Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಚುನಾವಣೆ, ರಾಮ ಮಂದಿರ, ಹೊಸ ಮತದಾರರ ಓಲೈಕೆ, ಬಿಜೆಪಿ ಪದಾಧಿಕಾರಿಗಳ ಸಭೆಯ ಪ್ರಮುಖಾಂಶಗಳು

ದೆಹಲಿಯಲ್ಲಿ ಎರಡು ದಿನಗಳ ಕಾಲ ಬಿಜೆಪಿ ಪದಾಧಿಕಾರಿಗಳ ಸಭೆ ನಡೆದಿದೆ. ಮುಂಬರುವ ಲೋಕಸಭೆ ಚುನಾವಣೆಗೂ ಮುನ್ನ ಸರ್ಕಾರ ಮಾಡಿರುವ ಕೆಲಸಗಳನ್ನು ಎತ್ತಿ ತೋರಿಸಬೇಕು ಮತ್ತು ಚುನಾವಣೆಯಲ್ಲಿ ಪಕ್ಷವನ್ನು ಭಾರಿ ಅಂತರದಿಂದ ಗೆಲ್ಲಿಸಬೇಕು ಎಂದು ಗೃಹ ಸಚಿವ ಅಮಿತ್ ಶಾ ಸಭೆಯಲ್ಲಿ ಹೇಳಿದ್ದಾರೆ. ನಮ್ಮ ಮುಂದೆ ನಿಲ್ಲುವ ಮೊದಲು ಪ್ರತಿಪಕ್ಷಗಳು 10 ಬಾರಿ ಯೋಚಿಸಬೇಕಾದಂತಹ ದೊಡ್ಡ ವಿಜಯವನ್ನು ನಾವು ಸಾಧಿಸಬೇಕಾಗಿದೆ ಎಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಲೋಕಸಭೆ ಚುನಾವಣೆ, ರಾಮ ಮಂದಿರ, ಹೊಸ ಮತದಾರರ ಓಲೈಕೆ, ಬಿಜೆಪಿ ಪದಾಧಿಕಾರಿಗಳ ಸಭೆಯ ಪ್ರಮುಖಾಂಶಗಳು
ಅಮಿತ್ ಶಾImage Credit source: ABP Live
Follow us
ನಯನಾ ರಾಜೀವ್
|

Updated on: Dec 24, 2023 | 7:45 AM

ದೆಹಲಿಯಲ್ಲಿ ಎರಡು ದಿನಗಳ ಕಾಲ ಬಿಜೆಪಿ ಪದಾಧಿಕಾರಿಗಳ ಸಭೆ ನಡೆದಿದೆ. ಮುಂಬರುವ ಲೋಕಸಭೆ ಚುನಾವಣೆ(Lok Sabha Election)ಗೂ ಮುನ್ನ ಸರ್ಕಾರ ಮಾಡಿರುವ ಕೆಲಸಗಳನ್ನು ಎತ್ತಿ ತೋರಿಸಬೇಕು ಮತ್ತು ಚುನಾವಣೆಯಲ್ಲಿ ಪಕ್ಷವನ್ನು ಭಾರಿ ಅಂತರದಿಂದ ಗೆಲ್ಲಿಸಬೇಕು ಎಂದು ಗೃಹ ಸಚಿವ ಅಮಿತ್ ಶಾ ಸಭೆಯಲ್ಲಿ ಹೇಳಿದ್ದಾರೆ. ನಮ್ಮ ಮುಂದೆ ನಿಲ್ಲುವ ಮೊದಲು ಪ್ರತಿಪಕ್ಷಗಳು 10 ಬಾರಿ ಯೋಚಿಸಬೇಕಾದಂತಹ ದೊಡ್ಡ ವಿಜಯವನ್ನು ನಾವು ಸಾಧಿಸಬೇಕಾಗಿದೆ ಎಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರದ ಉದ್ಘಾಟನೆಯ ಸಂದರ್ಭದಲ್ಲಿ ದೇಶಾದ್ಯಂತ ಪ್ರಾರ್ಥನೆ ಮತ್ತು ಇತರ ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸಲು ಸಾರ್ವಜನಿಕರನ್ನು ಪ್ರೋತ್ಸಾಹಿಸುವಂತೆ ಸಭೆಯಲ್ಲಿ ಶಾ ಅಧಿಕಾರಿಗಳಿಗೆ ಸೂಚಿಸಿದರು.

ಜನವರಿ 1ರಿಂದ ಬಿಜೆಪಿ ಕಾರ್ಯಕರ್ತರು ಮನೆ ಮನೆಗೆ ತೆರಳಿ ಅಕ್ಷತೆ ಹಂಚುವುದು, ದೇವಸ್ಥಾನಗಳಲ್ಲಿ ವಿಶೇಷ ಪ್ರಾರ್ಥನೆ, ದೀಪ ಹಚ್ಚುವುದು ಮುಂತಾದ ಕಾರ್ಯಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದಿದ್ದಾರೆ.

