AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೊಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೆಂದು ಬೀಜಿಂಗ್​ ಏರ್​ಪೋರ್ಟ್​ ಫೋಟೋ ಹಂಚಿಕೊಂಡ ಬಿಜೆಪಿ ನಾಯಕರು !; ಚೀನಾ ತಗಾದೆ

ಭಾರತ ಸರ್ಕಾರ ತಾನು ಮೂಲಸೌಕರ್ಯ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ತೋರಿಸಿಕೊಳ್ಳಲು ಬೀಜಿಂಗ್​ನ ಡ್ಯಾಕ್ಸಿಂಗ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಫೋಟೋವನ್ನು ತೋರಿಸಿಕೊಂಡಿದ್ದು ಶಾಕಿಂಗ್​ ಎಂದು ಶೇನ್​ ಶಿವೇಯಿ ಹೇಳಿದ್ದಾರೆ.

ನೊಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೆಂದು ಬೀಜಿಂಗ್​ ಏರ್​ಪೋರ್ಟ್​ ಫೋಟೋ ಹಂಚಿಕೊಂಡ ಬಿಜೆಪಿ ನಾಯಕರು !; ಚೀನಾ ತಗಾದೆ
ವಿವಾದಕ್ಕೆ ಕಾರಣವಾಗಿರುವ ಚಿತ್ರ
Follow us
TV9 Web
| Updated By: Lakshmi Hegde

Updated on:Nov 27, 2021 | 2:11 PM

ಉತ್ತರಪ್ರದೇಶದ ಜೇವಾರ್​​ನಲ್ಲಿ ನೊಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೊನ್ನೆ ತಾನೆ ಪ್ರಧಾನಮಂತ್ರಿ ನರೇಂದ್ರ ಮೋದಿ ಶಂಕು ಸ್ಥಾಪನೆ ನೆರವೇರಿಸಿದ್ದಾರೆ. ಅದರ ಬೆನ್ನಲ್ಲೇ ಕೇಂದ್ರ ಸಚಿವ ಅನುರಾಗ್ ಠಾಕೂರ್ ಸೇರಿ ಹಲವು ಕೇಂದ್ರ ಮಂತ್ರಿಗಳು, ಬಿಜೆಪಿ ಮುಖಂಡರು ತಮ್ಮ ಸೋಷಿಯಲ್​ ಮೀಡಿಯಾದಲ್ಲಿ ಒಂದು ವಿಡಿಯೋ ಶೇರ್​ ಮಾಡಿಕೊಂಡಿದ್ದಾರೆ. ಅದರಲ್ಲಿ ನೊಯ್ಡಾದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಧುನಿಕ ವ್ಯವಸ್ಥೆ ಮಾಡುವ ಬಗ್ಗೆ, ಅದರ ವಿಶೇಷತೆಗಳ ಬಗ್ಗೆ ವಿವರಿಸಲಾಗಿದೆ. ಹಾಗೇ ಕೆಲವು ಫೋಟೋಗಳನ್ನು ಬಳಸಲಾಗಿದೆ. ಆದರೆ ಈ ವಿಡಿಯೋ,  ನೋಡಿದ ಚೀನಾ ತಗಾದೆ ತೆಗೆದಿದೆ. ವಿಡಿಯೋದಲ್ಲಿ ನೊಯ್ಡಾ ವಿಮಾನ ನಿಲ್ದಾಣ ಎಂದು ಹೇಳಿ ಬಳಸಿಕೊಳ್ಳಲಾದ ಫೋಟೋ ಬೀಜಿಂಗ್​ನ ಡ್ಯಾಕ್ಸಿಂಗ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ್ದು ಎಂದು ಚೀನಾ ಸರ್ಕಾರದ ಮಾಧ್ಯಮ ಗ್ಲೋಬಲ್​ ಟೆಲಿವಿಷನ್​ ನೆಟ್ವರ್ಕ್​​ ಹೇಳಿದೆ.

ಈ ಬಗ್ಗೆ ಧ್ವನಿ ಎತ್ತಿದವರು ಗ್ಲೋಬಲ್​ ಟೆಲಿವಿಷನ್​ ನೆಟ್ವರ್ಕ್​​ನ ಪತ್ರಕರ್ತ ಶೇನ್​ ಶಿವೇಯಿ ಎಂಬುವರು. ಭಾರತ ಸರ್ಕಾರ ತಾನು ಮೂಲಸೌಕರ್ಯ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ತೋರಿಸಿಕೊಳ್ಳಲು ಬೀಜಿಂಗ್​ನ ಡ್ಯಾಕ್ಸಿಂಗ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಫೋಟೋವನ್ನು ತೋರಿಸಿಕೊಂಡಿದ್ದು ಶಾಕಿಂಗ್​ ಎಂದು ಬರೆದುಕೊಂಡಿದ್ದಾರೆ. ಹಾಗೇ, ಸೋಷಿಯಲ್ ಮೀಡಿಯಾದಲಲ್ಲಿ ಶೇರ್​ ಮಾಡಿಕೊಂಡಿರವು ಬಿಜೆಪಿ ನಾಯಕರ ಹೆಸರಿನ ಸಹಿತ ಅವರ ಪೋಸ್ಟ್​ಗಳ ಸ್ಕ್ರೀನ್​ಶಾಟ್​ ತೆಗೆದು ಎಲ್ಲವನ್ನೂ ಕೊಲ್ಯಾಜ್ ಮಾಡಿ ಶೇರ್ ಮಾಡಿದ್ದಾರೆ. ಹಾಗೇ, 2017ರಲ್ಲಿ ಗಾರ್ಡಿಯನ್​​ನಲ್ಲಿ ಪ್ರಕಟವಾಗಿದ್ದ ಬೀಜಿಂಗ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಚಿತ್ರವನ್ನೂ ಶೇರ್ ಮಾಡಿಕೊಂಡಿದ್ದಾರೆ.

ಅನುರಾಗ್ ಠಾಕೂರ್ ಶೇರ್​ ಮಾಡಿರುವ ವಿಡಿಯೋ

ಇದನ್ನೂ ಓದಿ: ಮೈಸೂರು: ಕೇರಳದಲ್ಲಿ ನೊರೊ ವೈರಸ್ ಪತ್ತೆ, ಕರ್ನಾಟಕದಲ್ಲಿ ಕಟ್ಟೆಚ್ಚರ; ಬಾವಲಿ ಗ್ರಾಮದಲ್ಲಿ ಮನೆಮನೆಗೆ ತೆರಳಿ ಸಮೀಕ್ಷೆ

Published On - 1:17 pm, Sat, 27 November 21

ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು