರತವನ್ನು ಗಾಂಧಿ ಕುಟುಂಬ ರಷ್ಯಾಕ್ಕೆ ಮಾರಾಟ ಮಾಡಿತ್ತು; ಬಿಜೆಪಿ ಸಂಸದ ನಿಶಿಕಾಂತ್ ದುಬೆ ಗಂಭೀರ ಆರೋಪ

ಇತ್ತೀಚಿನ ದಿನಗಳಲ್ಲಿ ಬಿಜೆಪಿ ಮಹಿಳಾ ಮತದಾರರ ಮೇಲೆ ಪ್ರಭಾವ ಬೀರುವಲ್ಲಿ ಯಶಸ್ಸನ್ನು ಕಂಡಿದೆ. ಇದು ಈಗ ಮಹಿಳೆಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಹುದ್ದೆಗೆ ನೇಮಿಸುವ ಬಗ್ಗೆ ಯೋಚಿಸುತ್ತಿರುವುದಕ್ಕೆ ಒಂದು ಕಾರಣವಾಗಿರಬಹುದು ಎನ್ನಲಾಗಿದೆ. ಇದಲ್ಲದೆ, 2023ರಲ್ಲಿ ಬಿಜೆಪಿ ಮಂಡಿಸಿದ ಮಹಿಳಾ ಮೀಸಲಾತಿ ಮಸೂದೆಗೆ ಸಂಸತ್ತಿನ ಎರಡೂ ಸದನಗಳಲ್ಲಿ ಅನುಮೋದನೆ ಸಿಕ್ಕಿತು. ಈ ಮಸೂದೆಯು ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿಯನ್ನು ಕೋರುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