ಹೊಸ ಮತದಾರರನ್ನು ಸೆಳೆಯಲು ಪಕ್ಷ ದೇಶಾದ್ಯಂತ ದೊಡ್ಡ ಮಟ್ಟದ ಪ್ರಚಾರ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿಯು ದೇಶಾದ್ಯಂತ ಮಹಿಳೆಯರು, ಬಡವರು, ಯುವಕರು ಮತ್ತು ರೈತರನ್ನು ಬೆಂಬಲಿಸುವತ್ತ ಗಮನಹರಿಸಲಿದೆ ಮತ್ತು 2024 ರ ಲೋಕಸಭೆ ಚುನಾವಣೆಯವರೆಗೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಿದೆ.

ಭವ್ಯವಾದ ರಾಮಮಂದಿರ ನಿರ್ಮಾಣಕ್ಕೆ ಸರ್ಕಾರದ ಪ್ರಯತ್ನಗಳ ಬಗ್ಗೆ ಪಕ್ಷದ ಕಾರ್ಯಕರ್ತರ ಸಹಾಯದಿಂದ ಮಾಹಿತಿ ಪ್ರಸಾರ ಮಾಡಲು ಬಿಜೆಪಿ ನಾಯಕರಿಗೆ ಸೂಚಿಸಲಾಯಿತು.

ಮುಂಬರುವ ಚುನಾವಣೆಯಲ್ಲಿ ಶೇಕಡವಾರು ಮತಗಳಿಕೆಗೆ ಒತ್ತು ನೀಡುವಂತೆ ಸಭೆಯಲ್ಲಿ ಬಿಜೆಪಿ ಪದಾಧಿಕಾರಿಗಳಿಗೆ ಸೂಚಿಸಲಾಗಿದೆ. ಇದಕ್ಕಾಗಿ ಹೊಸ ಮತದಾರರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಲಾಗುವುದು.

ಜನವರಿ 24ರಿಂದ ಯುವಮೋರ್ಚಾ ವತಿಯಿಂದ ಹೊಸ ಮತದಾರರ ಸಮಾವೇಶಗಳನ್ನು ಆರಂಭಿಸಲಾಗುವುದು. ಇದರ ಅಡಿಯಲ್ಲಿ ದೇಶಾದ್ಯಂತ 5000 ಸಮ್ಮೇಳನಗಳನ್ನು ಆಯೋಜಿಸಲಾಗುವುದು. ಈ ಸಮಾವೇಶಗಳಲ್ಲಿ ಬಿಜೆಪಿಯ ಪ್ರಮುಖ ನಾಯಕರು ಕೂಡ ಭಾಗವಹಿಸಲಿದ್ದಾರೆ. ಯುವ ದಿನಾಚರಣೆಯಂದು (ಜನವರಿ 12) ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಮತದಾರರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಬಹುದು. ಯುವ ದಿನಾಚರಣೆಯ ಸಂದರ್ಭದಲ್ಲಿ ಹಲವು ಕಾರ್ಯಕ್ರಮಗಳನ್ನೂ ಆಯೋಜಿಸಬಹುದು ಎನ್ನಲಾಗಿದೆ.

ಮುಂದಿನ ದಿನಗಳಲ್ಲಿ ಮಹಿಳೆಯರು ಮತ್ತು ಫಲಾನುಭವಿಗಳ ಮೇಲೆ ಬಿಜೆಪಿ ವಿಶೇಷ ಗಮನ ಹರಿಸಲಿದೆ. ಈ ನಿಟ್ಟಿನಲ್ಲಿ ಬಿಜೆಪಿ ತನ್ನ ಎಲ್ಲಾ ರಂಗಗಳನ್ನು ಸಂಪೂರ್ಣವಾಗಿ ಬಳಸಿಕೊಳ್ಳಲಿದೆ. ಬಿಜೆಪಿ ತನ್ನ ಮಿತ್ರ ಪಕ್ಷಗಳ ಮೂಲಕ ಜನರನ್ನು ತಲುಪಲು ಪ್ರಯತ್ನಿಸಲಿದೆ.

ವಿಶೇಷವಾಗಿ ಮಹಿಳಾ ಮೋರ್ಚಾ, ಯುವಜನ ಮತ್ತು ಕಿಸಾನ್ ಮೋರ್ಚಾಗೆ ದೊಡ್ಡ ಜವಾಬ್ದಾರಿ ನೀಡಲಾಗುವುದು. ಇದರೊಂದಿಗೆ ದೇಶಾದ್ಯಂತ ಸಾಮಾಜಿಕ ಸಮಾವೇಶಗಳನ್ನೂ ಆಯೋಜಿಸಿ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಸೇರುವಂತೆ ಮನವಿ ಮಾಡಲಾಗುವುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್