AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನರ್ಹತೆ ಬಗ್ಗೆ ಜರ್ಮನಿ ಪ್ರತಿಕ್ರಿಯೆ; ಧನ್ಯವಾದ ರಾಹುಲ್ ಗಾಂಧಿ ಎಂದು ಕಾಂಗ್ರೆಸ್​​ನ್ನು ಟೀಕಿಸಿದ ಬಿಜೆಪಿ

ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ಗುರಿಯಾದ ನಂತರ ಲೋಕಸಭೆಯಿಂದ ಅನರ್ಹಗೊಂಡಿರುವ ರಾಹುಲ್ ಗಾಂಧಿ ಅವರ ಪ್ರಕರಣದಲ್ಲಿ ಮೂಲಭೂತ ಪ್ರಜಾಪ್ರಭುತ್ವ ತತ್ವಗಳು ಅನ್ವಯಿಸಬೇಕು ಎಂದು ಜರ್ಮನಿ ಗುರುವಾರ ಹೇಳಿದ ನಂತರ ವಿವಾದ ಭುಗಿಲೆದ್ದಿದೆ

ಅನರ್ಹತೆ ಬಗ್ಗೆ ಜರ್ಮನಿ ಪ್ರತಿಕ್ರಿಯೆ; ಧನ್ಯವಾದ ರಾಹುಲ್ ಗಾಂಧಿ ಎಂದು ಕಾಂಗ್ರೆಸ್​​ನ್ನು ಟೀಕಿಸಿದ ಬಿಜೆಪಿ
ರಾಹುಲ್ ಗಾಂಧಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Mar 30, 2023 | 6:53 PM

Share

ಮುಖ್ಯಾಂಶಗಳು

  • ಕಾಂಗ್ರೆಸ್ ಪಕ್ಷವನ್ನು ಟೀಕಿಸಿದ ಕೇಂದ್ರ ಸಚಿವ ಕಿರಣ್ ರಿಜಿಜು ಮತ್ತು ಅನುರಾಗ್ ಠಾಕೂರ್
  • ರಾಹುಲ್ ದೇಶೀಯ ವ್ಯವಹಾರಗಳಲ್ಲಿ ವಿದೇಶಿ ಹಸ್ತಕ್ಷೇಪವನ್ನು ಬಯಸುತ್ತಾರೆ ಎಂದು ಆರೋಪ
  • ರಾಹುಲ್ ಗಾಂಧಿ ಅಂತಹ ಹಸ್ತಕ್ಷೇಪವನ್ನು ಬಯಸಿದ ಉದಾಹರಣೆಗಳನ್ನು ನೀಡುವಂತೆ ಬಿಜೆಪಿಗೆ ಸವಾಲು ಹಾಕಿದ ಕಾಂಗ್ರೆಸ್

ದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅನರ್ಹತೆ ಕುರಿತು ಜರ್ಮನಿಯ (Germany) ಪ್ರತಿಕ್ರಿಯೆಯ ಬಗ್ಗೆ ಬಿಜೆಪಿ (BJP) ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಭಾರತದ ಆಂತರಿಕ ವಿಷಯಗಳಲ್ಲಿ ಹಸ್ತಕ್ಷೇಪ ಮಾಡಲು ವಿದೇಶಿ ಶಕ್ತಿಗಳನ್ನು ಆಹ್ವಾನಿಸುತ್ತಿದೆ ಎಂದು ಆರೋಪಿಸಿದೆ. ಕೇಂದ್ರ ಸಚಿವ ಕಿರಣ್ ರಿಜಿಜು ಮತ್ತು ಅನುರಾಗ್ ಠಾಕೂರ್ ಟ್ವೀಟ್ ಮೂಲಕ ರಾಹುಲ್ ಗಾಂಧಿಯನ್ನು ಟೀಕಿಸಿದ್ದು ರಾಹುಲ್ ದೇಶೀಯ ವ್ಯವಹಾರಗಳಲ್ಲಿ ವಿದೇಶಿ ಹಸ್ತಕ್ಷೇಪವನ್ನು ಬಯಸುತ್ತಾರೆ ಎಂದು ಮತ್ತೊಮ್ಮೆ ಆರೋಪಿಸಿದ್ದಾರೆ. ಆದಾಗ್ಯೂ ಕಾಂಗ್ರೆಸ್ ಈ ಆರೋಪವನ್ನು ತಳ್ಳಿಹಾಕಿದ್ದು, ರಾಹುಲ್ ಗಾಂಧಿ ಅಂತಹ ಹಸ್ತಕ್ಷೇಪವನ್ನು ಬಯಸಿದ ಉದಾಹರಣೆಗಳನ್ನು ನೀಡುವಂತೆ ಬಿಜೆಪಿಗೆ ಸವಾಲು ಹಾಕಿದೆ. ರಾಹುಲ್ ಗಾಂಧಿ ಅವರು ವಿದೇಶದಲ್ಲಿ ತಮ್ಮ ಕಾರ್ಯಕ್ರಮದಲ್ಲಿ ಭಾರತದ ವ್ಯವಹಾರಗಳ ಸ್ಥಿತಿಯ ಬಗ್ಗೆ ಮಾತ್ರ ಮಾತನಾಡುತ್ತಿದ್ದಾರೆ ಅವರು ಯಾರ ಸಹಾಯವನ್ನು ಕೇಳುತ್ತಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ಗುರಿಯಾದ ನಂತರ ಲೋಕಸಭೆಯಿಂದ ಅನರ್ಹಗೊಂಡಿರುವ ರಾಹುಲ್ ಗಾಂಧಿ ಅವರ ಪ್ರಕರಣದಲ್ಲಿ ಮೂಲಭೂತ ಪ್ರಜಾಪ್ರಭುತ್ವ ತತ್ವಗಳು ಅನ್ವಯಿಸಬೇಕು ಎಂದು ಜರ್ಮನಿ ಗುರುವಾರ ಹೇಳಿದ ನಂತರ ವಿವಾದ ಭುಗಿಲೆದ್ದಿದೆ.ಭಾರತದ ವಿರೋಧ ಪಕ್ಷದ ರಾಜಕಾರಣಿ ರಾಹುಲ್ ಗಾಂಧಿ ವಿರುದ್ಧದ ಮೊದಲ ಪ್ರಕರಣದ ತೀರ್ಪನ್ನು ನಾವು ಗಮನಿಸಿದ್ದೇವೆ. ಅವರ ಸಂಸದೀಯ ಸ್ಥಾನವನ್ನು ರದ್ದು ಮಾಡಲಾಗಿದೆ. ನಮಗೆ ತಿಳಿದಿರುವಂತೆ ರಾಹುಲ್ ಗಾಂಧಿ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವವರಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜರ್ಮನ್ ವಿದೇಶಾಂಗ ಸಚಿವಾಲಯದ ವಕ್ತಾರರು ಹೇಳಿದ್ದಾರೆ.

