AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೊಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೆಂದು ಬೀಜಿಂಗ್​ ಏರ್​ಪೋರ್ಟ್​ ಫೋಟೋ ಹಂಚಿಕೊಂಡ ಬಿಜೆಪಿ ನಾಯಕರು !; ಚೀನಾ ತಗಾದೆ

ಭಾರತ ಸರ್ಕಾರ ತಾನು ಮೂಲಸೌಕರ್ಯ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ತೋರಿಸಿಕೊಳ್ಳಲು ಬೀಜಿಂಗ್​ನ ಡ್ಯಾಕ್ಸಿಂಗ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಫೋಟೋವನ್ನು ತೋರಿಸಿಕೊಂಡಿದ್ದು ಶಾಕಿಂಗ್​ ಎಂದು ಶೇನ್​ ಶಿವೇಯಿ ಹೇಳಿದ್ದಾರೆ.

ನೊಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೆಂದು ಬೀಜಿಂಗ್​ ಏರ್​ಪೋರ್ಟ್​ ಫೋಟೋ ಹಂಚಿಕೊಂಡ ಬಿಜೆಪಿ ನಾಯಕರು !; ಚೀನಾ ತಗಾದೆ
ವಿವಾದಕ್ಕೆ ಕಾರಣವಾಗಿರುವ ಚಿತ್ರ
TV9 Web
| Edited By: |

Updated on:Nov 27, 2021 | 2:11 PM

Share

ಉತ್ತರಪ್ರದೇಶದ ಜೇವಾರ್​​ನಲ್ಲಿ ನೊಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೊನ್ನೆ ತಾನೆ ಪ್ರಧಾನಮಂತ್ರಿ ನರೇಂದ್ರ ಮೋದಿ ಶಂಕು ಸ್ಥಾಪನೆ ನೆರವೇರಿಸಿದ್ದಾರೆ. ಅದರ ಬೆನ್ನಲ್ಲೇ ಕೇಂದ್ರ ಸಚಿವ ಅನುರಾಗ್ ಠಾಕೂರ್ ಸೇರಿ ಹಲವು ಕೇಂದ್ರ ಮಂತ್ರಿಗಳು, ಬಿಜೆಪಿ ಮುಖಂಡರು ತಮ್ಮ ಸೋಷಿಯಲ್​ ಮೀಡಿಯಾದಲ್ಲಿ ಒಂದು ವಿಡಿಯೋ ಶೇರ್​ ಮಾಡಿಕೊಂಡಿದ್ದಾರೆ. ಅದರಲ್ಲಿ ನೊಯ್ಡಾದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಧುನಿಕ ವ್ಯವಸ್ಥೆ ಮಾಡುವ ಬಗ್ಗೆ, ಅದರ ವಿಶೇಷತೆಗಳ ಬಗ್ಗೆ ವಿವರಿಸಲಾಗಿದೆ. ಹಾಗೇ ಕೆಲವು ಫೋಟೋಗಳನ್ನು ಬಳಸಲಾಗಿದೆ. ಆದರೆ ಈ ವಿಡಿಯೋ,  ನೋಡಿದ ಚೀನಾ ತಗಾದೆ ತೆಗೆದಿದೆ. ವಿಡಿಯೋದಲ್ಲಿ ನೊಯ್ಡಾ ವಿಮಾನ ನಿಲ್ದಾಣ ಎಂದು ಹೇಳಿ ಬಳಸಿಕೊಳ್ಳಲಾದ ಫೋಟೋ ಬೀಜಿಂಗ್​ನ ಡ್ಯಾಕ್ಸಿಂಗ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ್ದು ಎಂದು ಚೀನಾ ಸರ್ಕಾರದ ಮಾಧ್ಯಮ ಗ್ಲೋಬಲ್​ ಟೆಲಿವಿಷನ್​ ನೆಟ್ವರ್ಕ್​​ ಹೇಳಿದೆ.

ಈ ಬಗ್ಗೆ ಧ್ವನಿ ಎತ್ತಿದವರು ಗ್ಲೋಬಲ್​ ಟೆಲಿವಿಷನ್​ ನೆಟ್ವರ್ಕ್​​ನ ಪತ್ರಕರ್ತ ಶೇನ್​ ಶಿವೇಯಿ ಎಂಬುವರು. ಭಾರತ ಸರ್ಕಾರ ತಾನು ಮೂಲಸೌಕರ್ಯ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ತೋರಿಸಿಕೊಳ್ಳಲು ಬೀಜಿಂಗ್​ನ ಡ್ಯಾಕ್ಸಿಂಗ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಫೋಟೋವನ್ನು ತೋರಿಸಿಕೊಂಡಿದ್ದು ಶಾಕಿಂಗ್​ ಎಂದು ಬರೆದುಕೊಂಡಿದ್ದಾರೆ. ಹಾಗೇ, ಸೋಷಿಯಲ್ ಮೀಡಿಯಾದಲಲ್ಲಿ ಶೇರ್​ ಮಾಡಿಕೊಂಡಿರವು ಬಿಜೆಪಿ ನಾಯಕರ ಹೆಸರಿನ ಸಹಿತ ಅವರ ಪೋಸ್ಟ್​ಗಳ ಸ್ಕ್ರೀನ್​ಶಾಟ್​ ತೆಗೆದು ಎಲ್ಲವನ್ನೂ ಕೊಲ್ಯಾಜ್ ಮಾಡಿ ಶೇರ್ ಮಾಡಿದ್ದಾರೆ. ಹಾಗೇ, 2017ರಲ್ಲಿ ಗಾರ್ಡಿಯನ್​​ನಲ್ಲಿ ಪ್ರಕಟವಾಗಿದ್ದ ಬೀಜಿಂಗ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಚಿತ್ರವನ್ನೂ ಶೇರ್ ಮಾಡಿಕೊಂಡಿದ್ದಾರೆ.

ಅನುರಾಗ್ ಠಾಕೂರ್ ಶೇರ್​ ಮಾಡಿರುವ ವಿಡಿಯೋ

ಇದನ್ನೂ ಓದಿ: ಮೈಸೂರು: ಕೇರಳದಲ್ಲಿ ನೊರೊ ವೈರಸ್ ಪತ್ತೆ, ಕರ್ನಾಟಕದಲ್ಲಿ ಕಟ್ಟೆಚ್ಚರ; ಬಾವಲಿ ಗ್ರಾಮದಲ್ಲಿ ಮನೆಮನೆಗೆ ತೆರಳಿ ಸಮೀಕ್ಷೆ

Published On - 1:17 pm, Sat, 27 November 21

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​