ಈ ತೀರ್ಪು ನಿಲ್ಲುತ್ತದೆಯೇ ಮತ್ತು ಅವರ ಆದೇಶದ ಅಮಾನತು ಯಾವುದೇ ಆಧಾರವನ್ನು ಹೊಂದಿದೆಯೇ ಎಂಬುದು ನಂತರ ಸ್ಪಷ್ಟವಾಗುತ್ತದೆ” ಎಂದು ಅವರು ಹೇಳಿದರು. ನ್ಯಾಯಾಂಗ ಸ್ವಾತಂತ್ರ್ಯ ಮತ್ತು ಮೂಲಭೂತ ಪ್ರಜಾಪ್ರಭುತ್ವದ ತತ್ವಗಳ ಮಾನದಂಡಗಳು ಪ್ರಕರಣದಲ್ಲಿ ಅನ್ವಯವಾಗುತ್ತವೆ ಎಂದು ಜರ್ಮನಿ ನಿರೀಕ್ಷಿಸುತ್ತದೆ ಎಂದು ವಕ್ತಾರೆ ಹೇಳಿದ್ದರು.

ಈ ವಾರದ ಆರಂಭದಲ್ಲಿ ಅಮೆರಿಕ ಕೂಡಾ ರಾಹುಲ್ ಗಾಂಧಿ ಪ್ರಕರಣವನ್ನು ಗಮನಿಸುತ್ತಿದೆ ಮತ್ತು ಅವರು ಅಭಿವ್ಯಕ್ತಿ ಸ್ವಾತಂತ್ರ್ಯ ಸೇರಿದಂತೆ ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಹಂಚಿಕೆಯ ಬದ್ಧತೆಯ ಮೇಲೆ ಭಾರತ ಸರ್ಕಾರದೊಂದಿಗೆ ತೊಡಗಿಸಿಕೊಂಡಿದ್ದಾರೆ ಎಂದು ಹೇಳಿತ್ತು.

ಇದನ್ನೂ ಓದಿ:Video Viral: ತ್ರಿಪುರಾ ವಿಧಾನಸಭೆ ಅಧಿವೇಶನದ ವೇಳೆ ಮೊಬೈಲ್​​ನಲ್ಲಿ ಪೋರ್ನ್ ವೀಡಿಯೊ ವೀಕ್ಷಿಸಿದ ಬಿಜೆಪಿ ಶಾಸಕ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ‘ಮೋದಿ ಉಪನಾಮ’ ಹೇಳಿಕೆಗಾಗಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೊಳಗಾದ ದಿನಾಂಕದಿಂದ ಲೋಕಸಭೆಯ ಸದಸ್ಯ ಸ್ಥಾನದಿಂದ ಕಳೆದ ವಾರ ಅನರ್ಹರಾಗಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು